ಶಿಡ್ಲಘಟ್ಟ ಸೋಮೇಶ್ವರ ದೇವಾಲಯಕ್ಕೆ ₹5 ಲಕ್ಷ ದೇಣಿಗೆ ನೀಡಿದ ಕಾಂಗ್ರೆಸ್‌ ಮುಖಂಡ ಪುಟ್ಟು ಆಂಜಿನಪ್ಪ

Date:

ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರದ ಹೃದಯಭಾಗದಲ್ಲಿರುವ ಕೋಟೆ ವೃತ್ತದ ಐತಿಹಾಸಿಕ ಶ್ರೀ ಸೋಮೇಶ್ವರ ಸ್ವಾಮಿ ದೇವಾಲಯದ ಪುನರ್ ನಿರ್ಮಾಣ ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್ ಮುಖಂಡ ಹಾಗೂ ಸಮಾಜ ಸೇವಕ ಪುಟ್ಟು ಆಂಜಿನಪ್ಪ ವೈಯುಕ್ತಿಕವಾಗಿ ₹5 ಲಕ್ಷಗಳ ದೇಣಿಗೆ ನೀಡಿದ್ದಾರೆ.

ಇತಿಹಾಸಕಾರರ ಪ್ರಕಾರ ಶಿಡ್ಲಘಟ್ಟದ ಮೊದಲ ದೇವಾಲಯವೆಂದು ಗುರುತಿಸಲ್ಪಡುವ ಈ ದೇವಾಲಯವನ್ನು ಅಬ್ಲೂಡು ಕೆಂಪೇಗೌಡರ ಪತ್ನಿ ಅಲಸೂರಮ್ಮ ಹಾಗೂ ಮಗ ಶಿವನೇಗೌಡರು ಕ್ರಿಶ 500 ರಲ್ಲಿ ಪ್ರತಿಷ್ಠಾಪನೆ ಮಾಡಿದ್ದರು. ಮೊಘಲರ ದಾಳಿಗೆ ತುತ್ತಾಗಿ ಶಿಥಿಲವಾಗಿದ್ದ ದೇವಾಲಯ ಎರಡು ಬಾರಿ ನವೀಕರಣಗೊಂಡಿದ್ದು ಇದೀಗ ಮೂರನೆಯ ಬಾರಿಗೆ ಪುನರುಜ್ಜೀವ ಗೊಳ್ಳಲು ಸಜ್ಜಾಗುತ್ತಿದ್ದು, ಇತಿಹಾಸದ ಪುಟಗಳಲ್ಲಿ ದಾಖಲಾಗಿರುವಂತೆ ಕೋಟೆಯ ದ್ವಾರದಲ್ಲಿ ನಿಂತಿರುವ ಈ ದೇವಾಲಯವು ಶಿಡ್ಲಘಟ್ಟದ ಪೌರಾಣಿಕತೆ ಹಾಗೂ ನಗರ ನಿರ್ಮಾಣದ ಸಂಕೇತವಾಗಿದೆ.

ಈ ನವೀಕರಣ ಯೋಜನೆಗೆ ಭಕ್ತರಿಂದ ತನು-ಮನ-ಧನದ ನೆರವು ಲಭಿಸುತ್ತಿದ್ದು, ಪುಟ್ಟು ಆಂಜಿನಪ್ಪನವರಿಂದ ಬಂದ ಐದು ಲಕ್ಷ ನೆರವು, ನಿಜಾರ್ಥದಲ್ಲಿ ದೇವಾಲಯದ ಪುನರ್ ಜೀವಕ್ಕೆ ಪ್ರಾಣವಾಗಿದೆ. ದೇವರ ಸೇವೆ ಎಂಬ ಧರ್ಮ, ಜನರ ಸೇವೆ ಎಂಬ ಕರ್ತವ್ಯ ಈ ಇಬ್ಬರ ನಡುವೆ ಸೇತುವೆಯಾಗಿ, ಆಂಜಿನಪ್ಪನವರು ತಮ್ಮ ಆತ್ಮೀಯ ಶ್ರದ್ಧೆಯೊಂದಿಗೆ ಈ ಕೊಡುಗೆಯನ್ನು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಚಿಕ್ಕಬಳ್ಳಾಪುರ | ಅಲಿಪುರ ಗ್ರಾಮದಲ್ಲಿ ಅದ್ದೂರಿ ಮೊಹರಂ ಆಚರಣೆ

ಇಡೀ ಶಿಡ್ಲಘಟ್ಟದಲ್ಲಿ ಶಿಕ್ಷಣ, ಆರೋಗ್ಯ, ಗ್ರಾಮಾಭಿವೃದ್ಧಿ ಕ್ಷೇತ್ರಗಳಾದ್ಯಂತ ಆಳವಾದ ಸಾಮಾಜಿಕ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿರುವ ಪುಟ್ಟು ಆಂಜಿನಪ್ಪ ಈಗ ದೇವಾಲಯ ಪುನರ್ ನಿರ್ಮಾಣ ಕಾರ್ಯಕ್ಕೂ ಕೈಜೋಡಿಸಿದ್ದಾರೆ. ತಾಲೂಕಿನ ಹಲವಾರು ಹಳ್ಳಿಗಳಲ್ಲಿಯೂ ಅವರು ದೇವಸ್ಥಾನಗಳ ನಿರ್ಮಾಣಕ್ಕೆ ನೆರವಿನ ಹಸ್ತ ನೀಡಿದ್ದಾರೆ.

ಈ ಸಂದರ್ಭದಲ್ಲಿ ದೇವಾಲಯದ ಟ್ರಸ್ಟ್ ಅಧ್ಯಕ್ಷ ಡಾಲ್ಫಿನ್ ನಾಗರಾಜ್, ಖಜಾಂಚಿ ಅನಿಲ್, ರೂಪಸಿ ರಮೇಶ್, ಶ್ರೀನಾಥ್, ಬಳೆ ರಘು, ಚಿಕ್ಕಮನಿಯಪ್ಪ, ಗ್ಯಾಸ್ ಮುರಳಿ, ಮಯೂರ ಸರ್ಕಲ್ ರಾಜ್ ಕುಮಾರ್, ಮುರಳಿ, ಕನ್ನಡಪರ ರಾಮಾಂಜಿ, ಶ್ರೀನಿವಾಸ್ ಚಿನ್ನಿ, ದಾಮೋದರ್, ಸಾಧಿಕ್, ತುಮ್ಮನಹಳ್ಳಿ ವೆಂಕಟೇಶ್, ಬೂದಳ ವರದರಾಜ್, ವಾರುಹುಣಸೆಹಳ್ಳಿ ಮಂಜುನಾಥ್ ಸೇರಿದಂತೆ ಅನೇಕರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...