ನಾನು ಗೆಲ್ಲುವಲ್ಲಿ ಮೈಸೂರು ಭಾಗದ ವಕೀಲರ ಕೊಡುಗೆ ಇದೆ: ಸಿಎಂ ಸಿದ್ದರಾಮಯ್ಯ

Date:

  • ಮೈಸೂರು ವಕೀಲರ ಸಂಘ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿಮತ
  • ಮೈಸೂರು ಭಾಗದ ಬಹುತೇಕ ವಕೀಲರು ನನ್ನ ಪರವಾಗಿ ಕೆಲಸ ಮಾಡಿದ್ದಾರೆ: ಸಿಎಂ

ನಾನು ಗೆಲ್ಲಬೇಕೆಂದು ಶುಭ ಹಾರೈಸಿ, ದೇವರಲ್ಲಿ ಪ್ರಾರ್ಥನೆ ಮಾಡಿದವರು ಹಾಗೂ ನೇರವಾಗಿ ನನ್ನ ಪರವಾಗಿ ಕೆಲಸ ಮಾಡಿದವರು ಇದ್ದಾರೆ. ಈ ಬಾರಿ ಗೆಲ್ಲಲು ಮೈಸೂರು ಭಾಗದ ವಕೀಲರ ಕೊಡುಗೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು ವಕೀಲರ ಸಂಘದ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಕಾನೂನನ್ನು ಗಂಭೀರವಾಗಿ ಪರಿಗಣಿಸದೆ ಇದ್ದುದರಿಂದ ಎರಡು ಬಾರಿ ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾದೆ. ಮೈಸೂರು ಭಾಗದ ಬಹುತೇಕ ವಕೀಲರು ನನ್ನ ಪರವಾಗಿ ಕೆಲಸ ಮಾಡಿದ್ದಾರೆ” ಎಂದರು.

“ಅವಕಾಶ ವಂಚಿತ ಜನರಿಗೆ ಅವಕಾಶ ದೊರೆತಾಗ ಮತ್ತು ಸಾಮಾಜಿಕ, ಆರ್ಥಿಕ ಸಬಲತೆ ಬಂದಾಗ ಮಾತ್ರ ಸ್ವಾತಂತ್ರ್ಯ ದೊರೆತದ್ದಕ್ಕೆ ಸಾರ್ಥಕವಾಗುತ್ತದೆ. ಈ ದಿಕ್ಕಿನಲ್ಲಿ ಸ್ವಲ್ಪವಾದರೂ ಪ್ರಯತ್ನ ಮಾಡೋಣ ಎಂದು ನಾನು ರಾಜಕೀಯಕ್ಕೆ ಬಂದೆ. ಮುಖ್ಯಮಂತ್ರಿಯಾಗುವ ಅವಕಾಶ ದೊರೆತಾಗ ಸಾಮಾಜಿಕ ನ್ಯಾಯ ದೊರಕುವಂತೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಐದು ಗ್ಯಾರಂಟಿಗಳನ್ನು ಮೂರು ತಿಂಗಳಲ್ಲಿ ನಾಲ್ಕು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಕವಿ ದಿ. ಸಿದ್ದಲಿಂಗಯ್ಯನವರು ಕವನಗಳ ಮೂಲಕ ಜನರನ್ನು ಜಾಗೃತಗೊಳಿಸುವ ಕೆಲಸ ಮಾಡಿದ್ದಾರೆ. ಯಾರಿಗೆ ಬಂತು ಎಲ್ಲಿಗೆ ಬಂತು 47ರ ಸ್ವಾತಂತ್ರ್ಯ ಎಂದು ಪ್ರಶ್ನಿಸಿದ್ದಾರೆ. ಸ್ವಾತಂತ್ರ್ಯ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಬಂದಾಗ ಮಾತ್ರ ನಿಜವಾಗಿಯೂ ಸ್ವಾತಂತ್ರ್ಯ ದೊರೆತಂತಾಗುತ್ತದೆ. ಅದಾನಿ ಅಂಬಾನಿಗಳಿಗೆ ಬಂದಿರುವ ಸ್ವಾತಂತ್ರ್ಯ ಕಾಳ, ಬೋರ, ತಿಮ್ಮನಿಗೂ ಬಂದರೆ ದೇಶಕ್ಕೆ ಸ್ವಾತಂತ್ರ್ಯ ಬಂದಂತೆ. ಕೊಂಡುಕೊಳ್ಳುವ ಸಾಮರ್ಥ್ಯ ಎಲ್ಲರಿಗೂ ಬಂದಾಗ ಮಾತ್ರ ದೇಶಕ್ಕೆ ಸ್ವಾತಂತ್ರ್ಯ ದೊರೆತಂತಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಕ್ಕೆ ನೂರು, ಸಮಸ್ಯೆ ನೂರಾರು

ಸಾಮಾಜಿಕ ನ್ಯಾಯ ದೊರಕಿಸಲು ಗಟ್ಟಿ ಹೆಜ್ಜೆ

“1.28 ಕೋಟಿ ಕುಟುಂಬಗಳ ಮನೆಯ ಯಜಮಾನಿಯರಿಗೆ 2000 ರೂ.ಗಳನ್ನು ನೀಡುವ ಗೃಹಲಕ್ಷ್ಮೀ ಯೋಜನೆ ಜಾರಿಯಾಗುತ್ತಿದೆ. ಇದರಿಂದ ಬಡವರಿಗೆ ಬೆಲೆ ಏರಿಕೆಯ ಬಿಸಿಯಿಂದ ಸ್ವಲ್ಪವಾದರೂ ಸಹಾಯ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಆ ಮೂಲಕ ಸಾಮಾಜಿಕ ನ್ಯಾಯ ದೊರಕಿಸಲು ಗಟ್ಟಿಯಾದ ಹೆಜ್ಜೆಗಳನ್ನು ಇಡುವ ಪ್ರಯತ್ನ ಮಾಡುತ್ತಿದ್ದೇವೆ” ಎಂದರು.

ಹೆಚ್.ಗಂಗಾಧರನ್ ಚಿತ್ರ ಅನಾವರಣ

“ಹೆಚ್.ಗಂಗಾಧರನ್ ಅವರ ಚಿತ್ರವನ್ನು ಅನಾವರಣ ಮಾಡಿದ್ದು, ಅವರು ರಾಜಕಾರಣದಲ್ಲಿದ್ದು ಹಾಗೂ ಸ್ವಲ್ಪ ಕಾಲ ವಕೀಲರಾಗಿಯೂ ಕೆಲಸ ಮಾಡಿದ್ದರು. ಒಳ್ಳೆಯ ವ್ಯಕ್ತಿಯಾಗಿದ್ದ ಅವರು ಎಲ್ಲರನ್ನೂ ಗೌರವದಿಂದ ಕಾಣುತ್ತಿದ್ದರು. ಶಾಸಕರಾಗಿದ್ದ ಸಂದರ್ಭದಲ್ಲಿ ಒಟ್ಟಿಗೆ ಆಯ್ಕೆಯಾಗಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು ಅವರ ಚಿತ್ರವನ್ನು ಅನಾವರಣ ಮಾಡಿರುವುದು ಉತ್ತಮ ಕೆಲಸ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...