ಬಾಗೇಪಲ್ಲಿ | ಸ್ಮಶಾನ ಭೂಮಿ ಒತ್ತುವರಿ ತೆರವುಗೊಳಿಸಿ; ಸಿಪಿಎಂ ಆಗ್ರಹ

Date:

ಬಾಗೇಪಲ್ಲಿ ತಾಲೂಕಿನ ಶಂಖಮವಾರಪಲ್ಲಿ ಗ್ರಾಮದ ಸ್ಮಶಾನ ಸೇರಿದಂತೆ ತಾಲೂಕಿನ ಗ್ರಾಮೀಣ ಭಾಗದ ಹಲವೆಡೆ ಸ್ಮಶಾನ ಭೂಮಿ ಮತ್ತು ನಕಾಶೆಗಳಲ್ಲಿರುವಂತೆ ಸ್ಮಶಾನಕ್ಕಿರುವ ರಸ್ತೆ, ರೈತರ ಜಮೀನುಗಳಿಗಿರುವ ದಾರಿಗಳು ಒತ್ತುವರಿಯಾಗಿದ್ದು, ಕೂಡಲೇ ಒತ್ತುವರಿ ತೆರವುಗೊಳಿಸಿ ಕ್ರಮ ಜರುಗಿಸಬೇಕೆಂದು ತಹಶೀಲ್ದಾರ್ ಕಚೇರಿಯ ಮುಂಭಾಗದಲ್ಲಿ ಸಿಪಿಎಂ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆಯನ್ನು ನಡೆಸಿದರು.‌

ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಎಂ ಮುಖಂಡ ಲಕ್ಷ್ಮಣ್ ರೆಡ್ಡಿ, ಹಲವು ಬಾರಿ ಶಂಖಮವಾರಪಲ್ಲಿ ಗ್ರಾಮದ ಸ್ಮಶಾನ ಜಾಗವನ್ನು ಬಲಾಢ್ಯರು ಒತ್ತುವರಿ ಮಾಡಿಕೊಂಡಿದ್ದು, ತೆರವುಗೊಳಿಸುವಂತೆ ಸಂಬಂಧಪಟ್ಟವರ ಗಮನಕ್ಕೆ ತರಲಾಗಿದೆ. ಆದರೂ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಹಾಗೆಯೇ ನಕಾಶೆಯಲ್ಲಿರುವಂತೆ ಸ್ಮಶಾನಕ್ಕೆ, ರೈತರ ಜಮೀನುಗಳಿಗೆ ದಾರಿಯನ್ನೂ ಕಲ್ಪಿಸದೇ, ಮೃತರ ಅಂತಿಮ ಸಂಸ್ಕಾರಕ್ಕೆ ಪರದಾಡುವಂತಾಗಿದೆ. ಹಾಗೆಯೇ ರೈತರು ಒಬ್ಬರ ಜಮೀನು ದಾಟಿ ಮತ್ತೊಬ್ಬರ ಜಮೀನುಗಳಿಗೆ ಹೋಗಲು ದಾರಿಗಳಿಲ್ಲ. ನಕಾಶೆಯಲ್ಲಿದ್ದರೂ ಕೆಲವು ಪ್ರಭಾವಿಗಳು ಒತ್ತುವರಿ ಮಾಡಿಕೊಂಡು ರೈತರಿಗೆ ತೊಂದರೆ ಮಾಡುತ್ತಿದ್ದಾರೆ. ಹಾಗಾಗಿ ಕೂಡಲೇ ಒತ್ತುವರಿ ತೆರವಿಗೆ‌ ಕ್ರಮ ಕೈಗೊಳ್ಳಬೇಕು‌‌‌ ಎಂದು ಒತ್ತಾಯಿಸಿದರು.

ಸಿಪಿಎಂ ಮಾಜಿ ಜಿಲ್ಲಾ ಕಾರ್ಯದರ್ಶಿ ಎಂ.ಪಿ ಮುನಿವೆಂಕಟಪ್ಪ ಮಾತನಾಡಿ, ಈ ಭಾಗದಲ್ಲಿ ಶವ ಸಂಸ್ಕಾರಕ್ಕೆ ಹಲವೆಡೆ ಸೂಕ್ತ ಜಾಗವಿಲ್ಲ, ಸ್ಮಶಾನ ಜಾಗವಿದ್ದರೂ ಒತ್ತುವರಿ, ನಿರ್ವಹಣೆ ಕೊರತೆ, ದಾರಿ ಇಲ್ಲದಿರುವುದು ಮುಂತಾದ ಕಾರಣಗಳಿಂದ ಜನರಿಗೆ ಸ್ಮಶಾನ ಭೂಮಿ ಇಲ್ಲವಾಗಿದೆ. ಹಾಗಾಗಿ ತಾಲೂಕಿನೆಲ್ಲೆಡೆ ಸ್ಮಶಾನ ಜಾಗಗಳನ್ನು ಗುರುತಿಸಿ, ಅವುಗಳ ಸಂರಕ್ಷಣೆಗೆ ಕ್ರಮ ಜರುಗಿಸಬೇಕು. ಹಾಗೇಯೆ ಶಂಖಮವಾರಪಲ್ಲಿ ಸ್ಮಶಾನ ಜಾಗದ ಒತ್ತುವರಿ ತೆರವುಗೊಳಿಸಬೇಕು. ಇಲ್ಲದಿದ್ದರೆ ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಹಾಲಿನ ದರ ಹೆಚ್ಚಳಕ್ಕೆ ಆಗ್ರಹಿಸಿ ಫೆ.10ರಂದು ರೈತ ಸಂಘ ಬೃಹತ್‌ ಪ್ರತಿಭಟನೆ

ಈ ವೇಳೆ ಸಿಪಿಎಂ ಮುಖಂಡರಾದ ರಘುರಾಮರೆಡ್ಡಿ, ಚನ್ನರಾಯಪ್ಪ, ಬಿಳ್ಳೂರು ನಾಗರಾಜ್, ಸೋಮಶೇಖರ್, ಗ್ರಾಮಸ್ಥರಾದ ಎಸ್.ಎನ್.ಆದಿನಾರಾಯಣಪ್ಪ, ಹರೀಶ, ನಾರಾಯಣ ಸ್ವಾಮಿ, ನಂಜುಂಡಪ್ಪ, ಗಂಗಪ್ಪ, ವೆಂಕಟೇಶಪ್ಪ, ಗುರ್ರಪ್ಪ, ಗಂಗರಾಜು, ಸಿ.ಬಾವನ್ನಾ, ನಾಗರಾಜ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...