ವಿಶೇಷ ಅನುದಾನ ಬಿಡುಗಡೆ ಕೋರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಸಿಎಂ ಪತ್ರ

Date:

  • ಸಚಿವೆ ನಿರ್ಮಲಾ ಸೀತಾರಾಮನ್​​ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ
  • ’15ನೇ ಹಣಕಾಸು ಆಯೋಗದ ಶಿಫಾರಸ್ಸು ಕೇಂದ್ರ ಸರ್ಕಾರ ಪರಿಗಣಿಸಿಲ್ಲ’

15ನೇ ಹಣಕಾಸು ಆಯೋಗದ ಶಿಫಾರಸಿನಂತೆ ವಿಶೇಷ ಅನುದಾನ ಮತ್ತು ರಾಜ್ಯದ ವಿಶೇಷ ಅನುದಾನ ಬಿಡುಗಡೆ ಕೋರಿ ಕೇಂದ್ರ ಹಣಕಾಸುಮ ಸಚಿವೆ ನಿರ್ಮಲಾ ಸೀತಾರಾಮನ್​​ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ರಾಜ್ಯಕ್ಕೆ ಇದುವರೆಗೆ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ ಮತ್ತು ತೆರಿಗೆ ಹಂಚಿಕೆಯಲ್ಲಿ ತೀವ್ರ ಕಡಿತ ಮಾಡಲಾಗಿದೆ. ಈಗಾಗಲೇ ಸಂಕಷ್ಟದಲ್ಲಿರುವ ರಾಜ್ಯದ ಹಣಕಾಸಿನ ಸ್ಥಿತಿಗೆ ಇದು ದೊಡ್ಡ ಹಿನ್ನಡೆಯಾಗಿದೆ ಎಂದು ಸಿದ್ಧರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.

15ನೇ ಹಣಕಾಸು ಆಯೋಗದ 2021-21ರ ಪ್ರಕಾರ ವಿಶೇಷ ಅನುದಾನವಾಗಿ 5,495 ಕೋಟಿ ರೂ. ಶಿಫಾರಸು ಆಗಿತ್ತು. ಆದರೆ ರಾಜ್ಯಕ್ಕೆ ಯಾವುದೇ ವಿಶೇಷ ಅನುದಾನ ಈವರೆಗೂ ಬಿಡುಗಡೆಯಾಗಿಲ್ಲ. ಹಾಗಾಗಿ ಕೂಡಲೇ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಸಿಎಂ ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

15ನೇ ಹಣಕಾಸು ಆಯೋಗದ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರ ಪರಿಗಣಿಸಿಲ್ಲ. ರಾಜ್ಯದ ಸಂಪನ್ಮೂಲಗಳು ಮತ್ತು ಕೇಂದ್ರ ಸರ್ಕಾರದ ಹಣಕಾಸಿನ ಬದ್ಧತೆಗಳನ್ನು ಗಮನದಲ್ಲಿಟ್ಟುಕೊಂಡು, ವಿಶೇಷ ಅನುದಾನಗಳ ಶಿಫಾರಸನ್ನು ಸೂಕ್ತವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.

CM

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕದ ಮಾದರಿಯಿಂದ ಜನರ ಬದುಕು ಸಂಪನ್ನವಾಗಲಿ

“2021-26 ಹಣಕಾಸು ಆಯೋಗ 6 ಸಾವಿರ ಕೋಟಿ ರೂ. ಬೆಂಗಳೂರಿನ ನೀರಾವರಿ ಕಾಮಗಾರಿ ಹಾಗೂ ಪೆರಿಫೆರಲ್ ರಸ್ತೆ ನಿರ್ಮಾಣಕ್ಕೆ ನೀಡಿತ್ತು. ಆದರೆ ಯಾವುದೇ ಅನುದಾನ ಕರ್ನಾಟಕ ಸರ್ಕಾರಕ್ಕೆ ನೀಡಿಲ್ಲ. ಇದರಿಂದ ರಾಜ್ಯದ ಹಣಕಾಸು ಸ್ಥಿತಿಗೆ ಹಿನ್ನಡೆ ಆಗಿದೆ. ರಾಜ್ಯದ ಹಣಕಾಸು ಸ್ಥಿತಿಯನ್ನು ಅರ್ಥಮಾಡಿಕೊಂಡು ವಿಶೇಷ ಅನುದಾನ ಮತ್ತು ನಿರ್ದಿಷ್ಟ ಅನುದಾನ ನೀಡಲು ಆದ್ಯತೆ ನೀಡಬೇಕು” ವಿನಂತಿಸಿಕೊಂಡಿದ್ದಾರೆ.

ತೆರಿಗೆ ಹಂಚಿಕೆ ಪಾಲು ಕಡಿಮೆ

“2011-12ರಲ್ಲಿ ಐಟಿ ಸಂಬಂಧಿತ ಸೇವೆಗಳಲ್ಲಿ ರಾಜ್ಯದ ಜಿಎಸ್‌ಡಿಪಿ ಗಣನೀಯವಾಗಿ ಹೆಚ್ಚಳವಾಗಿದೆ. ಆದರೂ ಐಟಿ ಸೇವೆಗಳ ರಫ್ತು ಶೂನ್ಯ ದರವನ್ನು ಹೊಂದಿರುವುದರಿಂದ ರಾಜ್ಯದ ತೆರಿಗೆಗಳಿಗೆ ಈ ಸೇವೆಗಳು ಯಾವುದೇ ಸಹಕಾರಿಯಾಗಿಲ್ಲ. 14 ನೇ ಹಣಕಾಸು ಆಯೋಗದ ಶಿಫಾರಸಿಗೆ ಹೋಲಿಸಿದರೆ 15 ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ತೆರಿಗೆ ಹಂಚಿಕೆ ಪಾಲು ಕಡಿಮೆಯಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯಕ್ಕೆ ಒಟ್ಟು ತೆರಿಗೆ ಹಂಚಿಕೆಯಲ್ಲಿ 37,011 ಕೋಟಿ ರೂ. ಕಡಿಮೆ ಮಾಡಿದೆ” ಎಂದು ಉಲ್ಲೇಖಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...