ನರಸಾಪುರ ಕೆರೆ ಒತ್ತುವರಿ ತೆರವುಗೊಳಿಸಿ : ಸಚಿವ ಬೋಸರಾಜು ಸೂಚನೆ

Date:

  • ಕ್ರೀಡಾ ಇಲಾಖೆಗೆ ಬೋಟಿಂಗ್‌ಗೆ ಕಲ್ಪಿಸುವ ಬಗ್ಗೆ ಚರ್ಚಿಸಿ ಕ್ರಮ
  • ಕೆ.ಸಿ. ವ್ಯಾಲಿ ಜಲಶುದ್ಧೀಕರಣ ಘಟಕ, ಕೆರೆ ವೀಕ್ಷಿಸಿದ ಸಚಿವ

ಕೋಲಾರ ಜಿಲ್ಲೆಯ ನರಸಾಪುರ ಕೆರೆಯ ಒತ್ತುವರಿ ತೆರವುಗೊಳಿಸಬೇಕು ಹಾಗೂ ತ್ಯಾಜ್ಯವನ್ನು ತೆಗೆಯುವಂತೆ ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್. ಬೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೋಲಾರದ ಕೆರೆಗಳನ್ನು ತುಂಬಿಸುವ ಕೆಸಿ ವ್ಯಾಲಿ ಯೋಜನೆ ಸ್ಥಳಕ್ಕೆ ಮತ್ತು ಬೆಂಗಳೂರಿನ ಅತಿದೊಡ್ಡ ಕೆರೆಯಾದ ಬೆಳ್ಳಂದೂರು ಕೆರೆಯ ಸ್ಥಳಕ್ಕೆ ಭೇಟಿ ನೀಡಿದ ವೇಳೆ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಕೋಲಾರ ಜಿಲ್ಲೆಯ ನರಸಾಪುರ ಕೆರೆಯಲ್ಲಿ ಕ್ರೀಡಾ ಇಲಾಖೆಗೆ ಬೋಟಿಂಗ್‌ಗೆ ಅವಕಾಶ ನೀಡಿದ್ದು, ಅದನ್ನು ಸಹ ಬೇಗ ಆರಂಭಿಸುವ ಕುರಿತಂತೆ ಆ ಇಲಾಖೆಯವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜಿಸಿದ ಕೆ.ಸಿ. ವ್ಯಾಲಿ ಯೋಜನೆ ಈಗ ಕಾರ್ಯಗತಗೊಂಡಿದೆ. ಇಡೀ ಭಾರತದಲ್ಲಿಯೇ ವಿಶಿಷ್ಟ ಎಂದು ಬಿಂಬಿಸಲಾದ ಕೆ.ಸಿ. ವ್ಯಾಲಿ ಯೋಜನೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ವರದಾನವಾಗಿದೆ. ಈ ಮುಂಚೆ ಸುಮಾರು ಸಾವಿರ ಅಡಿ ಕೊರೆದರೂ ಕೊಳವೆ ಬಾವಿಗಳಲ್ಲಿ ನೀರು ದೊರೆಯದ ಸ್ಥಿತಿ ಇತ್ತು. ನೀರು ಸಂಸ್ಕರಿಸುವ ಈ ಯೋಜನೆಯಿಂದಾಗಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ 126 ಕೆರೆಗಳು ಕಳೆದ ನಾಲ್ಕು ವರ್ಷಗಳಿಂದ ಭರ್ತಿಯಾಗಿ, ಈಗ ಅಂತರ್ಜಲ ಮಟ್ಟ ಹೆಚ್ಚಾಗಿದೆ. ಇದರಿಂದ ರೈತರು ಸಂತಸದಲ್ಲಿ ಇದ್ದಾರೆ. ಇನ್ಣೂ ಏನಾದರೂ ಸುಧಾರಣಾ ಕ್ರಮಗಳಿದ್ದರೆ ಅದನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಈ ಯೋಜನೆಯ ಕಾರ್ಯಗತವಾದ ಹಿನ್ನೆಲೆಯಲ್ಲಿ ವೃಷಭಾವತಿ ವ್ಯಾಲಿ ಕೊಳಚೆ ನೀರು ಸಂಸ್ಕರಿಸಿ ತುಮಕೂರು, ಚಿಕ್ಕಬಳ್ಳಾಪುರ, ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ ಸೇರಿ ಒಟ್ಟು 259 ಕೆರೆಗಳ ಭರ್ತಿಗೆ 1081 ಕೋಟಿ ರೂ. ಕ್ರಿಯಾ ಯೋಜನೆಗೆ ಮಂಜೂರಾತಿ ದೊರೆತಿದ್ದು, ಮೊದಲ ಹಂತದಲ್ಲಿ 70 ಕೆರೆಗಳ ಭರ್ತಿಗೆ ಕ್ರಮ ವಹಿಸಲಾಗುವುದು ಎಂದು ಬೋಸರಾಜು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಶಾಸಕರಿಗೆ ತರಬೇತಿ | ಸಂಪನ್ಮೂಲ ವ್ಯಕ್ತಿಗಳ ಬಗ್ಗೆ ಮರುಪರಿಶೀಲಿಸಿ: ಸಭಾಧ್ಯಕ್ಷರಿಗೆ ರಮೇಶ್‌ ಬಾಬು ಪತ್ರ

ಈ ಸಂದರ್ಭದಲ್ಲಿ ಮಾಲೂರು ಶಾಸಕ ಕೆ.ವೈ. ನಂಜೇಗೌಡ, ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ನೀರಾವರಿ ಇಲಾಖೆಯ ಕಾರ್ಯದರ್ಶಿ ಜಿ.ಇ. ಯತೀಶ್‌ಚಂದ್ರನ್, ಮುಖ್ಯ ಅಭಿಯಂತರ ರಾಘವನ್ ಸೇರಿದಂತೆ ಒಳಚರಂಡಿ ಮಂಡಳಿಯ ಗಂಗಾಧರ್ ಸೇರಿದಂತೆ ಉಭಯ ಇಲಾಖೆಯ ಹಲವು ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...