ಬೆಂಗಳೂರು | ಎತ್ತಿನ ಹೊಳೆ ಯೋಜನೆಯಲ್ಲಿ ಅಕ್ರಮ ಆರೋಪ; ಶಾಸಕ ಶಿವಲಿಂಗೇಗೌಡ ವಿರುದ್ಧ ದೂರು

Date:

  • ಲೋಕಾಯುಕ್ತಕ್ಕೆ ದೂರು ನೀಡಿರುವ ಬಿಜೆಪಿ ವಕ್ತಾರ ಎನ್.ಆರ್‌ ರಮೇಶ್‌
  • ಕಾನ್ವರ್ಜೇನ್ಸಿ ಹೆಸರಲ್ಲಿ ₹150 ಕೋಟಿಗೂ ಹೆಚ್ಚು ಹಣ ದುರ್ಬಳಕೆ ಆರೋಪ

ಎತ್ತಿನ ಹೊಳೆ ಯೋಜನೆಯಲ್ಲಿ ಅಕ್ರಮ ನಡೆದಿದೆ. ಅಕ್ರಮ ಅವ್ಯವಹಾರದಲ್ಲಿ ಅರಸೀಕೆರೆ ಕ್ಷೇತ್ರದ ಶಾಸಕ ಕೆ ಎಂ ಶಿವಲಿಂಗೇಗೌಡ ಭಾಗಿಯಾಗಿದ್ದಾರೆಂದು ಆರೋಪಿಸಿ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್ ರಮೇಶ್ ಲೋಕಾಯುಕ್ತದಲ್ಲಿ ಎರಡು ದೂರು ದಾಖಲಿಸಿದ್ದಾರೆ.

ದಾಖಲೆ ಸಮೇತ ಕರ್ನಾಟಕ ಲೋಕಾಯಕ್ತ ಕಚೇರಿಗೆ ರಮೇಶ್ ದೂರು ನೀಡಿದ್ದಾರೆ. “ಶಾಸಕ ಶಿವಲಿಂಗೇಗೌಡ ಅವರು ಭ್ರಷ್ಟ ಅಧಿಕಾರಿಗಳೊಂದಿಗೆ ಶಾಮೀಲಾಗಿ ಎತ್ತಿನ ಹೊಳೆ ಯೋಜನೆಯ ಕಾನ್ವರ್ಜೇನ್ಸಿ ಹೆಸರಿನಲ್ಲಿ ₹150 ಕೋಟಿಗೂ ಹೆಚ್ಚು ಹಣ ದುರ್ಬಳಕೆ ಮಾಡಿದ್ದಾರೆ” ಎಂದು ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎನ್‌.ಆರ್‌ ರಮೇಶ್‌, “ಶಾಸಕ ಶಿವಲಿಂಗೇಗೌಡ ಹಾಗೂ ವಿಶ್ವೇಶ್ವರಯ್ಯ ಜಲ ನಿಗಮದ ತುಮಕೂರು ವಿಭಾಗದ ಮುಖ್ಯ ಎಂಜಿನಿಯರ್‌ ಮಾಧರ್, ಅಧೀಕ್ಷಕ ಎಂಜಿನಿಯರ್‌ ಆನಂದ್ ಕುಮಾರ್, ಹಾಸನ ವಿಭಾಗದ ಕಾರ್ಯಪಾಲಕ ಎಂಜನಿಯರ್‌ ರಘುನಾಥ್, ಅರಸೀಕೆರೆ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ರಘು ಸೇರಿದಂತೆ ಅನೇಕರ ವಿರುದ್ಧ ದೂರು ನೀಡಿದ್ದೇನೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಟಿಟಿಪಿ ಕಾಯ್ದೆಯ ಪ್ರಕಾರ ₹1 ಲಕ್ಷಕ್ಕೂ ಹೆಚ್ಚು ಮೊತ್ತದ ಕಾಮಗಾರಿಗಳನ್ನು ಇ-ಪ್ರೋಕ್ಯೂರ್‍ಮೆಂಟ್ ವಿಧಾನದಲ್ಲಿ ಟೆಂಡರ್‌ ಆಹ್ವಾನಿಸಬೇಕಿತ್ತು. ನಿಯಮಾನುಸಾರ ಅರ್ಹ ಗುತ್ತಿಗೆದಾರರಿಗೆ ಕಾಮಗಾರಿಗಳ ನಿರ್ವಹಣೆಯ ಗುತ್ತಿಗೆಯನ್ನು ನೀಡಬೇಕಿತ್ತು. ಆದರೆ, ಅರಸೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾನೂನಿನ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಒಂದು ಕೋಟಿಯಿಂದ ಐದು ಕೋಟಿ ರೂಪಾಯಿಗಳ ವರೆಗಿನ ಎಲ್ಲ ಕಾಮಗಾರಿಗಳನ್ನು ನಡೆಸಲಾಗಿದೆ. ನಿಯಮಾನುಸಾರ ಟೆಂಡರ್ ಕರೆಯದೆ ಕೆಆರ್‌ಐಡಿಎಲ್ ಸಂಸ್ಥೆಯ ಮೂಲಕ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಅವಕಾಶ ಮಾಡಿಕೊಡಲಾಗಿದೆ” ಎಂದು ದೂರಿದ್ದಾರೆ.

“ಅದರಲ್ಲೂ ಪ್ರಮುಖವಾಗಿ ಎಸ್‌ಸಿ-ಎಸ್‌ಟಿ ಯೋಜನೆಗಳನ್ನು ಆಯಾ ಸಮುದಾಯದವರು ವಾಸಿಸುವ ಪ್ರದೇಶಗಳಲ್ಲೇ ಮಾಡಬೇಕೆಂಬ ನಿಯಮವನ್ನು ಉಲ್ಲಂಘಿಸಲಾಗಿದೆ” ಎಂದು ಆರೋಪಿಸಿದ್ದಾರೆ.

“ಬಿಡುಗಡೆಯಾಗುವ ಅನುದಾನಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸಲುವಾಗಿಯೇ, ನಿಯಮಾನುಸಾರ ಟೆಂಡರ್ ಕರೆಯದೇ ನೇರವಾಗಿ ಕೆಆರ್ ಐಡಿಎಲ್ ಸಂಸ್ಥೆಗೆ ಕಾಮಗಾರಿಗಳ ನಿರ್ವಹಣೆಯ ಕಾರ್ಯವನ್ನು ವಹಿಸಲಾಗುವ ಸತ್ಯ ಈಗಾಗಲೇ ಹಲವಾರು ಪ್ರಕರಣಗಳಲ್ಲಿ ರುಜುವಾತಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ನರೇಗಾ ಕೂಲಿ ಕಾರ್ಮಿಕರ ಸಂಘಟನೆಯಿಂದ ಅನಿರ್ದಿಷ್ಟಾವಧಿ...

“ಮನರೇಗಾ ಮೂಲಕ ಕೇಂದ್ರ ಸರ್ಕಾರ ಬಿಡುಗಡೆ ಮಾಡುವ ಅನುದಾನ ಮತ್ತು ಲೆಕ್ಕ ಶೀರ್ಷಿಕೆ 5054ರ ಅಡಿಯಲ್ಲಿ ರಾಜ್ಯ ಸರ್ಕಾರವು ಮುಖ್ಯಮಂತ್ರಿಗಳ ವಿವೇಚನೆಯ ಅನುದಾನದ ಮೂಲಕ ಬಿಡುಗಡೆಯಾಗುವ ಅನುದಾನಗಳನ್ನು ಒಗ್ಗೂಡಿಸಿ ಕಾನ್ವರ್ಜೇನ್ಸಿ ಹೆಸರಿನಲ್ಲಿ ಪ್ರೆಡ್ ಮೂಲಕ ತಮಗಿಷ್ಟ ಬಂದ ಹಾಗೆ ಕಾನೂನಿನ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಹಾಸನ ಜಿಲ್ಲೆಯ ಅರಸೀಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 2018-2023ರ ಅವಧಿಯಲ್ಲಿ ವ್ಯಾಪಕ ಪ್ರಮಾಣದ ಅಕ್ರಮಗಳನ್ನು ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.

“ಕಳೆದ ಐದು ವರ್ಷಗಳಲ್ಲಿ ನರೇಗಾ ಯೋಜನೆಯ ಅನುಷ್ಠಾನಕ್ಕೆಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಮೂಲಕ ಬಿಡುಗಡೆಯಾಗಿರುವ ₹150 ಕೋಟಿಗೂ ಹೆಚ್ಚು ಮೊತ್ತದ ಅನುದಾನಗಳ ಪೈಕಿ, ಶೇ. 50ಕ್ಕೂ ಹೆಚ್ಚು ಹಣವನ್ನು ಶಾಸಕ ಶಿವಲಿಂಗೇಗೌಡರು ತಮ್ಮ ಆಪ್ತ ಮತ್ತು ವಂಚಕ ಅಧಿಕಾರಿಗಳ ಸಹಕಾರದಿಂದ ದುರ್ಬಳಕೆ ಮಾಡಿಕೊಂಡಿರುವುದು ಸಾಬೀತಾಗಿರುವುದರಿಂದ ಇಡೀ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಬೇಕು” ಎಂದು ರಾಜ್ಯ ಸರ್ಕಾರವನ್ನು ರಮೇಶ್ ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...