ಉಡುಪಿ | ಕರಾವಳಿಯಲ್ಲಿ ಎರಡು ದಿನ ರೆಡ್‌ ಅಲರ್ಟ್‌ ಘೋಷಣೆ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

Date:

ರಾಜ್ಯ ಕರಾವಳಿಯ ಮೂರು ಜಿಲ್ಲೆಗಳಿಗೆ ಜು.20, 21ರಂದು ರೆಡ್ ಅಲರ್ಟ್ ಹಾಗೂ ನಂತರದ ಐದು ದಿನಗಳಲ್ಲಿ ಆರೆಂಜ್ ಅಲರ್ಟ್‌ನ್ನು ಹವಾಮಾನ ಇಲಾಖೆ ಘೋಷಿಸಿದೆ. ಈ ಸಂದರ್ಭದಲ್ಲಿ ಭಾರೀ ಮಳೆಯ ಸಾದ್ಯತೆಯನ್ನು ಅದು ನೀಡಿದೆ. ಮುಂದಿನ ಎರಡು ದಿನಗಳ ಕಾಲ ಗಂಟೆಗೆ 30ರಿಂದ 40ಕಿ.ಮೀ. ವೇಗದ ಗಾಳಿಯೊಂದಿಗೆ ಭಾರೀ ಮಳೆ ಸುರಿಯಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಅದು ಎಚ್ಚರಿಸಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು ಸರಾಸರಿ 28.4ಮಿ.ಮೀ. ಮಳೆ ದಾಖಲಾಗಿದೆ. ಕಾಪುವಿನಲ್ಲಿ ಅತ್ಯಧಿಕ 56.5ಮಿ.ಮೀ. ಮಳೆಯಾದರೆ ಉಡುಪಿಯಲ್ಲಿ 37.3, ಹೆಬ್ರಿಯಲ್ಲಿ 32.7, ಕಾರ್ಕಳದಲ್ಲಿ 30.6, ಬೈಂದೂರಿ ನಲ್ಲಿ 29.1, ಬ್ರಹ್ಮಾವರದಲ್ಲಿ 26.4ಮಿಮೀ. ಮಳೆಯಾಗಿದೆ. ದಿನದಲ್ಲಿ ಕಾಪು ತಾಲೂಕಿನ ಹೆಜಮಾಡಿ, ಬೆಳಪು ಹಾಗೂ ನಡ್ಪಾಲು ಅಲ್ಲದೇ ಕುಂದಾಪುರದ ಕೋಣಿಯಲ್ಲಿ ತಲಾ ಒಂದು ಮನೆಗಳಿಗೆ ಹಾನಿಯಾಗಿದ್ದು 1.5 ಲಕ್ಷ ರೂ.ಗಳ ನಷ್ಟದ ಅಂದಾಜು ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...