ಕೊಪ್ಪಳ ಜಿಲ್ಲೆಯ ಪ್ಯಾಕೇಜ್ ಟೆಂಡರ್ ರದ್ದತಿಗೆ ಸಿವಿಲ್ ಗುತ್ತಿಗೆದಾರರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ

Date:

ಕೊಪ್ಪಳ ಜಿಲ್ಲೆಯ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕೋಪಯೊಗಿ ಇಲಾಖೆ ಕರೆದಿರುವ ಪ್ಯಾಕೇಜ್ ಟೆಂಡರ್ ರದ್ದುಪಡಿಸುವಂತೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಕೊಪ್ಪಳ ಜಿಲ್ಲಾ ಸಿವಿಲ್ ಪ.ಜಾತಿ/ಪ.ಪಂಗಡದ ಗುತ್ತಿಗೆದಾರರ ಸಂಘದಿಂದ ಲೋಕೋಪಯೋಗಿ ಇಲಾಖೆ ಎದುರು ಅನಿರ್ದಿಷ್ಟಾವಧಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ

“ಕರ್ನಾಟಕ ಸರ್ಕಾರವು ಪ.ಜಾತಿ/ಪ.ಪಂಗಡ, ಹಿಂದುಳಿದ ವರ್ಗ, 2ಎ, ಮತ್ತು ಪ್ರವರ್ಗ-1ರ ಸಮುದಾಯದವರಿಗೆ ಜಾತಿವಾರು ಗುತ್ತಿಗೆದಾರರಿಗೆ‌ ಟೆಂಡರ್ ನೀಡುತ್ತಾರೆ. ಆದರೆ, ಕೊಪ್ಪಳ ಜಿಲ್ಲೆಯ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಮತ್ತು ಕಲಬುರಗಿಯ ಲೋಕೋಪಯೋಗಿ ಇಲಾಖೆಯ ಮುಖ್ಯ ಎಂಜಿನಿಯರ್ ಸೇರಿ ಪ.ಜಾತಿ/ಪ.ಪಂಗಡ, ಹಿಂದುಳಿದ, 2ಎ ಮತ್ತು ಪ್ರ.ವರ್ಗ 1 ಜಾತಿಗಳ ಗುತ್ತಿಗೆದಾರರಿಗೆ ಟೆಂಡರ್ ನೀಡುವಲ್ಲಿ ಅನ್ಯಾವೆಸಗುತ್ತಿದ್ದಾರೆಂದು ಆರೋಪಿಸಿ ಕೆಟಿಪಿಪಿ ಕಾಯ್ದೆ ಸಂಪೂರ್ಣ ಉಲ್ಲಂಘನೆ ಮಾಡಿದ್ದಾರೆ” ಎಂದು ಸಂಗದ ವಿಭಾಗೀಯ ಅಧ್ಯಕ್ಷ ಸಿದ್ದು ಮಣ್ಣನವರ ಆರೋಪಿಸಿದರು.

“ಪ.ಜಾತಿ/ಪ.ಪಂಗಡಕ್ಕೆ ಶೇ.24.10ರಷ್ಟಿದ್ದು, ಈ ನಿಯಮಾನುಸಾರ ಟೆಂಡರ್ ಕರೆಯಬೇಕು. ಆದರೆ, ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಪ.ಜಾತಿ/ಪ.ಪಂಗಡ, ಹಿಂದುಳಿದ ಸಮುದಾಯಗಳಿಗೆ ಅನ್ಯಾಯವೆಸಗುತ್ತಲೇ ಬಂದಿದ್ದಾರೆ. ಕೊಪ್ಪಳ ಕಾರ್ಯನಿರ್ವಾಹಕ ಎಂಜಿನಿಯರ್ ಮತ್ತು ಕಲಬುರಗಿ ಮಖ್ಯ ಎಂಜಿನಿಯರ್ ಸವರ್ಣೀಯ ಜನಪ್ರತಿನಿಧಿಗಳ ಕೈಗೊಂಬೆಯಾಗಿ ವರ್ತಿಸಿ ಟೆಂಡರ್ ಹಂಚಿಕೆಯಲ್ಲೂ ತಳಸಮುದಾಯಗಳಿಗೆ ಅನ್ಯಾಯ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ತೀವ್ರಗೊಂಡ ಕಾರಂಜಾ ಸಂತ್ರಸ್ತರ ಧರಣಿ : ಡಿ.18ರಂದು ಸಿಎಂ ನೇತೃತ್ವದಲ್ಲಿ ಸಭೆ

“ಪ್ಯಾಕೇಜ್ ಟೆಂಡರ್ ಕರೆದಿರುವ ಅದಿಕಾರಿಗಳು ಹಾಗೂ ಇದರಲ್ಲಿ ಮೂಗು ತೂರಿಸಿರುವ ಜನಪ್ರತಿನಿಧಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ ಪ್ಯಾಕೇಜ್ ಟೆಂಡರ್‌ ರದ್ದುಪಡಿಸುವವರೆಗೂ ಅಹೋರಾತ್ರಿ ಧರಣಿ ಸತ್ಯಾಗ್ರಹ ಕೈಬಿಡುವುದಿಲ್ಲ ಎಂದು ಗುತ್ತಿಗೆದಾರ ಮಂಜುನಾಥ ಮಿಸಲಾಪುರ ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...