ಭೋವಿ ಸಮುದಾಯಕ್ಕೆ ಅವಮಾನ ಮಾಡಿಲ್ಲ: ಸಿದ್ದರಾಮೇಶ್ವರ ಶ್ರೀಗಳ ಭೇಟಿಯಾದ ಹಾಸ್ಯನಟ ಹುಲಿ ಕಾರ್ತಿಕ್

Date:

“ಅಂದಿನ ನಮ್ಮ ಶೋನಲ್ಲಿ ಹೊಂಡ ಎನ್ನುವ ಶಬ್ದ ಅತಿಯಾದ ಧ್ವನಿವರ್ಧಕ ಅಥವಾ ಸಭಾಂಗಣದ ಅತಿಯಾದ ಶಬ್ದದಿಂದ ಅಪಾರ್ಥವಾಗಿ ಬಿಂಬಿತವಾಗಿದೆ. ನಮ್ಮ ಉದ್ದೇಶ ಎಲ್ಲರನ್ನೂ ನಗಿಸುವುದಷ್ಟೇ. ಯಾರನ್ನೂ ನೋಯಿಸುವುದಲ್ಲ. ಸರಿಯಾಗಿ ಕೇಳದೆ ಸಮುದಾಯಕ್ಕೆ ಅವಮಾನವಾಗಿದೆ ಎಂಬಂತೆ ಬಿಂಬಿಸಲಾಗಿದೆ. ಆದರೆ ಕಾರ್ಯಕ್ರಮದಲ್ಲಿ ಬಳಕೆಯಾದ ಶಬ್ದವೇ ಬೇರೆ ಇದೆ” ಎಂದು ಹಾಸ್ಯನಟ ಹುಲಿ ಕಾರ್ತಿಕ್ ಭೋವಿಪೀಠದ ಸಿದ್ದರಾಮೇಶ್ವರ ಶ್ರೀಗಳಿಗೆ ಖಚಿತಪಡಿಸಿದರು.

ಕಲರ್ಸ್ ಕನ್ನಡ ವಾಹಿನಿಯ ಕಾಮಿಡಿ ಶೋ ಒಂದರಲ್ಲಿ ಭೋವಿ ಸಮುದಾಯಕ್ಕೆ ಅವಮಾನ ಆಗುವಂತೆ ಮಾತನಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲಾದ ಹಿನ್ನೆಲೆಯಲ್ಲಿ ಹಾಸ್ಯನಟ ಹುಲಿ ಕಾರ್ತಿಕ್, ಶಿವು, ನಂದೀಶ್ ಮತ್ತಿತರರು ಚಿತ್ರದುರ್ಗ ಸಮೀಪದ ಭೋವಿ ಗುರುಪೀಠಕ್ಕೆ ಆಗಮಿಸಿ, ಪೀಠದ ಶ್ರೀಗಳನ್ನು ಭೇಟಿಯಾಗಿ ಈ ಕುರಿತಂತೆ ಮಾಹಿತಿ ನೀಡಿ ಮಾತುಕತೆ ನಡೆಸಿದರು.

WhatsApp Image 2024 10 11 at 5.02.45 PM

ಭೋವಿ ಜನಾಂಗಕ್ಕೆ ಯಾವಾಗಲೂ ನೋವಾಗುವಂತೆ ಮಾತನಾಡಿಲ್ಲ. ಒಂದು ವೇಳೆ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. ನಾವೆಲ್ಲ ಬಡವರ ಮಕ್ಕಳಾಗಿದ್ದು, ಈಗ ಕಷ್ಟಪಟ್ಟು ಸ್ವಲ್ಪ ಸ್ವಲ್ಪವೇ ಮೇಲೆ ಬರುತ್ತಿದ್ದೇವೆ. ಈಗ ತಾನೆ ಅವಕಾಶಗಳು ಒಂದೊಂದಾಗಿ ಬರುತ್ತಿವೆ. ಇಂಥ ಹೊತ್ತಿನಲ್ಲಿ ದೂರು ದಾಖಲಾಗಿರುವುದು ಕಷ್ಟವಾಗುತ್ತಿದೆ ಎಂದು ನಟ ಹುಲಿ ಕಾರ್ತಿಕ್ ಪರಿಸ್ಥಿತಿಯನ್ನು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮೇಶ್ವರ ಶ್ರೀಗಳು, ಕಲಾವಿದರಲ್ಲಿ ಜಾತಿ ಧರ್ಮ ಭೇದವಿಲ್ಲ. ಎಲ್ಲರನ್ನೂ ಒಂದೇ ರೀತಿ ನೋಡಲಾಗುತ್ತದೆ. ಬಡವರ ಮಕ್ಕಳು ಕಷ್ಟಪಟ್ಟು ಬೆಳೆಯುತ್ತಿದ್ದಾರೆ. ಬಡವರ ಮಕ್ಕಳು ಬೆಳೆಯಬೇಕು. ವಡ್ಡ ಎನ್ನುವ ಶಬ್ದ ಪ್ರಯೋಗವಾಗಿದೆ ಎಂದು ನಮ್ಮ ಸಮಾಜದ ಕೆಲವು ಶಿಷ್ಯರು ದೂರು ದಾಖಲಿಸಿದ್ದಾರೆ. ಇದಕ್ಕೆ ಮನನೊಂದಿರುವ ನಟ ಹುಲಿ ಕಾರ್ತಿಕ್ ಹಾಗೂ ಇತರರು ನಮ್ಮನ್ನು ಭೇಟಿಯಾಗಿ ನೋವು ಹಂಚಿಕೊಂಡು, ಅಂದಿನ ವಿಚಾರವನ್ನು ವಿವರಿಸಿದ್ದಾರೆ. ಇದನ್ನು ದೊಡ್ಡದು ಮಾಡುವುದು ಬೇಡ. ಇಲ್ಲಿಗೆ ಬಿಟ್ಟುಬಿಡುವುದು ಸೂಕ್ತ ಎಂದು ಅಭಿಪ್ರಾಯ ಪಟ್ಟಿದ್ದೇವೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಉಡುಪಿ | ಅಂಬೇಡ್ಕರ್, ದಲಿತರಿಗೆ ಅವಮಾನಿಸಿದ ಸಂಘಪರಿವಾರದ ಮುಖಂಡ ಉಮೇಶ್ ನಾಯ್ಕ: ಬಂಧನಕ್ಕೆ ದಲಿತ ಮುಖಂಡರ ಆಗ್ರಹ

“ಕಾರ್ತಿಕ್ ನಿಷ್ಕಲ್ಮಷ ಹೃದಯದವರು. ಬಡತನದಿಂದ ಬಂದವರು, ಬಡವರ ಮಕ್ಕಳು ಬೆಳೆಯಬೇಕು, ಬಾಳಬೇಕು, ಮೆರೆಯಬೇಕು ಎನ್ನುವುದು ನಮ್ಮ ಗುರುಪೀಠದ ಆಶಯವಾಗಿದೆ. ಇಂತಹ ಪ್ರತಿಭೆಗಳಿಗೆ ನಮ್ಮ ಗುರುಪೀಠ ಪ್ರೋತ್ಸಾಹ ನೀಡುತ್ತದೆಯೇ ಹೊರತು ಚಿವುಟುವ ಕೆಲಸ ಮಾಡುವುದಿಲ್ಲ. ಅವರ ಜೊತೆಗೆ ನಮ್ಮ ಮಠ ಇದೆ” ಎಂದು ಧೈರ್ಯ ತುಂಬಿದರು.

ಈ ವೇಳೆ ಹುಲಿ ಕಾರ್ತಿಕ್ ಶ್ರೀಗಳನ್ನು ಭೇಟಿಯಾದ ನಂತರ ಮಾತನಾಡಿ, “ಶ್ರೀಗಳನ್ನು ಭೇಟಿ ಮಾಡಿದ್ದು, ನಮ್ಮ ಮನಸ್ಸಿನಲ್ಲಿದ್ದ ನೋವು ಮಾಯವಾಗಿ ಮನಸ್ಸು ಹಗುರವಾಗಿದೆ” ಎಂದು ಸಂತಸ ವ್ಯಕ್ತಪಡಿಸಿದರು.

ಈ ವೇಳೆ ವಿವಿಧ ಮಠಾಧೀಶರು, ಭೋವಿ ಸಮಾಜದ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ, ಮಠದ ಸಿಇಓ ಗೌನಹಳ್ಳಿ ಗೋವಿಂದಪ್ಪ, ಮುಖಂಡರಾದ ವಿ.ಎಸ್.ಹಳ್ಳಿ ಚಂದ್ರಶೇಖ‌ರ್, ರಾಘವೇಂದ್ರ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...