ಕಾಂಗ್ರೆಸ್‌ ಗ್ಯಾರಂಟಿ | ಯೋಜನೆ ಜಾರಿಗೆ ಪ್ರಾಥಮಿಕ ಅಂದಾಜು ಮೊತ್ತದ ಪಟ್ಟಿ ಸಲ್ಲಿಸಿದ ಆರ್ಥಿಕ ಇಲಾಖೆ

Date:

  • ಗ್ಯಾರಂಟಿ ಯೋಜನೆ ಜಾರಿಗೆ ತರಲು ವಾರ್ಷಿಕವಾಗಿ 52 ಸಾವಿರ ಕೋಟಿ ರೂ ಅಂದಾಜು
  • ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ಮುಖ್ಯಮಂತ್ರಿ ಸಭೆ, ಅಂದಾಜು ಪಟ್ಟಿ ಸಲ್ಲಿಕೆ

ಚುನಾವಣೆಗೆ ಮುನ್ನ ಕಾಂಗ್ರೆಸ್‌ ಘೋಷಿಸಿರುವ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ವಾರ್ಷಿಕವಾಗಿ 52 ಸಾವಿರ ಕೋಟಿ ರೂ. ಬೇಕಾಗಬಹುದು ಎಂದು ಆರ್ಥಿಕ ಇಲಾಖೆ ಅಧಿಕಾರಿಗಳು ಅಂದಾಜಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಅಧಿಕಾರಿಗಳು ಪ್ರಾಥಮಿಕ ಅಂದಾಜು ಪಟ್ಟಿ ಸಲ್ಲಿಸಿದ್ದಾರೆ.

ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವ ನಿಧಿ ಹಾಗೂ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಸೌಲಭ್ಯ ನೀಡುವ ಯೋಜನೆಗಳನ್ನು ಚುನಾವಣೆಗೆ ಮುನ್ನ ಕಾಂಗ್ರೆಸ್ ಘೋಷಿ‌ಸಿತ್ತು. ಈ ಗ್ಯಾರಂಟಿಗಳನ್ನು ಘೋಷಿಸುವಾಗ ಮೊದಲ ಸಚಿವ ಸಂಪುಟದಲ್ಲೇ ಜಾರಿ ಮಾಡಲಾಗುವುದು ಎಂದು ಭರವಸೆ ನೀಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿನ್ನೆಲೆಯಲ್ಲಿ ಜೂನ್‌ 1ರಂದು ಪೂರ್ಣಪ್ರಮಾಣದ ಸಚಿವರೊಂದಿಗೆ ಸಚಿವ ಸಂಪುಟ ಸಭೆ ನಡೆಯಲಿದೆ. ಹೀಗಾಗಿ ಹಣಕಾಸು, ಸಾರಿಗೆ, ಆಹಾರ ಮತ್ತು ನಾಗರಿಕ ಸರಬರಾಜು, ಇಂಧನ ಮತ್ತಿತರ ಇಲಾಖೆಗಳ ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿಯವರು ಯೋಜನೆಗಳನ್ನು ಜಾರಿಗೊಳಿಸುವ ವಿಚಾರದಲ್ಲಿ ವರದಿಯೊಂದನ್ನು ಸಿದ್ಧಪಡಿಸುವಂತೆ ತಿಳಿಸಿದ್ದಾರೆ.

ಯಾವ ಗ್ಯಾರಂಟಿಗೆ ಎಷ್ಟು ಹಣ ಬೇಕು

ಅನ್ನಭಾಗ್ಯ ಯೋಜನೆಗೆ 10 ಸಾವಿರ ಕೋಟಿ

ಸದ್ಯದ ಮಾಹಿತಿ ಪ್ರಕಾರ ಅನ್ನಭಾಗ್ಯದ ಯೋಜನೆಯನ್ನು 1.3 ಕೋಟಿ ಕುಟಂಬಗಳು ಪ್ರಯೋಜನ ಪಡೆಯುತ್ತಿವೆ. ಈ ಕುಟುಂಬಗಳ 4.30 ಕೋಟಿ ಜನರಿಗೆ ತಲಾ ಹತ್ತು ಕೆ.ಜಿ ಅಕ್ಕಿ ವಿತರಿಸಬೇಕು. ಇದಕ್ಕೆ ವಾರ್ಷಿಕವಾಗಿ ತಗಲುವ ವೆಚ್ಚ 10 ಸಾವಿರ ಕೋಟಿ.

ಗೃಹಲಕ್ಷ್ಮಿ ಯೋಜನೆಗೆ 24 ಸಾವಿರ ಕೋಟಿ

ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ ಎರಡು ಸಾವಿರ ರೂ. ಕೊಡುವುದಾಗಿ ಕಾಂಗ್ರೆಸ್‌ ತಿಳಿಸಿದೆ. ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಕುಟುಂಬಗಳನ್ನೇ ಲೆಕ್ಕಕ್ಕೆ ಪರಿಗಣಿಸಿದರೆ ವಾರ್ಷಿಕವಾಗಿ 24 ಸಾವಿರ ಕೋಟಿ ಬೇಕಾಗುತ್ತದೆ.

ಯುವನಿಧಿ ಯೋಜನಗೆ 1,200 ಕೋಟಿ

ಈ ವರ್ಷ ಪದವಿ ಮುಗಿಸಿಕೊಂಡು ಹೊರಬಂದವರಿಗೆ ಸೀಮಿತವಾಗಿ ಯುವನಿಧಿ ಜಾರಿಗೆ ತಂದರೂ ವಾರ್ಷಿಕವಾಗಿ 1,200 ಕೋಟಿ ಬೇಕಾಗುತ್ತದೆ. ಇನ್ನು, ಎಂಜನಿಯರಿಂಗ್‌ ಪದವೀಧರರು, ಸ್ನಾತಕೋತ್ತರ ಮತ್ತು ಪಿಎಚ್‌ಡಿ ಪದವೀಧರರನ್ನು ಈ ವ್ಯಾಪ್ತಿಗೆ ಪರಿಗಣಿಸಿದರೆ ಅಂದಾಜು ಮೊತ್ತ ಹೆಚ್ಚಾಗಬಹುದು.

ಮಹಿಳೆಯರಿಗೆ ಉಚಿತ ಪ್ರಯಾಣ

ಈ ಯೋಜನೆಯನ್ನು ಹೇಗೆ ಅನುಷ್ಠಾನ ಮಾಡಬೇಕು ಎಂಬುದು ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಪ್ರಯಾಣದ ದೂರದ ಮಿತಿ ಬಗ್ಗೆ ಸರ್ಕಾರ ಯೋಚಿಸುತ್ತಿದೆ ಎನ್ನುವ ಮಾಹಿತಿ ಇದೆ. ಅಂತಿಮವಾಗಿ ಸರ್ಕಾರ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕು.

ಗೃಹಜ್ಯೋತಿ ಯೋಜನೆಗೆ 12 ಸಾವಿರ ಕೋಟಿ

ಪ್ರತಿ ತಿಂಗಳಿಗೆ 200 ಯೂನಿಟ್‌ ವಿದ್ಯುತ್‌ ಉಚಿತ ಕೊಡುವುದಾಗಿ ಸರ್ಕಾರ ಗ್ಯಾರಂಟಿ ಮಾತು ಹೇಳಿದೆ. ಸದ್ಯಕ್ಕೆ ರಾಜ್ಯದಲ್ಲಿ 2.14 ಕೋಟಿಯಷ್ಟು ಗೃಹಬಳಕೆ ವಿದ್ಯುತ್‌ ಸಂಪರ್ಕಗಳಿವೆ. ಇದೆಲ್ಲದಕ್ಕೂ ಉಚಿತ ವಿದ್ಯುತ್‌ ನೀಡಿದರೆ ವಾರ್ಷಿಕವಾಗಿ 12,038 ಕೋಟಿ ಬೇಕಾಗಬಹುದು.

ಈ ಎಲ್ಲ ವಿಚಾರಗಳನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಯೋಜನೆಗಳನ್ನು ಯಾವ ರೀತಿ ಜಾರಿಗೊಳಿಸಬಹುದು ಎಂಬ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...