ಬಂಡವಾಳಿಗರ ಪರವಾಗಿ ಕಾಂಗ್ರೆಸ್, ಬಿಜೆಪಿ ನೀತಿಗಳನ್ನು ರೂಪಿಸಿವೆ: ಎಸ್‌ಯುಸಿಐ

Date:

ದೇಶದಲ್ಲಿ ಶೋಷಕ ಬಂಡವಾಳಶಾಹಿ ವರ್ಗ ಹಾಗೂ ಶೋಷಿತ ಕಾರ್ಮಿಕ ವರ್ಗಗಳು ಅಸ್ತಿತ್ವದಲ್ಲಿರುವುದನ್ನು ಯಾರೂ ಮರೆಮಾಚಲಾಗದು. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್, ಬಿಜೆಪಿ ಸೇರಿದಂತೆ ದೇಶವನ್ನಾಳಿದ ಎಲ್ಲ ಪಕ್ಷಗಳು ಬಂಡವಾಳಶಾಹಿಗಳ ಹಿತಾಸಕ್ತಿಯನ್ನು ಕಾಪಾಡಲು ಅವರ ಪರವಾದ ನೀತಿಗಳನ್ನು ರೂಪಿಸಿವೆ. ದೇಶದ ಬಹುಸಂಖ್ಯಾತ ದುಡಿಯುವ ಜನರ ಬದುಕನ್ನು ಬೀದಿಗೆ ತಂದಿವೆ ಎಂದು ಎಸ್‌ಯುಸಿಐ (ಕಮ್ಯುನಿಸ್ಟ್‌) ಕೇಂದ್ರ ಪಾಲಿಟ್ ಬ್ಯೂರೋ ಸದಸ್ಯ ಕೆ ರಾಧಾಕೃಷ್ಣ ಆರೋಪಿಸಿದ್ದಾರೆ.

ಎಸ್‌ಯುಸಿಐ ಸಂಸ್ಥಾಪಕ ಶಿವದಾಸ್ ಘೋಷ್ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಧಾರವಾಡದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ರಾಧಾಕೃಷ್ಣ ಮಾತನಾಡಿದರು. “ಸ್ವಾತಂತ್ರ್ಯ ಸಂದರ್ಭದಲ್ಲಿ ಕೆಲವು ಕೋಟಿಗಳಿದ್ದ ಬಂಡವಾಳಗಾರರ ಸಂಪತ್ತು, ಇಂದು ಲಕ್ಷಾಂತರ ಕೋಟಿ ದಾಟಲು ದೇಶವನ್ನಾಳಿದ ಪಕ್ಷಗಳು ರೂಪಿಸಿದ ನೀತಿಗಳೇ ಕಾರಣ. ಈ ಸತ್ಯವನ್ನು ಎಲ್ಲಿಯವರೆಗೆ ದುಡಿಯುವ ವರ್ಗ ಗ್ರಹಿಸುವುದಿಲ್ಲವೋ ಹಾಗೂ ಚುನಾವಣಾ ಭ್ರಮೆಯಲ್ಲಿ ಮುಳುಗಿರುತ್ತಾರೋ ಅಲ್ಲಿಯವರೆಗೆ ಸಮಾಜವಾದಿ ಕ್ರಾಂತಿಯನ್ನು ಸಾಧಿಸಲು ಸಾದ್ಯವಿಲ್ಲ” ಎಂದರು.

“ದುಡಿಯುವ ಜನರು ತಮ್ಮ ದಿನನಿತ್ಯದ ಬೇಡಿಕೆಗಳನ್ನು ಈಡೇರಿಸಲು ಪ್ರಜಾತಾಂತ್ರಿಕ ಚಳುವಳಿಗಳನ್ನು ಬೆಳೆಸುತ್ತ, ವರ್ಗ ಸಂಘರ್ಷವನ್ನು ತೀವ್ರಗೊಳಿಸುತ್ತ, ಅಂತಿಮವಾಗಿ ಶೋಷಣಾರಹಿತ ಸಮಾಜವಾದಿ ವ್ಯವಸ್ಥೆಗೆ ಜನ್ಮ ನೀಡಲು ಸಮಾಜವಾದಿ ಕ್ರಾಂತಿಯನ್ನು ನೆರವೇರಿಸಬೇಕಾಗುತ್ತದೆ. ದೇಶದ ದುಡಿಯುವ ವರ್ಗ, ವಿಮೋಚನೆಯ ಮಾರ್ಗ ತೋರಿಸಿದ ಶಿವದಾಸ್ ಘೋಷ್‌ ಅವರ ಚಿಂತನೆಗಳನ್ನು ಅಳವಡಿಸಿಕೊಂಡು ಹೋರಾಟ ರೂಪಿಸಬೇಕು” ಎಂದು ಕರೆ ಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಕ್ಷದ ರಾಜ್ಯ ಸೆಕ್ರೆಟೇರಿಯಟ್ ಸದಸ್ಯ ರಾಮಾಂಜನಪ್ಪ ಆಲ್ದಳ್ಳಿ ಮಾತನಾಡಿ, “ಪಶ್ಚಿಮ ಬಂಗಾಳದ ಒಂದು ಪುಟ್ಟ ಜಿಲ್ಲೆಯಲ್ಲಿ ಕೆಲವೇ ಸಂಗಾತಿಗಳೊಂದಿಗೆ ಶಿವದಾಸ್ ಘೋಷ್ ಅವರು ಪ್ರಾರಂಭಿಸಿದ ಪಕ್ಷ, ಇಂದು 27 ರಾಜ್ಯಗಳಲ್ಲಿ ಹೋರಾಟಗಳನ್ನು ಬೆಳೆಸುತ್ತಿದೆ. ದೇಶದಲ್ಲಿ ಬಂಡವಾಳಶಾಹಿ ವರ್ಗ ತನ್ನ ಹಿತಾಸಕ್ತಿಯನ್ನು ಕಾಪಾಡಲು ಕಾಂಗ್ರೆಸ್, ಬಿಜೆಪಿ ಸೇರಿದಂತೆ ಹಲವಾರು ಪಕ್ಷಗಳನ್ನು ಪೋಷಿಸುತ್ತಾ ಬಂದಿದೆ. ಅದೇ ರೀತಿ ದುಡಿಯುವ ವರ್ಗ ತನ್ನ ವಿಮೋಚನೆಗಾಗಿ ನೈಜ ಕಮ್ಯುನಿಸ್ಟ್ ಪಕ್ಷವನ್ನು ಬಲಪಡಿಸಬೇಕು” ಎಂದರು.

ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ ಜಡಗನ್ನವರ, ಜಿಲ್ಲಾ ಸಮಿತಿ ಸೆಕ್ರೆಟ್ರಿಯೇಟ್ ಸದಸ್ಯ ಗಂಗಾಧರ ಬಡಿಗೇರ ಹಾಗೂ ಪಕ್ಷದ ಹಲವಾರು ಕಾರ್ಯಕರ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...