ಒಳಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್‌ನವರಿಂದ ಪಾಠ ಕಲಿಯುವ ಅಗತ್ಯವಿಲ್ಲ: ಮಾಜಿ ಸಿಎಂ ಬೊಮ್ಮಾಯಿ

Date:

  • ಕಾಂಗ್ರೆಸ್‌ ಸರ್ಕಾರ ಮೊದಲಿನಿಂದಲೂ ಒಳಮೀಸಲಾತಿ ವಿರೋಧಿಯಾಗಿದೆ
  • ಶಾಸಕರು ಮತ್ತು ಮಂತ್ರಿಗಳ ನಡುವೆ ಸಮನ್ವಯತೆ ಎಂಬುದು ಕಾಣುತ್ತಿಲ್ಲ

ಒಳಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್‌ ಸದಾ ಗೊಂದಲ ಸೃಷ್ಟಿ ಮಾಡುತ್ತ ಬಂದಿದೆ. ಈ ಹಿಂದೆ ತಮ್ಮ ಸರ್ಕಾರ ಇದ್ದಾಗ ಒಳಮೀಸಲಾತಿ ಜಾರಿ ಮಾಡುತ್ತೇವೆ ಎಂದಿದ್ದರು. ನಮ್ಮ ಸರ್ಕಾರ ಬಂದಾಗ ಇಲ್ಲ ಎಂದರು. ಇವರಿಂದ ನಾವು ಪಾಠ ಕಲಿಯುವ ಅಗತ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾರಾಯಣಸ್ವಾಮಿ ಅವರು ಏನು ಹೇಳಿದ್ದಾರೆ ಎಂಬುದು ನಮಗೆ ಅರ್ಥವಾಗಿದೆ. ಸಂವಿಧಾನದಲ್ಲಿ ಸದ್ಯಕ್ಕೆ ಅವಕಾಶವಿಲ್ಲ ಎಂದು ಅವರು ಹೇಳಿದ್ದಾರೆ. ಆರ್ಟಿಕಲ್‌140 ಅಡಿ ಕ್ಲಾಸ್‌ ಮಾಡಿ ಬಿಲ್‌ ಮಾಡಿ ಎಂದು ನಾವು ಕೇಂದ್ರಕ್ಕೆ ಶಿಫಾರಸು ಮಾಡಿದ್ದೇವೆ. ಒಳಮೀಸಲಾತಿ ವಿಚಾರ ಈಗಲೂ ಕೋರ್ಟ್‌ನಲ್ಲಿದೆ. ಕಾಂಗ್ರೆಸ್‌ ಸರ್ಕಾರ ಮಾತ್ರ ಮೊದಲಿನಿಂದಲೂ ಒಳಮೀಸಲಾತಿ ವಿರೋಧಿ ಇದೆ” ಎಂದು ಟೀಕಿಸಿದರು.

“ನಮ್ಮ ಸರ್ಕಾರದ ಅವಧಿಯಲ್ಲಿ ಯಾವುದೇ ಇಲಾಖೆಯ ಕಾಮಗಾರಿಯಲ್ಲಿ ಅಕ್ರಮ ಕಂಡುಬಂದರೆ ತನಿಖೆ ಮಾಡಲಿ. ಎಸ್‌ಐಟಿಗೆ ಕೊಡಲಿ. ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗುತ್ತದೆ. ಇದನ್ನೇ ಮುಂದಿಟ್ಟುಕೊಂಡು ದ್ವೇಷದ ರಾಜಕಾರಣ ಮಾಡಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಏನಾಗಿದೆ ಎಂಬುದು ಅವರ ಆಂತರಿಕ ವಿಚಾರ. ಮಾಧ್ಯಮಗಳಲ್ಲಿ ಆ ಬಗ್ಗೆ ಚರ್ಚೆ ಆಗುತ್ತಿದೆ. ಈ ಸರ್ಕಾರ ರಚನೆಯಾದ ಮೊದಲ ದಿನದಿಂದಲೂ ಗೊಂದಲದಲ್ಲಿದೆ. ಶಾಸಕರು ಮತ್ತು ಮಂತ್ರಿಗಳ ನಡುವೆ ಸಮನ್ವಯತೆ ಎಂಬುದು ಕಾಣುತ್ತಿಲ್ಲ. ಅದಕ್ಕಾಗಿಯೇ ಈ ಸಭೆ ಮಾಡಿದ್ದಾರೆ. ಎಲ್ಲವೂ ಸರಿಯಿದ್ದರೆ ಹೈ ಕಮಾಂಡ್‌ ಇವರಿಗೆ ಬುಲಾವ್‌ ನೀಡುತ್ತಿರಲಿಲ್ಲ” ಎಂದು ಹೇಳಿದರು.

“ವರ್ಗಾವಣೆ ದಂಧೆ ವಿಚಾರವಾಗಿ ಅವರ ಶಾಸಕರೇ ದೊಡ್ಡಮಟ್ಟದಲ್ಲಿ ಧ್ವನಿ ಎತ್ತಿದ್ದಾರೆ. ಹಿರಿಯ ಶಾಸಕರಿಗೆ ಈ ಪರಿಸ್ಥಿತಿ ಬಂದರೆ ಇನ್ನು, ನೂತನ ಶಾಸಕರ ಕಥೆ ಏನು” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಸೌಜನ್ಯ ಪ್ರಕರಣ | ನ್ಯಾಯಕ್ಕಾಗಿ ಬೆಂಗಳೂರಿನಲ್ಲಿ ಮೊಳಗಿದ ಘೋಷ

ಉಡುಪಿ ಪ್ರಕರಣ

“ಹೆಣ್ಣು ಮಕ್ಕಳ ವಿಚಾರದಲ್ಲಿ ಅವರ ಗೌರವಕ್ಕೆ ಧಕ್ಕೆ ತರುವಂತಹ ಹೇಳಿಕೆಯನ್ನು ಗೃಹಮಂತ್ರಿಗಳು ಕೊಟ್ಟಿದ್ದಾರೆ. ಇಷ್ಟು ಹಗುರವಾಗಿ ಸಚಿವರು ಮಾತನಾಡಬಾರದು. ಇಡೀ ಸರ್ಕಾರವೇ ತಲೆತಗ್ಗಿಸಬೇಕಾದ ಸಂಗತಿ ಇದು. ವಿಡಿಯೋ ಪ್ರಕರಣದಲ್ಲಿ ತನಿಖೆಯಾಗಲಿ. ಸತ್ಯ ಹೊರೆಗೆ ಬರಲಿ. ಅಲ್ಲಿ ಏನೂ ನಡೆಯದೇ ಇದ್ದರೆ ಆ ಮೂವರು ವಿದ್ಯಾರ್ಥಿನಿಯರ ತಪ್ಪೊಪ್ಪಿಗೆ ಹೇಳಿಕೆ ಯಾಕೆ ಪಡೆಯಬೇಕು? ಇದರ ಅರ್ಥ ಪ್ರಕರಣವನ್ನು ಇಲ್ಲಿಗೆ ಮುಚ್ಚಿಹಾಕುವ ಯತ್ನ” ಎಂದು ಆರೋಪಿಸಿದರು.

“ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣವಾಗಿ ಪ್ರತಿಕ್ರಿಯಿಸಿ, ಸರ್ಕಾರ ಇಲ್ಲಿ ಕೂಡ ಗೊಂದಲ ಮಾಡುತ್ತಿದೆ. ರೈತ ಹೋರಾಟಗಳೇ ಬೇರೆ. ಈ ಪ್ರಕರಣಗಳೇ ಬೇರೆ. ಕನ್ನಡಕ್ಕಾಗಿ ಹೋರಾಟ ಮಾಡಿದವರ ಕೇಸ್‌ ಮರಳಿ ಪಡೆಯುವುದರಲ್ಲಿ ನಮ್ಮ ತಕರಾರು ಇಲ್ಲ. ಕೆಜಿ ಹಳ್ಳಿ ಪ್ರಕರಣದಲ್ಲಿ ಭಾಗಿಯಾದವರನ್ನು ದಂಗೆಕೋರರು ಎನ್ನದೆ ಏನು ಹೇಳಬೇಕು? ಮತರಾಜಕಾರಣಕ್ಕೆ ಈ ರೀತಿ ನಡೆದುಕೊಳ್ಳುತ್ತಿದೆ ಈ ಸರ್ಕಾರ” ಎಂದು ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...