ದೇಶದ್ರೋಹಿಗಳ ಭದ್ರತೆಗೆ ನಿಲ್ಲುತ್ತಿರುವುದು ಅಧಿಕಾರದ ದುರುಪಯೋಗ: ಕಾಂಗ್ರೆಸ್‌ ವಿರುದ್ಧ ಯತ್ನಾಳ್‌ ಕಿಡಿ

Date:

  • ‘ಕಾಂಗ್ರೆಸ್‌ ಆದ್ಯತೆಗಳೇನು ಎಂಬುದು ಸಮಾಜಕ್ಕೆ ಗೊತ್ತಾಗುತ್ತದೆ’
  • ‘ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಭಯೋತ್ಪಾದಕ ಘಟನೆ’

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಗಳಲ್ಲಿ ಬಂಧಿತರಾಗಿರುವ ‘ಅಮಾಯಕ’ರನ್ನು ಬಿಡುಗಡೆಗೊಳಿಸಲು ಉಪಸಮಿತಿ ರಚಿಸಿ ಅವರನ್ನು ಬಂಧ ಮುಕ್ತ ಮಾಡುವ ಉತ್ಸಾಹ, ಉತ್ಸುಕತೆ, ಉಮೇದು ಬಾಂಗ್ಲಾ ನುಸುಳುಕೋರರನ್ನು ಹತ್ತಿಕ್ಕಲು ತೋರದೆ ಇರುವುದು ಇವರ ಆದ್ಯತೆಗಳೇನು ಎಂದು ಸಮಾಜಕ್ಕೆ ಗೊತ್ತಾಗುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಭಯೋತ್ಪಾದಕ ಘಟನೆ ಎಂದು ಮಾನ್ಯ ಉಚ್ಚ ನ್ಯಾಯಾಲಯವೇ ಹೇಳಿರುವಾಗ, ಸರ್ಕಾರ ರಾಜ್ಯದ ಆಂತರಿಕ ಭದ್ರತೆ, ನುಸುಳುಕೋರರ ಪತ್ತೆ, ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು, ಬ್ಯಾಂಕ್ ಅವ್ಯವಹಾರಗಳ ತನಿಖೆಗಳನ್ನು ಚುರುಕು ಮಾಡುವ ಬದಲಾಗಿ ದೇಶ ವಿರೋಧಿಗಳ ಪರವಾಗಿ ನಿಂತಿದೆ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಧಿಕೃತ ಶಾಲೆಗಳಿಗೆ ಬೀಗಮುದ್ರೆ ಶಿಕ್ಷೆ; ಭ್ರಷ್ಟ ಅಧಿಕಾರಿಗಳಿಗೆ ಯಾಕೆ ರಕ್ಷೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಚಿವ ಸಂಪುಟದಲ್ಲೂ ಇದನ್ನು ಅನುಮೋದಿಸಿಕೊಂಡು ದೇಶದ್ರೋಹಿಗಳ ಭದ್ರತೆಗೆ ನಿಲ್ಲುತ್ತಿರುವುದು ಅಧಿಕಾರದ ದುರುಪಯೋಗ, ಅಲ್ಪಸಂಖ್ಯಾತರ ಓಲೈಕೆ ಹಾಗೂ ರಾಜ್ಯದ ಜನರಿಗೆ ಬಗೆದ ಅನ್ಯಾಯ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರು ಅಮಾಯಕರೇ? ಕಲ್ಲು ಹೊಡೆದು ಹಿಂದೂಗಳ ಮನೆ ಜಖಂ ಮಾಡಿದವರು ಅಮಾಯಕರೇ? ಅಂದಿನ ಕಾಂಗ್ರೆಸ್ ಶಾಸಕರಾದ ದಲಿತ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿದವರು ಅಮಾಯಕರೇ? ಡಿಸಿಪಿ ಕಾರ್ ಧ್ವಂಸ ಮಾಡಿದವರು ಅಮಾಯಕರೇ? ಪೋಲೀಸರ ಮೇಲೆ ದಾಳಿ ಮಾಡಿದವ್ರು ಅಮಾಯಾಕರೇ?”ಎಂದು ಲೇವಡಿ ಮಾಡಿದ್ದಾರೆ.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...