ಇಲಾಖೆಗಳಲ್ಲಿನ ಬೇಕಾಬಿಟ್ಟಿ ವರ್ಗಾವಣೆಗೆ ಕಡಿವಾಣ ಹಾಕಿದ ಸಿಎಂ ಸಿದ್ದರಾಮಯ್ಯ

Date:

  • ವರ್ಗಾವಣೆ ಮಾಡಬೇಕಾದರೆ ಮುಖ್ಯಮಂತ್ರಿಯ ಅನುಮೋದನೆ ಕಡ್ಡಾಯ
  • ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಸುತ್ತೋಲೆ

ಸಾರ್ವತ್ರಿಕ ವರ್ಗಾವಣೆ ಅವಧಿ ಜುಲೈ 3ಕ್ಕೆ ಮುಗಿದಿದ್ದು, ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆ ಮಾಡಬೇಕಾದರೆ ಮುಖ್ಯಮಂತ್ರಿಯ ಅನುಮೋದನೆ ಕಡ್ಡಾಯ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಪರ ಕಾರ್ಯದರ್ಶಿ ಜೆ ಡಿ ಮಧುಚಂದ್ರ ತೇಜಸ್ವಿ ಈ ಸುತ್ತೋಲೆ ಹೊರಡಿಸಿದ್ದು, “ಮುಖ್ಯಮಂತ್ರಿ ಅನುಮೋದನೆ ಪಡೆಯದೇ ನೌಕರರ ವರ್ಗಾವಣೆ ಮಾಡಿದರೆ ಅದಕ್ಕೆ ಆಯಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಇಲಾಖಾ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು” ಎಚ್ಚರಿಸಲಾಗಿದೆ.

ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣಾ ಅವಧಿ ಮುಗಿದಿದ್ದರೂ ಕೆಲ ಇಲಾಖೆಗಳು ನಿಗದಿತ ಶೇ.6ಕ್ಕಿಂತ ಹೆಚ್ಚು ವರ್ಗಾವಣೆ ಮಾಡಿದ್ದು, ವರ್ಗಾವಣೋತ್ತರ ಅನುಮೋದನೆಗೆ ಕಡತ ಮಂಡಿಸಲಾಗಿದೆ. ಇದು ನಿಯಮ ಬಾಹಿರ, ಆಡಳಿತಾತ್ಮಕ ಕಾರಣಗಳಿಗಾಗಿ ವರ್ಗಾವಣೆ ಅನಿವಾರ್ಯವಾದರೆ, ಸಕಾರಣಗಳನ್ನು ನೀಡಿ ಮುಖ್ಯಮಂತ್ರಿ ಅನುಮತಿ ಪಡೆಯಬೇಕು ಎಂದು ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾವುದೇ ರೀತಿಯ ಅವಧಿಪೂರ್ವ ವರ್ಗಾವಣೆಗಳನ್ನು ಹಾಗೂ ಸಾಮಾನ್ಯ ವರ್ಗಾವಣಾ ಅವಧಿ ಮುಗಿದ ನಂತರ ಯಾವುದೇ ವರ್ಗಾವಣೆಗಳನ್ನು ಸರ್ಕಾರಿ ನೌಕರರು ಒಂದು ಸ್ಥಳದಲ್ಲಿರಬಹುದಾದ ಅವಧಿ ವಿಸ್ತರಿಸಿ ಮಾಡುವ ವರ್ಗಾವಣೆ ಮಾಡುವ ಮುನ್ನ ಸಚಿವಾಲಯದ ಆಡಳಿತ ಇಲಾಖೆಗಳು ಮುಖ್ಯಮಂತ್ರಿಯ ಅನುಮೋದನೆಯನ್ನು ತಪ್ಪದೇ ಪಡೆಯಬೇಕು” ಎಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಲಿತ  ಪ್ರಾಧ್ಯಾಪಕಿಯ ಮೇಲೆ ಸಹೋದ್ಯೋಗಿಗಳು- ವಿದ್ಯಾರ್ಥಿಗಳಿಂದ ಹಲ್ಲೆ; ಎತ್ತ ಸಾಗುತ್ತಿದೆ ಭಾರತ?

“ಸರ್ಕಾರದ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿ ಯಾವುದೇ ಪ್ರಸಂಗದಲ್ಲಿಯೂ ಮೊದಲು ವರ್ಗಾವಣೆ ಮಾಡಿ ನಂತರ ಮುಖ್ಯಮಂತ್ರಿಯವರ ಘಟನೋತ್ತರ ಅನುಮೋದನೆ ಪಡೆಯಬೇಕು. ಈಗಾಗಲೇ 2023ರ ಮೇ 30ರಿಂದ ಜೂನ್ 30ರವರೆಗೆ 2023-24ನೇ ಸಾಲಿಗೆ ಗ್ರೂಪ್ ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ರಷ್ಟನ್ನು ಮೀರದಂತೆ ಜೂನ್ 1ರಿಂದ ಜುಲೈ 3ರ ವರೆಗೆ ಸಾರ್ವತ್ರಿಕ ವರ್ಗಾವಣೆಗಳನ್ನು ಕೈಗೊಳ್ಳಲು ಇಲಾಖಾ ಸಚಿವರಿಗೆ ಅಧಿಕಾರ ನೀಡಿ ಆದೇಶಿಸಲಾಗಿತ್ತು. ಆದರೆ, ನಿಗದಿತ ವರ್ಗಾವಣೆ ನಂತರವೂ ಇಲಾಖೆ ಹಂತದಲ್ಲಿ ವರ್ಗಾವಣೆಗಳನ್ನು ಮಾಡಿದರೆ ನಂತರ ಘಟನೋತ್ತರ ಅನುಮೋದನೆಗಾಗಿ ಪ್ರಸ್ತಾವಗಳನ್ನು ಮುಖ್ಯಮಂತ್ರಿಗೆ ಸಲ್ಲಿಸಬೇಕು. ಇದನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ” ಎಂದು ಸುತ್ತೋಲೆಯಲ್ಲಿ ವಿವರಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...