ಉಡುಪಿ | ವೈದ್ಯ ಡಾ. ಕೀರ್ತನ್ ಉಪಾಧ್ಯರಿಂದ ಮುಸ್ಲಿಮರ ಬಗ್ಗೆ ದ್ವೇಷದ ಟ್ವೀಟ್; ಎಫ್‌ಐಆರ್ ದಾಖಲು

Date:

ಸಾಮಾಜಿಕ ಜಾಲತಾಣ ‘ಎಕ್ಸ್‌'(ಟ್ವಿಟ್ಟರ್‌)ನಲ್ಲಿ ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಾಕಾರಿ ಮತ್ತು ಪ್ರಚೋದನಾಕಾರಿಯಾಗಿ ಕಾಮೆಂಟ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಉಡುಪಿಯ ವೈದ್ಯ ಡಾ.ಕೀರ್ತನ್ ಉಪಾಧ್ಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ಲ್ಯಾಪ್ರೋಸ್ಕೋಪಿ ಶಸ್ತ್ರ ಚಿಕಿತ್ಸಾ ತಜ್ಞನಾಗಿರುವ ಡಾ.ಉಪಾಧ್ಯ ‘@Lonelystranger_  ಎಂಬ ಹೆಸರಿನ ಎಕ್ಸ್ ಖಾತೆಯನ್ನು ಹೊಂದಿದ್ದರು. ಬಲಪಂಥೀಯರನ್ನು ಬೆಂಬಲಿಸುವ ‘ಅಭಿ ಆ್ಯಂಡ್ ನೀಯು’ ಎಂಬ ಯೂಟ್ಯೂಬರ್‌ ದಂಪತಿ ಜು.13ರಂದು ‘ಎಕ್ಸ್‌’ನಲ್ಲಿ, “ಈ ಜಗತ್ತಿನಿಂದ ನೀವು ಏನಾದರೂ ಒಂದನ್ನು ಇಲ್ಲವಾಗಿಸಲು ಬಯಸುವುದಾದರೆ ಅದು ಯಾವುದು?” ಎಂದು ಪ್ರಶ್ನಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಉತ್ತರಿಸಿದ್ದ ಡಾ.ಉಪಾಧ್ಯ, ತಮ್ಮ ಖಾತೆಯಿಂದ “ಮುಸ್ಲಿಂ ಕಮ್ಯೂನಿಟಿ” ಎಂದು ಪ್ರಚೋದನಕಾರಿಯಾಗಿ ಉತ್ತರಿಸಿದ್ದರು. ಇದರ ಸ್ಕ್ರೀನ್‌ಶಾಟ್ ಸಾಮಾಜಿಕ ತಾಣಗಳಲ್ಲಿ ವೈರಲಾಗಿ ದೊಡ್ಡ ವಿವಾದ ಸೃಷ್ಟಿಯಾಗಿತ್ತು.

ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್‌ನ ಉಸ್ತುವಾರಿ ಪೊಲೀಸ್ ಉಪನಿರೀಕ್ಷಕ (ನಿಸ್ತಂತು) ಅಜ್ಮಲ್ ಇಬ್ರಾಹಿಂ ಇ.ಎ. ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಭಾರತೀಯ ನಾಗರಿಕ ಸಂಹಿತೆ ಕಲಂ 196, 353ರಂತೆ ಪ್ರಕರಣ ದಾಖಲಾಗಿದೆ.

ಡಾ. ಕೀರ್ತನ್ ಉಪಾಧ್ಯ

ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಾಕಾರಿ ಮತ್ತು ಪ್ರಚೋದನಾಕಾರಿಯಾಗಿ ಕಾಮೆಂಟ್ ಮಾಡುವ ಮೂಲಕ ಧರ್ಮ- ಧರ್ಮಗಳ ನಡುವೆ ದ್ವೇಷವನ್ನುಂಟು ಮಾಡಿ, ಕೋಮು ಸೌಹಾರ್ದತೆಗೆ ಧಕ್ಕೆ ತರಲು ಪ್ರಯತ್ನಿಸಿದ ಡಾ.ಉಪಾಧ್ಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ತಿಳಿಸಲಾಗಿದೆ.

ಖಾತೆಯೇ ಡಿಲೀಟ್!

ಡಾ. ಕೀರ್ತನ್ ಉಪಾಧ್ಯ ಅವರ ಈ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ತನ್ನ ಕಾಮೆಂಟ್‌ನ ಸ್ಕ್ರೀನ್ ಶಾಟ್ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿ, ವಿವಾದವಾಗುತ್ತಿದ್ದಂತೆಯೇ ಡಾ. ಉಪಾಧ್ಯ ತನ್ನ ಖಾತೆಯನ್ನೇ ಡಿಲೀಟ್ ಮಾಡಿದ್ದಾರೆ.

“ವೈದ್ಯ ವೃತ್ತಿಯಲ್ಲಿರುವ ವ್ಯಕ್ತಿಯೊಬ್ಬ ಇಂತಹ ಸಮುದಾಯ ದ್ವೇಷದ ಹೇಳಿಕೆ ಕೊಡುವುದು ಖಂಡನೀಯ” ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಾ. ಕೀರ್ತನ್ ಉಪಾಧ್ಯ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜನರು ಕರ್ನಾಟಕ ಡಿಜಿಪಿ ಅವರನ್ನು ಆಗ್ರಹಿಸಿ, ಹಲವರು ಟ್ವೀಟ್ ಮಾಡಿದ್ದಾರೆ.

“ಡಾ. ಕೀರ್ತನ್ ಉಪಾಧ್ಯ ತಾನು ಮಾಡಿದ್ದ ವಿವಾದಾತ್ಮಕ ಟ್ವೀಟ್ ಅನ್ನು ಡಿಲೀಟ್ ಮಾಡಿ ತನ್ನ ಎಕ್ಸ್ ಖಾತೆಯನ್ನೂ ಲಾಕ್ ಮಾಡಿ ಅವರ ಯಾವುದೇ ಟ್ವೀಟ್ ಅನ್ನು ನೋಡಲು ಆಗದಂತೆ ಮಾಡಿದ್ದಾರೆ” ಎಂದು ಆಲ್ಟ್‌ನ್ಯೂಸ್‌ನ ಪತ್ರಕರ್ತ ಮೊಹಮ್ಮದ್ ಝುಬೇರ್ ಹೇಳಿದ್ದಾರೆ.

ಡಾ. ಕೀರ್ತನ್ ಉಪಾಧ್ಯ ಅವರು ಇನ್ನೊಂದು ಟ್ವೀಟ್ ಮಾಡಿ ಯಾರೋ ತನ್ನ ಖಾತೆಯನ್ನು ಹ್ಯಾಕ್ ಮಾಡಿ ಅಂತಹ ಟ್ವೀಟ್ ಮಾಡಿದ್ದಾರೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

“ಡಾ. ಕೀರ್ತನ್ ಉಪಾಧ್ಯ ಈ ಹಿಂದೆಯೂ ಇದೇ ರೀತಿಯ ಇಸ್ಲಾಂ ದ್ವೇಷಿ ಟ್ವೀಟ್ ಮಾಡಿದ್ದಾರೆ” ಎಂದು ಜನ ಅವರ ಈ ಹಿಂದಿನ ಟ್ವೀಟ್‌ಗಳ ಸ್ಕೀನ್‌ಶಾಟ್‌ಗಳನ್ನು ಶೇರ್ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...