ಕೊಪ್ಪಳ | ಚುನಾವಣಾ ನೀತಿ ಸಂಹಿತೆ ಸಮರ್ಪಕ ಜಾರಿಗೆ ಜಿಲ್ಲಾಧಿಕಾರಿ ಸೂಚನೆ

Date:

  • ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳೊಂದಿಗೆ ಸಂವಾದ
  • ಷರತ್ತು ಉಲ್ಲಂಘಿಸಿ ಸಭೆ – ಸಮಾರಂಭ ನಡೆಸುವ ಬಗ್ಗೆ ಗಮನ ಹರಿಸಿ

ಕೊಪ್ಪಳ ಜಿಲ್ಲೆಯಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಸಹಕರಿಸಬೇಕು. ಮಾದರಿ ನೀತಿ ಸಂಹಿತೆ ಸಮರ್ಪಕ ಜಾರಿಗೆ ಒತ್ತು ಕೊಡಬೇಕು. ಈ ನಿಟ್ಟಿನಲ್ಲಿ ಚುನಾವಣಾ ಅಕ್ರಮಗಳ ಮೇಲೆ ವಿಶೇಷ ನಿಗಾ ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ ಸುಂದರೇಶ ಬಾಬು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಜಿಲ್ಲಾಡಳಿತ ಭವನದಲ್ಲಿನ ಕೊಪ್ಪಳ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು, ಪೊಲೀಸ್ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು.

ಚುನಾವಣೆ ಹಿನ್ನೆಲೆ ಜಿಲ್ಲೆಯಾದ್ಯಂತ ಈಗಾಗಲೇ ಗಲವೆಡೆ ಸ್ಥಾಪಿಸಿದ 14 ಚೆಕ್ ಪೋಸ್ಟ್‌ಗಳಲ್ಲಿ ವಾಹನ ತಪಾಸಣೆಯನ್ನು ಬಿಗಿಗೊಳಿಸಬೇಕು. ಪ್ರತಿಯೊಂದು ವಾಹನವನ್ನು ತಪಾಸಣೆಗೆ ಒಳಪಡಿಸಬೇಕು. ತಪಾಸಣೆ ವೇಳೆ ಹಣ ಮತ್ತು ವಸ್ತುಗಳು ದೊರೆತಲ್ಲಿ ಪೂರಕವಾದ ದಾಖಲೆಗಳಿದ್ದರೆ ಮಾತ್ರ ಅನುಮತಿ ಕೊಡಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೂಕ್ತ ದಾಖಲೆಗಳಿಲ್ಲದೇ ಅಕ್ರಮವಾಗಿ ಸಾಗಣೆ ಮಾಡುತ್ತಿರುವುದು ಪರಿಶೀಲನೆ ವೇಳೆ ಗೊತ್ತಾದಲ್ಲಿ ಅಂತಹ ಹಣ ಮತ್ತು ವಸ್ತುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಬೇಕು. ಪೊಲೀಸ್ ಮತ್ತು ಅಬಕಾರಿ ದಾಳಿಗಳನ್ನು ಸಹ ತೀವ್ರಗೊಳಿಸಬೇಕು ಎಂದು ಸೂಚಿಸಿದರು.

ಚೆಕ್‌ಪೋಸ್ಟ್‌ಗಳಲ್ಲಿ ವಿಶೇಷವಾಗಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಪಾತ್ರ ಪ್ರಮುಖವಾಗಿದೆ. ಅಕ್ರಮಗಳ ಬಗ್ಗೆ ಸಣ್ಣ ಸುಳಿವು ಸಿಕ್ಕಲ್ಲಿ ಕೂಡಲೇ ಕಾರ್ಯಪ್ರವೃತ್ತರಾಗಬೇಕು. ಚೆಕ್‌ಪೋಸ್ಟ್ ತಪ್ಪಿಸಿ ಬೇರೆ ಮಾರ್ಗದಲ್ಲಿ ಅಕ್ರಮವಾಗಿ ಹಣ ಸಾಗಿಸುವ ಸಾಧ್ಯತೆ ಇದ್ದು, ಇಂತಹ ಅಕ್ರಮಗಳ ಬಗ್ಗೆ ಮಾಹಿತಿ ಕಲೆ ಹಾಕಿ ದಾಳಿ ನಡೆಸಿ, ಅಕ್ರಮಗಳನ್ನು ಹತ್ತಿಕ್ಕಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಈ ಸುದ್ದಿ ಓದಿದ್ದೀರಾ? ಪ್ರಜಾಪ್ರಭುತ್ವದಲ್ಲಿ‌ ಜನರೇ ಜನಾರ್ಧನರು, ಮೋದಿ ದೇವರಲ್ಲ: ಸಿದ್ದರಾಮಯ್ಯ

ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆಯ ಮಾತನಾಡಿ, ಅನುಮತಿ ಪಡೆಯದೇ ಅಥವಾ ಷರತ್ತುಗಳನ್ನು ಉಲ್ಲಂಘಿಸಿ ಸಭೆ – ಸಮಾರಂಭಗಳು ನಡೆಯುವುದರ ಬಗ್ಗೆ ಗಮನ ಹರಿಸಬೇಕು. ಎಲ್‌ಇಡಿ ವಾಹನ ಮೂಲಕ ಪ್ರಚಾರ, ಆಟೋ ಮೂಲಕ ಪ್ರಚಾರವನ್ನು ನಿಯಮಾನುಸಾರ ಅನುಮತಿ ಪಡೆಯದೇ ನಡೆಸುವುದು ಗೊತ್ತಾದಲ್ಲಿ, ಚುನಾವಣೆಗೆ ಸಂಬಂಧಿಸಿದ ಪ್ರಚಾರ ರ‍್ಯಾಲಿ ಮತ್ತು ಇನ್ನೀತರ ಕಾರ್ಯಕ್ರಮಗಳನ್ನು ನಡೆಸುವಾಗ ನಿಯಮ ಉಲ್ಲಂಘನೆ ಮಾಡುವುದು ಕಂಡು ಬಂದಲ್ಲಿ ಕ್ರಮ ವಹಿಸಬೇಕು ಎಂದು ನಿರ್ದೇಶಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಮಾತನಾಡಿ, ಕಾಲಕಾಲಕ್ಕೆ ವಿಡಿಯೋ ಸಂವಾದ ನಡೆಸಿ ನಿರ್ದೇಶನ ನೀಡಿದಂತೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಚೆಕ್‌ಪೋಸ್ಟ್ ಸೇರಿದಂತೆ ಇನ್ನೀತರ ಕಡೆಗಳಲ್ಲಿ ವಿಶೇಷ ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸಬೇಕು. ಬೇರೆ ಬೇರೆ ಕಾಯಿದೆಗಳ ಬಗ್ಗೆ ಅರಿತು ನಿಯಮಾನುಸಾರ ಪ್ರಕರಣ ದಾಖಲಿಸಿಕೊಂಡು ನಿರ್ವಹಣೆ ಮಾಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ, ಹಲವು ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...