ಹಾವೇರಿ | ಅವಕಾಶ ನೀಡಿದರೆ ಸ್ವಂತ ಖರ್ಚಿನಲ್ಲಿ ಮೋಡ ಬಿತ್ತನೆ: ಶಾಸಕ ಪ್ರಕಾಶ್ ಕೋಳಿವಾಡ್

Date:

ರಾಜ್ಯದಲ್ಲಿ ನಿರೀಕ್ಷಿಸಿದ ಮಟ್ಟಕ್ಕೆ ಮುಂಗಾರು ಮಳೆ ಸುರಿದಿಲ್ಲ. ಹಾವೇರಿ ಜಿಲ್ಲೆಯಲ್ಲಿಯೂ ಮುಂಗಾರು ಆಗಮನ ತಡವಾಗಿದೆ. ಈ ಹಿನ್ನೆಲೆ ರಾಣೆಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ್ ಅವರು, ಮೋಡ ಬಿತ್ತನೆಗೆ ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ರಾಣೆಬೆನ್ನೂರ್ ಶಾಸಕ ಪ್ರಕಾಶ್ ಕೋಳಿವಾಡ್ ಸ್ವಂತ ಮೋಡ ಬಿತ್ತನೆ ವಿಮಾನ ಹೊಂದಿದ್ದಾರೆ. ಜಿಲ್ಲಾಧಿಕಾರಿ ಪ್ರಯೋಗಾರ್ಥವಾಗಿ ಮೋಡ ಬಿತ್ತನೆ ನಡೆಸಲು ಅನುಮತಿ ನೀಡಬೇಕು ಎಂದು ಅವರು ಪತ್ರದಲ್ಲಿ ಕೋರಿದ್ದಾರೆ.

ಈಗಾಗಲೇ ಕೇಂದ್ರ ಸರ್ಕಾರದ ಸಂಬಂಧಪಟ್ಟ ಇಲಾಖೆಯ ಅನುಮತಿ ಪಡೆದು ಮೋಡಬಿತ್ತನೆ ವಿಮಾನ ಪರವಾನಗಿ ಪಡೆಯಲು ಎಲ್ಲ ಸಿದ್ದತೆ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಅನುಮತಿ ನೀಡಿದರೆ ಹಾವೇರಿ ಜಿಲ್ಲೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಚಿತವಾಗಿ ಮೋಡಬಿತ್ತನೆ ಮಾಡುವುದಾಗಿ ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೋಡ ಇದ್ದರೆ ಮಾತ್ರ ಮೋಡ ಬಿತ್ತನೆ ಮಾಡಲು ಬರುತ್ತೆ, ಅದರಿಂದ ಮಳೆಯಾಗುತ್ತೆ. 2015 ರಲ್ಲಿಯೂ ಸಹ ಬರಗಾಲ ಬಂದಾಗ ನಾನು ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಮಾಡಿದ್ದೆ. ವಿಧಾನಸಭೆ ಚುನಾವಣೆ ವೇಳೆ ಈ ಕುರಿತಂತೆ ಜಿಲ್ಲೆಯ ಪ್ರಣಾಳಿಕೆಯಲ್ಲಿ ಸಹ ಅಂಶ ಸೇರಿಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ವಾಡಿಕೆಯಷ್ಟು ಮಳೆ ಆಗಿಲ್ಲ. ಮೇ 25 ರಂದು ಕೇರಳಕ್ಕೆ ಆಗಮನವಾಗಬೇಕಿದ್ದ ಮುಂಗಾರು ತಡವಾಗಿದೆ. ಇದರಿಂದ ರಾಜ್ಯಕ್ಕೆ ಸಹ ಮುಂಗಾರು ತಡವಾಗಿ ಪ್ರವೇಶಿಸಿದೆ. ಹಾಗಾಗಿ ಮಳೆ ಆಶ್ರಯಿಸಿ ಜಮೀನುಗಳಲ್ಲಿ ಬಿತ್ತನೆ ಮಾಡಬೇಕಾಗಿದ್ದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲೆಯಲ್ಲಿ ಮೋಡಬಿತ್ತನೆ ಮಾಡಲು ನಮ್ಮ ಸಂಸ್ಥೆಗೆ ಅನುಮತಿ ನೀಡಿ ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಹೀನಾಯ ಸೋಲಿಗೆ ಕಾರಣನಾದ ನಾಮಕಾವಸ್ಥೆ ಅಧ್ಯಕ್ಷ ಕಟೀಲ್: ಕಾಂಗ್ರೆಸ್‌

ಜಿಲ್ಲಾಧಿಕಾರಿಗಳು ಅನುಮತಿ ನೀಡುತ್ತಿದ್ದಂತೆ ಅದನ್ನು ದೆಹಲಿಯ ಕೇಂದ್ರ ಸರ್ಕಾರ ಹವಾಮಾನ ಇಲಾಖೆಗೆ ತಿಳಿಸಬೇಕು. ಇದಕ್ಕಾಗಿ ಸಂಸ್ಥೆಯ ಇಬ್ಬರು ಸಿಬ್ಬಂದಿ ಈಗಾಗಲೇ ದೆಹಲಿಯಲ್ಲಿದ್ದಾರೆ. ಈ ಎಲ್ಲ ಇಲಾಖೆಗಳ ಅನುಮತಿ ಸಿಕ್ಕರೆ ಜುಲೈ ಒಂದರಂದು ಜಿಲ್ಲೆಯಲ್ಲಿ ಸ್ವಂತ ಖರ್ಚಿನಲ್ಲಿ ಮೋಡ ಬಿತ್ತನೆ ಮಾಡಲಾಗುವುದು ಎಂದಿದ್ದಾರೆ.

ನಮ್ಮ ಕಂಪನಿಯ ಕೆಲಸವೇ ಇದಾಗಿದ್ದರಿಂದ ನನಗೆ ಕಡಿಮೆ ಖರ್ಚಿನಲ್ಲಿ ಮೋಡ ಬಿತ್ತನೆ ಸಾಧ್ಯವಾಗುತ್ತದೆ. ಬೇರೆಯವರಾದರೆ ಅಧಿಕ ಖರ್ಚಾಗುತ್ತದೆ. ಮೋಡ ಬಿತ್ತನೆ ಕಂಪನಿಗಳಿವೆ. ಆದರೆ, ವಿಮಾನ ಇರುವುದು ನನ್ನ ಬಳಿ ಮಾತ್ರ. ಅಮೆರಿಕದಲ್ಲಿ ಮೋಡಬಿತ್ತನೆ ಮಾಡಿದ್ದ ವಿಮಾನ ತನ್ನ ಬಳಿ ಇದೆ ಎಂದು ಶಾಸಕ ಪ್ರಕಾಶ್ ಕೋಳಿವಾಡ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...