ಕಾಂಗ್ರೆಸ್‌ ಸಿದ್ಧಾಂತ ಒಪ್ಪಿಕೊಂಡು ಯಾರು ಬರುತ್ತಾರೋ ಬರಲಿ: ಮುಕ್ತ ಆಹ್ವಾನ ನೀಡಿದ ಸಿಎಂ ಸಿದ್ದರಾಮಯ್ಯ

Date:

  • ರಾಜ್ಯದಲ್ಲಿ ಬಿಜೆಪಿ ಎಲ್ಲಿದೆ? ಪೂರ್ತಿ ದಿವಾಳಿಯಾಗಿದೆ: ಸಿದ್ದರಾಮಯ್ಯ
  • ಈವರೆಗೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿಗೆ ಸಾಧ್ಯವಾಗಿಲ್ಲ

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿರುವ ನಾಯಕರು ಮರಳಿ ಕಾಂಗ್ರೆಸ್‌ ಸೇರ್ಪಡೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ನಮ್ಮ ಪಕ್ಷ ಬಿಟ್ಟವರು ಮಾತ್ರವಲ್ಲ, ಕಾಂಗ್ರೆಸ್‌ ಸಿದ್ಧಾಂತ ಒಪ್ಪಿಕೊಂಡು ಬರುವ ಎಲ್ಲರಿಗೂ ನಾನು ಸ್ವಾಗತಿಸುತ್ತೇನೆ” ಎಂದು ಮುಕ್ತ ಆಹ್ವಾನ ನೀಡಿದರು.

“ರಾಜ್ಯದಲ್ಲಿ ಬಿಜೆಪಿ ಎಲ್ಲಿದೆ? ಪೂರ್ತಿ ದಿವಾಳಿಯಾಗಿದೆ. ಈವರೆಗೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿಗೆ ಸಾಧ್ಯವಾಗಿಲ್ಲ. ಹೊಸ ಸರ್ಕಾರ ರಚನೆಯಾಗಿ 100 ದಿನ ಕಳೆಯಿತು. ಆದರೂ ವಿರೋಧ ಪಕ್ಷದ ನಾಯಕ ಇಲ್ಲ ಅಂದರೆ ಯೋಚನೆ ಮಾಡಿ. ರಾಜ್ಯದ ಇತಿಹಾಸದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ರಾಜ್ಯದಲ್ಲಿ ಬಿಜೆಪಿ ಇನ್ನೂ ದಿವಾಳಿ ಆಗಲಿದೆ” ಎಂದು ಭವಿಷ್ಯ ನುಡಿದರು.

“ಪ್ರಧಾನಿ ನರೇಂದ್ರ ಮೋದಿ ಅವರೇ ಭೇಟಿಗೆ ಬರಬೇಡಿ ಎಂದಿದ್ದರು. ಆ ಪ್ರಕಾರ ನಾವು ನಡೆದುಕೊಂಡಿದ್ದೇವೆ. ಬಿಜೆಪಿಯವರಿಗೆ ಕೆಲಸವಿಲ್ಲ, ಸುಕಾಸುಮ್ಮನೇ ಆರೋಪಗಳನ್ನು ಮಾಡುತ್ತಾರೆ” ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೂರು ದಿನ ಮೈಸೂರು ಪ್ರವಾಸ ಕೈಕೊಂಡಿರುವೆ. ಕೆಡಿಪಿ ಸಭೆ ಇದೆ. ನಾಳೆ ಸುತ್ತೂರಿನಲ್ಲಿ ಒಂದು ಕಾರ್ಯಕ್ರಮವಿದೆ. ಹಾಗೆಯೇ ನಾಲ್ಕನೇ ಗ್ಯಾರಂಟಿ ‘ಗೃಹಲಕ್ಷ್ಮಿ’ ಅನುಷ್ಠಾನ ಕಾರ್ಯಕ್ರಮ ಮೈಸೂರಿನಲ್ಲಿದೆ. ನಮ್ಮ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಾನು ಅಧ್ಯಕ್ಷತೆ ವಹಿಸಿಕೊಳ್ಳುವೆ. ರಾಹುಲ್‌ ಗಾಂಧಿ ಉಪಸ್ಥಿತಿ ಇರಲಿದ್ದಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳ ವಿಲೀನ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ: ಸಚಿವ ಮಧು ಬಂಗಾರಪ್ಪ

“ದೇಶದಲ್ಲೇ ದೊಡ್ಡ ಕಾರ್ಯಕ್ರಮ ಗೃಹಲಕ್ಷ್ಮಿ. ಸುಮಾರು 32 ಸಾವಿರ ಕೋಟಿ ರೂ. ಒಂದು ವರ್ಷಕ್ಕೆ ಖರ್ಚು ಆಗಲಿದೆ. ಈ ವರ್ಷ 18 ಸಾವಿರ ಕೋಟಿ ರೂ. ಖರ್ಚು ಆಗುತ್ತಿದೆ. 1.33 ಕೋಟಿ ಕುಟುಂಬದ ಯಜಮಾನಿಗೆ 2000 ರೂ. ಕೊಡುತ್ತಿದ್ದೇವೆ. ಐದು ಕಾರ್ಯಕ್ರಮ ಜಾರಿಯಾದ ಮೇಲೆ 4-5 ಸಾವಿರ ರೂ. ಒಂದು ಕುಟುಂಬಕ್ಕೆ ಲಾಭವಾಗಲಿದೆ. ಅವರ ಕೈಯಲ್ಲಿ ದುಡ್ಡು ಆಡುವುದರಿಂದ ಆರ್ಥಿಕ ಚಟುವಟಿಕೆ ಜಾಸ್ತಿ ಆಗಲಿದೆ. ಜೊತೆಗೆ ಉದ್ಯೋಗ ಸೃಷ್ಟಿಯಾಗಲಿದೆ” ಎಂದರು.

“ರಾಜ್ಯ ಸರ್ಕಾರದ ಕಾರ್ಯಕ್ರಮವಾಗಿ ಗೃಹಲಕ್ಷ್ಮಿ ಜಾರಿ ಅನುಷ್ಠಾನ ಮೈಸೂರಿನಲ್ಲಿ ನಡೆಯುತ್ತಿದೆ. ನಂತರ ಎಲ್ಲ ಜಿಲ್ಲೆಗಳಲ್ಲೂ ಕಾರ್ಯಕ್ರಮ ನಡೆಯಲಿದೆ. ಬರ ವಿಚಾರವಾಗಿ ಕ್ಯಾಬಿನೆಟ್‌ ಸಬ್‌ ಕಮಿಟಿ ಇದೆ. ಅದರ ವರದಿ ನಂತರ ಬರಗಾಲ ಎಂದು ಘೋಷಿಸುತ್ತೇವೆ. ನಂತರ ಕೇಂದ್ರ ಸರ್ಕಾರದ ಅಧಿಕಾರಿಗಳು ಬಂದು ವೀಕ್ಷಣೆ ಮಾಡುತ್ತಾರೆ. ಬರಗಾಲ ಘೋಷಣೆಯಾದ ಮೇಲೆ ಜನರಿಗೆ ಕೆಲಸ ಕೊಡಲು ಆರಂಭಿಸುತ್ತೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...