ಕುಂಬಾರರ ನಿಗಮ ಸ್ಥಾಪಿಸಿ 100 ಕೋಟಿ ಅನುದಾನ ನೀಡಲು ಸಮುದಾಯದವರ ಆಗ್ರಹ

Date:

ಕೋಲಾರ: ಕರ್ನಾಟಕದಲ್ಲಿ ಬಸವಣ್ಣನ ಬಳಿಕ ವಚನ ಕ್ರಾಂತಿ ನಿರ್ಮಿಸಿದ ದಾರ್ಶನಿಕ ಯುಗಪುರುಷ ಸರ್ವಜ್ಞ ಅವರು ಒಂದು ದಿನಕ್ಕೆ ಸರ್ವಜ್ಞ ಆದವರಲ್ಲ ನಿತ್ಯ ವಿಷಯ ಕಲೆಹಾಕಿ ಒಂದು ದಿನ ಸರ್ವವನ್ನೂ ಬಲ್ಲವರಾದರು ಎಂದು ಉಪವಿಭಾಗಾಧಿಕಾರಿ ಜಂಬಗಿ ರೇಣುಕ ಪ್ರಸಾದ್ ದಿಲೀಪ್ ತಿಳಿಸಿದರು.

ನಗರದ ಕನ್ನಡ ಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಹಾಗೂ ಜಿಲ್ಲಾ ಕುಂಬಾರರ ಸಂಘದ ಆಶ್ರಯದಲ್ಲಿ ನಡೆದ ಸಂತ ಸರ್ವಜ್ಞ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ವಜ್ಞ ಜನಸಾಮಾನ್ಯರಿಗೆ ಅರ್ಥವಾಗುವ ರೀತಿ ವಚನ ರಚಿಸಿದ್ದಾರೆ. ಒಂದು ಜಾತಿ ಸಮುದಾಯಕ್ಕೆ ಅವರು ಸೀಮಿತವಾದವರಲ್ಲ. ಅವರ ವಚನ ನೀತಿ ಮಾರ್ಗದರ್ಶನವನ್ನು ಜೀವನದಲ್ಲಿ ಅಳವಡಿಸಿಕೊಂಡ ಸಮಾಜಕ್ಕೆ ಮಾದರಿಯಾಗಬೇಕು ಎಂದರು ಕುಂಬಾರ ಸಮುದಾಯದವರು ತಮ್ಮ ಬೇಡಿಕೆ ಸಮಸ್ಯೆ ಹೇಳಿಕೊಂಡಿದ್ದಾರೆ ಈ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ತಂದು ಈಡೇರಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾವುದೇ ಸಮುದಾಯ ಸೀಮಿತ ಉದ್ದೇಶದ ರಾಜಕೀಯ ಬಿಡಬೇಕು ವೈಮನಸ್ಯ ಬಿಟ್ಟು ಒಗ್ಗಟ್ಟು ಪ್ರದರ್ಶಿಸಬೇಕು ವಿದ್ಯಾಭ್ಯಾಸಕ್ಕೆ ಆದ್ಯತೆ ಕೊಡಬೇಕು ಎಂದು ಕಿವಿಮಾತು ಹೇಳಿದರು.

ಸಂತ ಸರ್ವಜ್ಞ ಜಯಂತ್ಯುತ್ಸವ ಆಚರಣೆ ಸಮಿತಿ ಪ್ರಧಾನ ಕಾರ್ಯದರ್ಶಿ ಹಾಗೂ ಸಮುದಾಯದ ಮುಖಂಡ ಕಲ್ಲಂಡೂರು ಡಾ.ಕೆ.ನಾಗರಾಜ್ ಮಾತನಾಡಿ ಕುಂಬಾರರ ಸಮಾಜ ಒಂದುಕಡೆ ಸೇರಲು ಅತ್ಯುತ್ತಮ ವೇದಿಕೆ ಸರ್ವಜ್ಞ ಜಯಂತಿ ದುರದೃಷ್ಟಕರ ಸಂಗತಿ ಎಂದರೆ ನಮ್ಮದು ಸಣ್ಣ ಸಮಾಜವೆಂದು ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು ಬರುವುದಿಲ್ಲ‌ ಸಮುದಾಯದ ಮತಗಳು ಕಡಿಮೆ ಇರುವುದರಿಂದ ಪ್ರಯೋಜನವಿಲ್ಲ ಎಂಬುದು ಅವರ ಭಾವನೆ ಆಗಿರಬಹುದು ಎಂದು ಬೇಸರ ವ್ಯಕ್ತಪಡಿಸಿದರು.

ಹೀಗಾದರೆ ನಾವು ನಮ್ಮ ಸಮಾಜದ ಕಷ್ಟಸುಖಗಳನ್ನು ಯಾರ ಬಳಿ ಹೇಳಿಕೊಳ್ಳುವುದು ಎಂದು ಪ್ರಶ್ನಿಸಿದರು. ಶೈಕ್ಷಣಿಕವಾಗಿ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ನಮ್ಮ ಸಮುದಾಯ ಬಹಳ ಹಿಂದೆ‌ ಉಳಿದಿದೆ. ಹೀಗಾಗಿ ಸರ್ಕಾರವು ಕುಂಬಾರರ ನಿಗಮ ಮಂಡಳಿ ಮಾಡಿ ಕನಿಷ್ಠ ೧೦೦ ಕೋಟಿ ಅನುದಾನ ಕೊಡಬೇಕು. ಈ ಮೂಲಕ ವಿದ್ಯಾರ್ಥಿಗಳಿಗೆ ಹಾಗೂ ಕುಂಬಾರಿಕೆ ವೃತ್ತಿ ಮಾಡುವವರಿಗೆ ಪ್ರೋತ್ಸಾಹ ನೀಡಬೇಕು ಎಂದರು.

ವಿದ್ಯಾರ್ಥಿಗಳಿಗೆ ಹಾಗೂ ದುಡಿಯುವ ಮಹಿಳೆಯರಿಗೆ ಹಾಸ್ಟೆಲ್ ಅಗತ್ಯವಿದೆ. ಹಾಸ್ಟೆಲ್ ನಿರ್ಮಿಸಬೇಕು ಕುಂಬಾರಿಕೆಗೆ ಕೆರೆ ಮೀಸಲಿಡಬೇಕು ಈ ಬಗ್ಗೆ ಪಿಡಿಒಗಳಿಗೆ ಮೇಲಧಿಕಾರಿಗಳು ಸೂಚನೆ ಕೊಡಬೇಕು ಎಂದು ಅವರು ಬೇಡಿಕೆ ಇಟ್ಟರು.

ಸರ್ವಜ್ಞ ಉದ್ಯಾನದಲ್ಲಿ ಸರ್ವಜ್ಞನ ಮೂರ್ತಿ ಇದೆ ಈಚೆಗೆ ಮರಬಿದ್ದು ಚಾವಣಿ ಮುರಿದು ಹೋಗಿದೆ ಸುತ್ತ ಸ್ವಚ್ಛತೆಯೂ ಇಲ್ಲ ಈ ಸಂಬಂಧ ಕ್ರಮ ವಹಿಸಿ ಎಂದು ಮನವಿ ಮಾಡಿದರು.

ಜಿಲ್ಲಾ ಕುಂಬಾರರ ಸಂಘದ ಕಾರ್ಯದರ್ಶಿ ರೆಡ್ಡಪ್ಪ ಮಾತನಾಡಿ ಸರ್ವಜ್ಞ ಎಂದರೆ ಎಲ್ಲಾ ವಿಷಯ ತಿಳಿದವರು. ಅನ್ಮದೇವರ ಮುಂದೆ ಇನ್ನು ದೇವರು ಉಂಟೆ ಎಂಬ ವಚನ ನೆನಪಿಸಿದರು ಆಡು ಮುಟ್ಟದ ಸೊಪ್ಪಿಲ್ಲ ಸರ್ವಜ್ಞ ಹೇಳದ ವಿಷಯವಿಲ್ಲ ಕನ್ನಡಕ್ಕೆ ಅಪಾರ ಕೊಡುಗೆ ನೀಡಿದ್ದು ಅವರು ಮತ್ತೆ ಹುಟ್ಟಿ ಬರಬೇಕು ಎಂದರು.

ಕುಂಬಕಲಾ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕೆ.ವಿ.ಶ್ರೀನಿವಾಸ್ ಮಾತನಾಡಿ ಜಿಲ್ಲೆಯಲ್ಲಿ ಕುಂಬಾರ ಸಮುದಾಯದ ೧೬ ಸಾವಿರ ಜನಸಂಖ್ಯೆ ಇದೆ ಸರ್ವಜ್ಞ ‌ಜಯಂತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದರೆ ಶಾಸಕರು ಹಾಗೂ ಜನಪ್ರತಿನಿಧಿಗಳು ಬರುತ್ತಾರೆ ಎಂದು ತಿಳಿಸಿದರು .

ಇದನ್ನು ಓದಿದ್ದೀರಾ.? ಸವಿತಾ ಸಮಾಜದ ಬಂಧುಗಳಿಗೆ ನಿಗಮದ ಸೌಲಭ್ಯಗಳು ಕುರಿತಂತೆ ಅರಿವು ಕಾರ್ಯಕ್ರಮ

ಜಿಲ್ಲಾ ಕುಂಬಾರರ ಸಂಘದ ಅಧ್ಯಕ್ಷ ಕಲ್ಲಂಡೂರು ಶ್ರೀನಿವಾಸಪ್ಪ, ಕಾರ್ಯದರ್ಶಿ ರೆಡ್ಡಪ್ಪ, ನಾಗೇಶ್, ಈರಣ್ಣ, ಸರೋಜಾ ಶ್ರೀನಿವಾಸ್, ರಮೇಶ್, ಬಾಲಕೃಷ್ಣ, ನಂದೀಶ್, ಶಿವಪ್ರಸಾದ್, ರಾಜಣ್ಣ, ಕಲ್ಲಂಡೂರು ನಾರಾಯಣಸ್ವಾಮಿ, ನಾಗೇಶ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...