ಜೆಡಿಎಸ್ 19 ಸ್ಥಾನ ಗೆದ್ದಿದ್ದರೂ ಕಾಂಗ್ರೆಸ್‌ಗೆ ಈಗಲೂ ಭಯವಿದೆ: ಎಚ್‌ ಡಿ ಕುಮಾರಸ್ವಾಮಿ

Date:

  • ‘ರಾಜ್ಯದ ಇಂಟೆಲಿಜೆನ್ಸ್ ಹೇಗೆ ಕೆಲಸ ಮಾಡುತ್ತಿದೆ ಇಲ್ಲೇ ಗೊತ್ತಾಗುತ್ತದೆ’
  • ಕುಟುಂಬ ಸಮೇತ ಹೋಗಿದ್ದು ಯೂರೋಪ್‌ಗೆ ಹೊರತು ಸಿಂಗಾಪುರಕ್ಕಲ್ಲ

ನಮ್ಮ ರಾಜ್ಯದ ಇಂಟೆಲಿಜೆನ್ಸ್ ಹೇಗೆ ಕೆಲಸ ಮಾಡುತ್ತಿದೆ ಎಂದು ಇಲ್ಲೇ ಗೊತ್ತಾಗುತ್ತೆ. ನಾನು ಕುಟುಂಬ ಸಮೇತ ಯೂರೋಪ್ ಪ್ರವಾಸಕ್ಕೆ ಹೋಗಿದ್ದೆವು. ಅದನ್ನೇ ಕೆಲವರು ಸರ್ಕಾರ ಕೆಡವಲು ಸಿಂಗಾಪುರಕ್ಕೆ ಹೋಗಿದ್ದರು ಎಂದು ಬಿಂಬಿಸಿದರೆ ನಾವೇನು ಮಾಡೋಕೆ ಆಗುತ್ತದೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ತಿರುಗೇಟು ನೀಡಿದರು.

ವಿದೇಶಿ ಪ್ರವಾಸ ಮುಗಿಸಿಕೊಂಡು ಬಂದಿರುವ ಕುಮಾರಸ್ವಾಮಿ ಗುರುವಾರ ತಡರಾತ್ರಿ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಸುದ್ದಿಗಾರರ ಜೊತೆ ಮಾತನಾಡಿ, “ಜೆಡಿಎಸ್ ಪಕ್ಷ 19 ಸ್ಥಾನಗಳನ್ನು ಮಾತ್ರ ಗೆದ್ದಿದ್ದರೂ ಅವರಿಗೆ ನಮ್ಮ ಮೇಲೆ ಭಯ ಎಷ್ಟಿದೆ ಅನ್ನೋದು ಇದನ್ನು ನೋಡಿಯೇ ತಿಳಿಯುತ್ತದೆ” ಎಂದು ವ್ಯಂಗ್ಯವಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕ್ಯಾಂಪಸ್ಸುಗಳಲ್ಲಿ ಜಾತಿ ನಿಂದನೆ- ಬಿಗಿ ಕಾಯಿದೆ ಜಾರಿಯಾಗಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್ ಸರ್ಕಾರವನ್ನು ಕೆಡವಲು ಕೆಲವರು ಸಿಂಗಾಪುರಕ್ಕೆ ಹೋಗಿ ಬಿಜೆಪಿ ಜೊತೆಗೆ ಷಡ್ಯಂತ್ರ ನಡೆಸುತ್ತಿದ್ದಾರೆ” ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪ ಮಾಡಿದ್ದರು. ಈ ವಿಚಾರವಾಗಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಮುಂದುವರಿದು, “ನಾವು ಯೂರೋಪ್‌ಗೆ ಕುಟುಂಬ ಸಮೇತ ಹೋಗಿದ್ದೆವು. ಕುಟುಂಬ ಸಮೇತ ವಿದೇಶಗಳಿಗೆ ಹೋದಾಗ ಅಲ್ಲೆಲ್ಲಾ ರಾಜಕೀಯ ಮಾಡಲು ಆಗುತ್ತಾ” ಎಂದು ಸುದ್ದಿಗಾರರನ್ನೇ ಪ್ರಶ್ನಿಸಿದರು.

ಪೆನ್ ಡ್ರೈವ್ ಬಿಡಲ್ಲ

ಸದ್ಯಕ್ಕೆ ಯಾವುದೇ ಪೆನ್ ಡ್ರೈವ್ ಕೊಡಲ್ಲ. ಆಯ್ಕೆ ಮಾಡಿ ಅಧಿಕಾರ ಕೊಟ್ಟ ನಾಡಿನ ಜನತೆಗೆ ಎಲ್ಲಾ ಗೊತ್ತಾಗಬೇಕು. ಜನರಿಗೆ ಈ ವರ್ಷ ಎಲ್ಲ ಗ್ಯಾರಂಟಿ ಕೊಡ್ತಾರಾ, ಸಾವಿರಾರು ಕೋಟಿ ಸಾಲ ಮಾಡಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಹರಿಹಾಯ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...