ವರ್ಚುವಲ್‌ ಮೂಲಕ ಒಂಬತ್ತು ಹೊಸ ವಿಶ್ವವಿದ್ಯಾಲಯ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

Date:

  • ಮುಂದಿನ ಐದು ವರ್ಷಗಳಲ್ಲಿ ಎಲ್ಲ ಸಂಸ್ಥೆಗಳು ಐಐಟಿ ಮಾದರಿಯಲ್ಲಿ ಇರಲಿವೆ
  • ಜಗತ್ತಿನ ಉನ್ನತ ವಿವಿಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ: ಸಿಎಂ

ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಒಂಬತ್ತು ನೂತನ ವಿಶ್ವವಿದ್ಯಾಲಯಗಳಿಗೆ ವರ್ಚುವಲ್‌ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, “ಇಂದು ಆರಂಭಿಸಿರುವ ಎಲ್ಲ ವಿಶ್ವವಿದ್ಯಾಲಯಗಳು ಮುಂದಿನ ಭವಿಷ್ಯ ಬರೆಯುವ ಕೇಂದ್ರಗಳು. ನಮ್ಮ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದೆ. ಈ ರೀತಿಯ ವಿಶ್ವ ವಿದ್ಯಾಲಯಗಳು ದೇಶದಲ್ಲಿಯೇ ಪ್ರಥಮವಾಗಿ ಪ್ರಾರಂಭವಾಗಿವೆ. ಮುಂದಿನ ದಿನಗಳಲ್ಲಿ ಎಲ್ಲರೂ ಕರ್ನಾಟಕದ ಮಾದರಿ ಅಳವಡಿಸಿಕೊಳ್ಳುವಂತಾಗಬೇಕು” ಎಂದರು.

“ದೇಶದಲ್ಲಿ ಉನ್ನತ ಶಿಕ್ಷಣ ಅಂದರೆ ಐಐಟಿ. ಅದಕ್ಕೆ ಸಿಇಟಿ ಮೂಲಕ ಆಯ್ಕೆ ಆಗಬೇಕು. ನಮ್ಮ ಮಕ್ಕಳೂ  ಐಐಟಿ ಮಾದರಿಯಲ್ಲಿ ಶಿಕ್ಷಣ ಪಡೆಯಬೇಕು ಎಂದು  ಕೆಐಟಿ ಸ್ಥಾಪನೆ ಮಾಡಲಾಗಿದೆ. ಮುಂದಿನ ಐದು ವರ್ಷಗಳಲ್ಲಿ ಎಲ್ಲ ಸಂಸ್ಥೆಗಳು  ಐಐಟಿ ಮಾದರಿಯಲ್ಲಿ ಇರಲಿವೆ.  ಐಐಟಿ ಹುಡುಕಿಕೊಂಡು ಹೋಗುವ ಬದಲು ಇಲ್ಲಿಯೇ  ಐಐಟಿ ಸೃಷ್ಟಿಸುತ್ತಿದ್ದೇವೆ. ಜಗತ್ತಿನ ಉನ್ನತ  ವಿವಿಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಈ ಸುದ್ದಿ ಓದಿದ್ದೀರಾ? ಮಾಡಾಳ್‌ ವಿರೂಪಾಕ್ಷಪ್ಪರನ್ನು ತನಿಖಾಧಿಕಾರಿ ಮುಂದೆ ಹಾಜರುಪಡಿಸಿದ ಲೋಕಾಯುಕ್ತ ಪೊಲೀಸ್‌

ವಿದ್ಯಾರ್ಥಿಗಳು ನಾಡಿನ ಭವಿಷ್ಯ. ಈಗ 21 ನೇ ಶತಮಾನ ಜ್ಞಾನದ ಶತಮಾನ. ಮುಂದಿನ ದಿನಗಳಲ್ಲಿ ಭಾರತ ವಿಶ್ವ ಗುರುವಾಗಲಿದೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ವಿಶ್ವ ನಾಯಕರಾಗಿ ಹೊರ ಹೊಮ್ಮಿದ್ದಾರೆ. ಪಾಕಿಸ್ತಾನದ ಪ್ರಜೆಗಳು ಮೋದಿಯಂಥ  ಪ್ರಧಾನಿ ಬೇಕು ಅಂತ ಹೇಳುತ್ತಿದ್ದಾರೆ. ಚೀನಾನ ಕೂಡ ಭಾರತ ಕೊರೊನಾ ನಿಯಂತ್ರಣ ಮಾಡಿದ್ದನ್ನು ಮೆಚ್ಚಿಕೊಂಡಿದೆ” ಎಂದರು.

ಉನ್ನತ ಶಿಕ್ಷಣ ಸಚಿವ ಸಿ ಎನ್ ಅಶ್ವತ್ಥನಾರಾಯಣ, ಸಚಿವ ಮುರುಗೇಶ ನಿರಾಣಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಸೇರಿದಂತೆ ಇತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...