ಬಾಗೇಪಲ್ಲಿ | ಸೀತಾರಾಮ ಯೆಚೂರಿ ನಿಧನಕ್ಕೆ ಸಂತಾಪ

Date:

ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಸಿಪಿಐಎಂ ನಾಯಕ ಸೀತಾರಾಮ ಯೆಚೂರಿ(72) ಅನಾರೋಗ್ಯ ಹಿನ್ನೆಲೆ ನಿಧನರಾಗಿದ್ದು, ಸಿಪಿಐಎಂ ಮುಖಂಡ ಡಾ.ಅನಿಲ್‌ ಕುಮಾರ್‌ ಅವುಲಪ್ಪ ಸಂತಾಪ ಸೂಚಿಸಿದ್ದಾರೆ.

ತಮ್ಮ ರಾಜಕೀಯ ಜೀವನದುದ್ದಕ್ಕೂ ಪ್ರಗತಿಪರ ಚಿಂತನೆಗಳನ್ನು ಅಳವಡಿಸಿಕೊಂಡು ಬಂದಿದ್ದ ಯೆಚೂರಿ ರಾಜ್ಯಸಭೆಯಲ್ಲಿ ಅತ್ಯಂತ ಆಳವಾದ ಅಧ್ಯಯನದಿಂದ ಭಾಷಣವನ್ನು ಮಾಡುತ್ತಲೇ ದೇಶದ ಗಮನ ಸೆಳೆಯುತ್ತಿದ್ದರು.

ಆಗಸ್ಟ್ 12, 1952 ರಂದು ಚೆನ್ನೈನಲ್ಲಿ ಜನಿಸಿದ ಸೀತಾರಾಂ ಯೆಚೂರಿ ಅವರು ಭಾರತೀಯ ರಾಜಕೀಯ ಕ್ಷೇತ್ರದಲ್ಲಿ ಸಮ್ಮಿಶ್ರ ರಾಜಕೀಯಕ್ಕೆ ಅವರ ಕಾರ್ಯತಂತ್ರದ ವಿಧಾನ ಮತ್ತು ಮಾರ್ಕ್ಸ್‌ವಾದದ ತತ್ವಗಳನ್ನು ಅನುಸರಿಸುವ ಮೂಲಕ ಹೆಸರು ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1974ರಲ್ಲಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಸೇರುವ ಮೂಲಕ ಅವರ ರಾಜಕೀಯ ಜೀವನ ಆರಂಭವಾಯಿತು. ಮೂರು ಬಾರಿ ಜೆಎನ್‌ಯು ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷರಾಗಿದ್ದರು. ಎಸ್‌ಎಫ್‌ಐ ಅಖಿಲ ಭಾರತದ ಅಧ್ಯಕ್ಷರಾದರು, 1984 ರಲ್ಲಿ ಅವರು ಸಿಪಿಐ (ಎಂ) ಕೇಂದ್ರ ಸಮಿತಿಗೆ ಆಯ್ಕೆಯಾದರು. 1992 ರಿಂದ ಮೂರು ದಶಕಗಳ ಕಾಲ ಪಾಲಿಟ್‌ಬ್ಯೂರೊದ ಸದಸ್ಯರಾಗಿದ್ದರು.ತಮ್ಮ ಜೀವನದ ಕೊನೆಯವರೆಗೂ ಪ್ರಗತಿಪರ ಚಳುವಳಿಯಲ್ಲಿ ಶ್ರಮಿಸಿ ಸಿದ್ದಾಂತವನ್ನೆ ಉಸಿರಾಗಿರಿಸಿಕೊಂಡು ಜೀವಿಸಿದ್ದರು.

ಈ ಸುದ್ದಿ ಓದಿದ್ದೀರಾ? ಆಂಧ್ರಪ್ರದೇಶ | ಭೀಕರ ಅಪಘಾತ: ಕಾರಿನ ಮೇಲೆ ಬಿದ್ದ ಲಾರಿ; ಚಿಕ್ಕಬಳ್ಳಾಪುರದ ಮೂವರು ಸಾವು

ಬಾಗೇಪಲ್ಲಿಗೆ ಬಿಡದ ನಂಟು

ಯೆಚೂರಿ ಅವರಿಗೂ ಜಿ.ವಿ.ಶ್ರೀರಾಮ ರೆಡ್ಡಿಯವರಿಗೂ ಉತ್ತಮ ನಂಟಿತ್ತು. ಅವರಿಗೆ ಬಾಗೇಪಲ್ಲಿ ಎಂದರೆ ಪಂಚ ಪ್ರಾಣ. ಬಾಗೇಪಲ್ಲಿಯ ಯಾವುದೇ ಸಮಸ್ಯೆಗಳಿದ್ದರೂ ಅವರ ಮಾರ್ಗದರ್ಶನ ಪಡೆಯುತ್ತಿದ್ದರು ಎಂದು ಅನಿಲ್‌ ಕುಮಾರ್ ಸ್ಮರಿಸಿದ್ದಾರೆ.

ಯೆಚೂರಿ1

ಇದೇ ವೇಳೆ ಚನ್ನರಾಯಪ್ಪ, ಮುನಿ ವೆಂಕಟಪ್ಪ, ರಘುರಾಮ ರೆಡ್ಡಿ, ವಾಲ್ಮೀಕಿ ಅಶ್ವಥಪ್ಪ, ಸಾವಿತ್ರಮ್ಮ, ಅಬ್ದುಲ್ ಕರೀಂ ಸಾಬ್, ಜಿ.ಕೃಷ್ಣಪ್ಪ ಸೇರಿದಂತೆ ಇತರೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...