ಕಾಂಗ್ರೆಸ್‌ ಸರ್ಕಾರ ಮಕ್ಕಳ ವಿಚಾರದಲ್ಲಿ ಚೆಲ್ಲಾಟ ಆಡುತ್ತಿದೆ: ಎಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ

Date:

  • ವಿವಿಧ ಜಿಲ್ಲೆಗಳ ಮುಖಂಡರ ಜತೆ ಜೆಡಿಎಸ್‌ ಆತ್ಮಾವಲೋಕನ ಸಭೆ
  • ‘ಗ್ಯಾರಂಟಿಗಳ ಬಗ್ಗೆ ಸ್ವತಃ ಸಚಿವರಿಗೆ ಮಾಹಿತಿ ಇದ್ದಂತೆ ಕಾಣುತ್ತಿಲ್ಲ’

ಹಿಂದಿನ ಬಿಜೆಪಿ ಸರ್ಕಾರ ಪಠ್ಯ ಬದಲಾವಣೆ ಮಾಡಿದಾಗ ಆ ಬಗ್ಗೆ ಸಾಕಷ್ಟು ಗೊಂದಲ ಆಗಿತ್ತು. ಈಗ ಈ ಸರ್ಕಾರ ಕೂಡ ಅದೇ ದಾರಿಯಲ್ಲಿ ಇದೆ. ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಪಠ್ಯ ಪುಸ್ತಕಗಳನ್ನು ಮುದ್ರಿಸಿ ಶಾಲೆಗಳಿಗೆ ಕಳಿಸಲಾಗಿದೆ. ಈ ಕಾಂಗ್ರೆಸ್‌ ಸರ್ಕಾರ ಮಕ್ಕಳ ವಿಚಾರದಲ್ಲಿ ಚೆಲ್ಲಾಟ ಆಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಹರಿಹಾಯ್ದರು.

ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಗುರುವಾರ ವಿವಿಧ ಜಿಲ್ಲೆಗಳ ಮುಖಂಡರ ಜತೆ ನಡೆದ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

“ಮಕ್ಕಳಿಗೆ ಪರಿಶುದ್ಧ ವಾತಾವರಣ ಸೃಷ್ಟಿ ಮಾಡಬೇಕು. ಮಕ್ಕಳಿಗೆ ಒಳ್ಳೆಯ ಜ್ಞಾನ ತುಂಬಬೇಕು. ದ್ವಂದ್ವ ಹೇಳಿಕೆಗಳನ್ನು ನೀಡುವ ಮೂಲಕ ಅವರ ಮೇಲೆ ಪರಿಣಾಮ ಬೀರುವಂತೆ ಮಾಡುವುದು ಬೇಡ. ಸರ್ಕಾರದ ಪ್ರಾರಂಭಿಕ ಹಂತದಲ್ಲಿ ಈ ರೀತಿಯ ಗೊಂದಲ ಬಿತ್ತನೆ ಮಾಡಿದರೆ ಹೇಗೆ? ಇನ್ನೂ ಐದು ವರ್ಷದ ಕಥೆ ಏನು? ಎನ್ನುವುದು ನನ್ನ ಪ್ರಶ್ನೆಯಾಗಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ಯಾರಂಟಿ ಬಗ್ಗೆ ಸ್ವತಃ ಸಚಿವರಿಗೆ ಮಾಹಿತಿ ಇಲ್ಲ

ಗ್ಯಾರಂಟಿ ಬಗ್ಗೆ ಸ್ವತಃ ಸಚಿವರಿಗೆ ಮಾಹಿತಿ ಇದ್ದಂತೆ ಕಾಣುತ್ತಿಲ್ಲ. ಅವರೆಲ್ಲರೂ ಅರಬರೆ ಜ್ಞಾನದಿಂದ ಮಾತನಾಡುತ್ತಿದ್ದಾರೆ. ಅದು ಜನತೆಗೂ ಚೆನ್ನಾಗಿ ಅರ್ಥವಾಗುತ್ತಿದೆ” ಎಂದು ಕುಮಾರಸ್ವಾಮಿ ಟೀಕಿಸಿದರು.

“ಗೃಹಜ್ಯೋತಿ ಯೋಜನೆಯ ಬಗ್ಗೆ ಹೇಳುವುದೇ ಬೇಡ ಎನಿಸುತ್ತದೆ. ಏಕೆಂದರೆ, ಇಂಧನ ಇಲಾಖೆಯನ್ನು ಮುನ್ನಡೆಸುತ್ತಿರುವ ಸಚಿವರಾದ ಜಾರ್ಜ್ ಅವರಿಗೆ ಈ ಕಾರ್ಯಕ್ರಮ ಅರ್ಥ ಆಗಿಲ್ಲ. ಅವರು ತಾಳಮೇಳ ಇಲ್ಲದ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಇಲಾಖೆಯ ಬಗ್ಗೆ ಸಂಪೂರ್ಣ ಮಾಹಿತಿ ಅವರಿಗೆ ಇಲ್ಲ, ಯಾಕೆ ಅಧಿಕಾರಿಗಳು ಅವರಿಗೆ ಮಾಹಿತಿ ನೀಡುತ್ತಿಲ್ಲವೇ” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಬದಲಿಸಿದ್ದ ಪಠ್ಯಗಳನ್ನು ಕಾಂಗ್ರೆಸ್‌ ತೆಗೆಯಬೇಕು: ಕುಂ.ವೀ

“ಚುನಾವಣೆ ಪೂರ್ವದಲ್ಲಿ ಏನು ಘೋಷಣೆ ಮಾಡಿದ್ದರು ಎನ್ನುವುದು ನನಗೆ ಮಾತ್ರವಲ್ಲ ಇಡೀ ರಾಜ್ಯದ ಜನತೆಗೆ ಗೊತ್ತಿದೆ. ಈಗ ನೋಡಿದರೆ ಸರ್ಕಾರ ಸಬೂಬುಗಳ ಪಟ್ಟಿ ಮಾಡಿಕೊಂಡು ಕಾಲಹರಣ ಮಾಡುತ್ತಿದೆ. ಜನರ ನಂಬಿಕೆಯ ಹರಣ ಮಾಡುತ್ತಿದೆ” ಎಂದು ವಾಗ್ದಾಳಿ ನಡೆಸಿದರು.

ಇಂಧನ ಇಲಾಖೆಯ ಒಪ್ಪಂದ ರದ್ದಾಗಲಿ

“ಇಂಧನ ಇಲಾಖೆಯಲ್ಲಿ ಏನೇನು ನಡೆಯುತ್ತಿದೆ, ನಡೆದಿದೆ ಎನ್ನುವ ಮಾಹಿತಿ ನನಗೂ ಇದೆ. ಹಿಂದೆ ಕಾಗೋಡು ತಿಮ್ಮಪ್ಪ ಅವರು ಸ್ಪೀಕರ್ ಆಗಿದ್ದರು. ಆಗ ಇಂಧನ ಇಲಾಖೆಯಲ್ಲಿ ನಡೆದ ಅಕ್ರಮಗಳ ತನಿಖೆಗೆ ಜಂಟಿ ಸದನ ಸಮಿತಿ ರಚನೆ ಮಾಡಲಾಯಿತು. ಮುಕ್ತ ಮಾರುಕಟ್ಟೆಯಲ್ಲಿ 2.30 ರೂಪಾಯಿಗೆ ಲಭ್ಯವಿದ್ದ ಸೋಲಾರ್ ವಿದ್ಯುತ್ತನ್ನು 9.50 ರೂಪಾಯಿ ಕೊಟ್ಟು ಖರೀದಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ವಿಚಿತ್ರವೆಂದರೆ, ಆ ಸದನ ಸಮಿತಿ ಕಥೆ ಏನಾಯಿತು ಎಂದರೆ ಕುರಿ ಕಾಯಲು ತೋಳವನ್ನೆ ಬಿಟ್ಟಂತೆ ಆಯಿತು. ಈಗ ನಾನು ಕೇಳುತ್ತೇನೆ, ತಾಕತ್ತು ಇದ್ದರೆ ಈಗ ಆ ಒಪ್ಪಂದವನ್ನು ರದ್ದು ಮಾಡಿ” ಎಂದು ಸವಾಲು ಹಾಕಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...