ಮಂಗಳೂರು | ತನ್ನ ವರ್ಗಾವಣೆ ಆದೇಶಕ್ಕೂ ಮುನ್ನ ಏಳು ಪೊಲೀಸರನ್ನು ಬೇರೆ ಠಾಣೆಗಳಿಗೆ ವರ್ಗಾಯಿಸಿದ್ದ ಕಮಿಷನರ್ ಅಗರ್ವಾಲ್!

Date:

ದ.ಕ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆ, ಇತ್ತೀಚಿನ ಬೆಳವಣಿಗೆ ಮತ್ತು ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯದ ಬಗ್ಗೆ ತೀವ್ರ ಚರ್ಚೆಯಾದ ನಂತರ ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ರಾಜ್ಯ ಸರ್ಕಾರವು ಗುರುವಾರ ವರ್ಗಾವಣೆಗೊಳಿಸಿ, ಆದೇಶ ಹೊರಡಿಸಿತ್ತು.

ಮಂಗಳೂರು ನಗರದ ನೂತನ ಪೊಲೀಸ್ ಕಮಿಷನರ್‌ ಆಗಿ ಸುಧೀರ್ ಕುಮಾರ್ ರೆಡ್ಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ಅರುಣ್ ಕೆ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿತ್ತು.

ಈ ಬೆಳವಣಿಗೆಯ ನಡುವೆಯೇ ಮಂಗಳೂರು ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ ಏಳು ಮಂದಿ ಹೆಡ್ ಕಾನ್‌ಸ್ಟೇಬಲ್‌ಗಳನ್ನು ನಿರ್ಗಮನ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಗುರುವಾರ ರಾತ್ರಿ ವರ್ಗಾವಣೆಗೊಳಿಸಿರುವ ಸಂಗತಿ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಂಕನಾಡಿ ನಗರ ಠಾಣೆಯ ಪ್ರೀತೇಶ್‌ರನ್ನು ಸಂಚಾರ ದಕ್ಷಿಣ ಠಾಣೆಗೆ, ಕೊಣಾಜೆ ಠಾಣೆಯ ರಾಜೇಶ್ ಕೆ.ಎನ್.ರನ್ನು ಕಂಕನಾಡಿ ನಗರ ಠಾಣೆಗೆ, ಸೆನ್ ಠಾಣೆಯ ಸತೀಶ್ ಎಂ ಮತ್ತು ರಾಜಾರಾಂ ಅವರನ್ನು ಸಿಸಿಬಿ ಠಾಣೆಗೆ, ಸಂಚಾರ ದಕ್ಷಿಣ ಠಾಣೆಯ ನಾಗರಾಜ ಮಲ್ಲಿಕಟ್ಟ ಅವರನ್ನು ಸಂಚಾರ ಪೂರ್ವ ಠಾಣೆಗೆ, ಸಿಸಿಬಿ ಠಾಣೆಯಲ್ಲಿದ್ದ ಸುಧೀರ್ ಕುಮಾರ್ ಮತ್ತು ಭೀಮಪ್ಪ ಸಿದ್ದಪ್ಪ ಉಪ್ಪರ್ ಅವರನ್ನು ಸೆನ್ ಠಾಣೆಗೆ ವರ್ಗಾಯಿಸಲಾಗಿದೆ.

ಈ ವರ್ಗಾವಣೆ ಆದೇಶವು ಕಮಿಷನರ್ ಅನುಪಮ್ ಅಗರ್ವಾಲ್ ಅವರು ತನ್ನ ವರ್ಗಾವಣೆ ಆದೇಶ ಬರುವುದಕ್ಕೂ ಮುನ್ನ ಮಾಡಿರುವುದು ಸದ್ಯ ಚರ್ಚೆಗೆ ಗ್ರಾಸವಾಗಿದೆ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಕಿಡಿಕಾರಿರುವ ಕಾಂಗ್ರೆಸ್ ಕಾರ್ಯಕರ್ತ ಸುನಿಲ್ ಕುಮಾರ್ ಬಜಿಲಕೇರಿ, “ತರಾತುರಿಯಲ್ಲಿ ಯಾಕಾಗಿ 7 ಜನರನ್ನ ವರ್ಗಾವಣೆ ಮಾಡಿದ್ದಾರೆ. ಯಾವುದೇ ಕೌನ್ಸೆಲಿಂಗ್ ಇಲ್ಲದೆ ವರ್ಗಾವಣೆ ಮಾಡಲು ಮೂಲ ಕಾರಣ ಏನು?” ಎಂದು ಪ್ರಶ್ನಿಸಿದ್ದಾರೆ.

“ರಾಜೇಶ್ ಎಂಬ ವ್ಯಕ್ತಿ ಮಂಗಳೂರು ಕಂಕನಾಡಿನ ಠಾಣೆಯಲ್ಲಿ ಆರು ವರ್ಷ ಕೆಲಸ ಮಾಡಿ ಅಲ್ಲಿಂದ ಕೊಣಾಜೆ ಠಾಣೆಗೆ ವರ್ಗಾವಣೆಗೊಂಡ ದಿನವೇ ಓಡಿಡಿಯಲ್ಲಿ ಕಂಕನಾಡಿಗೆ ಬಂದು, ಅಲ್ಲಿಂದ ಈಗ ಮತ್ತೆ ಅದೇ ಠಾಣೆಗೆ ಕಮಿಷನರ್ ಅವರಿಂದ ಪಕ್ಕಾ ಆರ್ಡರ್ ಮಾಡಿಸಿದ್ದಾರೆ, ಅಕ್ರಮ ವ್ಯವಹಾರ ಮಾಡುವವರ ಜೊತೆ ಒಳ್ಳೆಯ ಸಂಬಂಧದಿಂದ ಇದ್ದಾರೆಂಬ ಕಾರಣದಿಂದ ಕಮಿಷನರ್ ಇವರಿಗೆ ಉಪಕಾರ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

city police mangalore
ಅನುಪಮ್ ಅಗರ್ವಾಲ್ ಅವರಿಂದ ಅಧಿಕಾರ ಸ್ವೀಕರಿಸಿದ ಸುಧೀರ್ ಕುಮಾರ್ ರೆಡ್ಡಿ

“ಕೇವಲ ಏಳು ಜನರನ್ನು, ಇದೆಲ್ಲ ಬಿಜೆಪಿ ನಾಯಕರ ಸೂಚನೆಯಲ್ಲಿ ಮಾಡಿರುವಂತದ್ದು ಎಂಬುದು ನಮಗೆ ಕಾಣುತ್ತಿದೆ. ಹೊಸ ಕಮಿಷನರ್ ಅವರು ಈ ಆದೇಶವನ್ನು ರದ್ದು ಮಾಡುತ್ತಾರೆಂಬ ಭರವಸೆ ಇದೆ. ನ್ಯಾಯಯುತವಾಗಿ ಸುಮಾರು 250 ಜನರಲ್ ಲಿಸ್ಟ್‌ ನಲ್ಲಿ ಕೌನ್ಸಿಲಿಂಗ್ ಮಾಡಿ ಕಾನೂನು ಬದ್ಧವಾಗಿ ವರ್ಗಾವಣೆ ಮಾಡುತ್ತಾರೆಂಬ ನಂಬಿಕೆ ಇದೆ. ರಾತ್ರಿ 8 ಗಂಟೆ 11 ನಿಮಿಷಕ್ಕೆ ವರ್ಗಾವಣೆಗೊಂಡು ಹೋಗುವಾಗ ಆರ್ಡರ್ ಮಾಡಿದ್ದರ ಉದ್ದೇಶ ಏನಿರಬಹುದು? ಸುಧೀರ್ ಕುಮಾರ್ ರೆಡ್ಡಿ ಅಂತಹ ಖಡಕ್ ಅಧಿಕಾರಿ ಖಂಡಿತವಾಗಿಯೂ ಇಂತ ಆರ್ಡರ್ ರದ್ದು ಮಾಡುತ್ತಾರೆ ಎಂಬ ಭರವಸೆ ಇದೆ. ಅನೇಕ ಜನ ಇದರ ಬಗ್ಗೆ ಮಾತನಾಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

order copy
ಕಮಿಷನರ್ ಆದೇಶದ ಪ್ರತಿ & ಸುನಿಲ್ ಕುಮಾರ್ ಬಜಿಲಕೇರಿ(ಒಳಚಿತ್ರದಲ್ಲಿ)

ಮುಂದುವರಿದರು, “ಏಕಾಏಕಿಯಾಗಿ ಈ ರೀತಿ ಮಾಡಿರುವುದು ತಪ್ಪು. ಇದನ್ನು ಮಾಡಿಸಿದ ವ್ಯಕ್ತಿ ಪಕ್ಕಾ ಬಿಜೆಪಿಯವರು ಎಂಬ ಮಾಹಿತಿ ನಮಗಿದೆ. ಕಾಂಗ್ರೆಸ್ ನಾಯಕರು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ. ಸರ್ಕಾರದ ಗಮನಕ್ಕೆ ತರದೇ ಬಿಜೆಪಿ ನಾಯಕರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಕೊನೆಯ ಘಳಿಗೆಯಲ್ಲಿ ಮಾಡಿದ ವರ್ಗಾವಣೆಯನ್ನು ರದ್ದು ಮಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಸುನಿಲ್ ಕುಮಾರ್ ಬಜಿಲಕೇರಿ ಒತ್ತಾಯಿಸಿದ್ದಾರೆ.

ಈ ಬಗ್ಗೆ ಮಂಗಳೂರು ನಗರದ ನೂತನ ಪೊಲೀಸ್ ಕಮಿಷನರ್‌ ಸುಧೀರ್ ಕುಮಾರ್ ರೆಡ್ಡಿ ಏನು ಕ್ರಮ ಕೈಗೊಳ್ಳಲಿದ್ದಾರೆ ಎಂದು ಕಾದುನೋಡಬೇಕಿದೆ.

ಅಧಿಕಾರ ಸ್ವೀಕರಿಸಿಕೊಂಡ ನೂತನ ಕಮಿಷನರ್ ಹಾಗೂ ಎಸ್‌ಪಿ

ಮಂಗಳೂರು ನಗರದ ನೂತನ ಪೊಲೀಸ್ ಕಮಿಷನರ್‌ ಆಗಿ ಸುಧೀರ್ ಕುಮಾರ್ ರೆಡ್ಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಅಧೀಕ್ಷಕರಾಗಿ ಡಾ. ಅರುಣ್‌ ಕೆ ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.

arun
ನಿರ್ಗಮನ ಎಸ್‌ಪಿ ಯತೀಶ್ ಅವರಿಂದ ಅಧಿಕಾರ ಸ್ವೀಕರಿಸಿದ ಡಾ. ಅರುಣ್ ಕೆ
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...