ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿ, ಜನರನ್ನು ಕಾಂಗ್ರೆಸ್‌ ಸರ್ಕಾರ ಯಾಮಾರಿಸಿದೆ: ಬಸವರಾಜ ಬೊಮ್ಮಾಯಿ ಕಿಡಿ

Date:

  • ರಾಜ್ಯಪಾಲರ ಭಾಷಣ ಸಪ್ಪೆಯಾಗಿದ್ದು, ಯಾವುದೇ ಜೀವಾಳ ಇಲ್ಲ
  • ಹೊಸ ದಿಕ್ಸೂಚಿ ಇಲ್ಲದೆ ಸರ್ಕಾರ ಕವಲು ದಾರಿಯಲ್ಲಿದೆ: ಟೀಕೆ

ರಾಜ್ಯಪಾಲರ ಭಾಷಣದಲ್ಲಿ ಭರವಸೆ ಮೂಡುವಂತಹ ಯಾವುದೇ ಮಾತು ಇರಲಿಲ್ಲ. ಸುಳ್ಳಿನ ಕಂತೆ ಅಂತ ಸಾಬೀತಾಗಿದೆ. ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿ, ಜನರನ್ನು ಯಾಮಾರಿಸುವ ಕೆಲಸ ಕಾಂಗ್ರೆಸ್‌ ಸರ್ಕಾರ ಮಾಡಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು.

ರಾಜ್ಯಪಾಲರ ಭಾಷಣದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ರಾಜ್ಯಪಾಲರ ಭಾಷಣ ಸಪ್ಪೆಯಾಗಿದ್ದು, ಯಾವುದೇ ಜೀವಾಳ ಇಲ್ಲ. ಹೊಸ ಸರ್ಕಾರ ಬಂದಾಗ, ಹೊಸ ಚೈತನ್ಯ, ಹೊಸ ದಿಕ್ಸೂಚಿ ಇಲ್ಲದೆ ಸರ್ಕಾರ ಕವಲು ದಾರಿಯಲ್ಲಿದೆ” ಎಂದು ಕಿಡಿಕಾರಿದರು.

“ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ ಕೊಡುವುದಾಗಿ ಹೇಳಿದ್ದರು. ಈ ಬಗ್ಗೆಯೂ ರಾಜ್ಯಪಾಲರಿಂದ ಸುಳ್ಳು ಹೇಳಿಸಲಾಗಿದೆ. ಈ ಸರ್ಕಾರಕ್ಕೆ ಅಭಿವೃದ್ಧಿಯ ಚಿಂತನೆಯಿಲ್ಲ. ಜವಾಬ್ದಾರಿಯಿಂದ ನುಸುಳಿಕೊಳ್ಳುತ್ತಿರುವ ಸರ್ಕಾರ ಇದು. ಅರ್ಥವಿಲ್ಲದೇ ಸುಮ್ಮನೆ ಬೊಗಳೆ ಭಾಷಣ ಮಾಡಿಸಿದ್ದಾರೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಸಹಿ ಮಾಡಿ ಹೇಳಿದ್ದರು. ಈಗ ಕೇಂದ್ರ ಸರ್ಕಾರ ಅಂತ ಹೇಳದೆ ಆಹಾರ ಭದ್ರತೆಯಲ್ಲಿ ಕೊಡುತ್ತೇವೆ ಅಂತಿದ್ದಾರೆ. ಅಕ್ಕಿಯನ್ನು ಕೇಂದ್ರ ಸರ್ಕಾರ ಕೊಡುತ್ತಿದೆ ಎಂದು ಹೇಳಲು ಅವರಿಗೆ ನಾಚಿಕೆಯಾಗಿದೆ” ಎಂದು ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ರಾಜಕೀಯ ಪಕ್ಷಗಳ ಒಡೆಯಲು ಇರುವ ಸಮಯ ಉದ್ಯೋಗ ಭರ್ತಿಗೆ ಏಕಿಲ್ಲ: ಮೋದಿ ಸರ್ಕಾರಕ್ಕೆ ಖರ್ಗೆ ತರಾಟೆ

ನಮ್ಮಲ್ಲಿ ಎಲ್ಲರೂ ಸಮರ್ಥರು!

ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, “ನಾಳೆಯಿಂದ ಅಧಿವೇಶನ ಅಧಿಕೃತವಾಗಿ ಆರಂಭವಾಗಲಿದೆ. ಅಷ್ಟರೊಳಗೆ ವಿಪಕ್ಷ ನಾಯಕನ ಆಯ್ಕೆಯಾಗಲಿದೆ‌. ಪ್ರತಿಪಕ್ಷದ ನಾಯಕನಾಗಲು ನಮ್ಮಲ್ಲಿರುವ 66 ಜನರು ಸಮರ್ಥರಿದ್ದಾರೆ. ಬಿಟ್ ಕಾಯಿನ್ ಪ್ರಕರಣ ಎಸ್‌ಐಟಿಗೆ ವಹಿಸಿದ್ದು ಒಳ್ಳೆದಾಯಿತು. ಸರ್ಕಾರ ಯಾವುದೇ ರೂಪದಲ್ಲಿ ಬೇಕಾದರೂ ತನಿಖೆ ಮಾಡಿಸಲಿ” ಎಂದರು.

ಬೆಂಕಿ ಇಲ್ಲದೆ ಹೊಗೆಯಾಡಲ್ಲ

ಸಿಎಂ ಕಚೇರಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯಿಸಿ, “ಅದು ಯಾವುದೋ ಸಣ್ಣ ಹುದ್ದೆ ಇರಬೇಕು ಅದಕ್ಕೆ 30 ಲಕ್ಷ‌ ರೂ. ಕೇಳಿದ್ದಾರೆ. ಅಲ್ಲಿ ಕೋಟ್ಯಂತರ ರೂಪಾಯಿ ಕೇಳುತ್ತಿದ್ದಾರೆ. ವರ್ಗಾವಣೆ ರದ್ದು ಆಗುವುದು, ಮತ್ತೆ ಅಧಿಕಾರಿ ಬಂದು ವರ್ಗಾವಣೆ ಮಾಡಿಸುವುದು. ಐಎಎಸ್‌, ಐಪಿಎಸ್ ಅಧಿಕಾರಿಗಳ ಮಾತೆ ಸ್ಪಷ್ಟವಾದ ಸಾಕ್ಷಿ, ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ‌” ಎಂದು ಎಚ್‌ಡಿಕೆ ಆರೋಪವನ್ನು ಸಮರ್ಥಿಸಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...