ಆಲಮೇಲ | ಸಾಮಾನ್ಯರಿಗೆ ಅರ್ಥವಾಗುವ ಭಾಷೆಯ ಸಾಹಿತ್ಯ ಕನಕದಾಸರದ್ದು: ಹಾವಣ್ಣ

Date:

‘ತಮ್ಮದೇ ಆದಂತ ಸಾಹಿತ್ಯದ ವಚನಗಳ ಮೂಲಕ ಜಾತಿ, ಮತ, ಕುಲಗಳ ಭೇದಭಾವವನ್ನು ಮೀರಿಸುವಂತ ಸಮಾಜದ ಪಿಡುಗುಗಳ ಕುರಿತು ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿ ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಕೀರ್ತಿ ಸಂತ ಶ್ರೇಷ್ಠ ಕವಿ ಕನಕದಾಸರಿಗೆ ಸಲ್ಲುತ್ತದೆ’ ಎಂದು ಎಚ್‌ಡಿಎಂಸಿ ಅಧ್ಯಕ್ಷ ಹಾವಣ್ಣ ಕಕ್ಕಳಮೇಲಿ ಹೇಳಿದರು.

ಆಲಮೇಲ ತಾಲೂಕಿನ ಮೋರಟಗಿ ಗ್ರಾಮದಲ್ಲಿ ಹಾಲುಮತ ಸಮಾಜದ ಬಾಂಧವರು ಹಮ್ಮಿಕೊಂಡಿದ್ದ ಸಂತ ಕನಕದಾಸರ 536ನೇ ಜಯಂತ್ಯುತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಸುಮಾರು ಐನೂರು ವರ್ಷಗಳ ಕಾಲ ಹಿಂದೆ ಜಾತಿ ವ್ಯವಸ್ಥೆಯ ವಿರುದ್ಧ ಸಿಡಿದೆದ್ದ ಕನಕದಾಸರು, ಕುಲ ಕುಲವೆಂದು ಹೊಡೆದಾಡಿ ಸಾಯಬೇಡಿರಿ ಹುಚ್ಚಪ್ಪಗಳಿರಾ, ಆತ್ಮ ಯಾವ ಕುಲ, ಜೀವ ಯಾವ ಕುಲ ಬೀಸುವ, ಗಾಳಿ ಯಾವ ಕುಲ, ಹರಿಯುವ ನೀರು ಯಾವ ಕುಲ, ತಿನ್ನುವ ಅನ್ನ ಯಾವ ಕುಲ, ಯಾವಾಗ ನಿಮ್ಮಲ್ಲಿ ಅಡಗಿರುವ ನಾನು ಎಂಬ ಅಹಂ ನಿಮ್ಮನ್ನು ಬಿಟ್ಟು ಹೋಗುತ್ತೋ, ಅವತ್ತೇ ನೀವು ಮೋಕ್ಷಕ್ಕೆ ಅರ್ಹರಾಗುತ್ತೀರಿ ಎಂದು ಸಾರಿ ಹೇಳಿದ್ದರು. ಕನಕದಾಸರು ಅಗಲಿ 536 ವರ್ಷಗಳು ಕಳೆದರೂ ಕೂಡ, ಅವರ ಹೆಸರು ಅವರ ಸಾಹಿತ್ಯ, ವಚನಗಳು ಸೂರ್ಯ ಚಂದ್ರ ಇರುವರೆಗೂ ಅಜರಾಮರ’ ಎಂದು ಬಣ್ಣಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಕನಕಸೇನಾ ಅಧ್ಯಕ್ಷ ಶಿವು ಕೇರಿಗೊಂಡ, ರಾಜು ಮಳಗಿ, ಸಲೀಂ ಕಣ್ಣಿ, ರಾಮಚಂದ್ರ ಕೇರಿಗೊಂಡ, ಸಂತೋಷ ಸಿನ್ನೂರ, ಗುರು ಅಗಸರ, ಅಮೋಘ ಸಿದ್ದ ಗಾಳಿ, ಬೀಮಣ್ಣ ಗಾಳಿ, ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...