ಚಿಕ್ಕಬಳ್ಳಾಪುರ | ಸಂಸದರಿಗೆ ನೈತಿಕತೆ ಇದ್ದರೆ ರಾಜೀನಾಮೆ ಕೊಟ್ಟು ಮಾತನಾಡಲಿ : ಭರಣಿ ವೆಂಕಟೇಶ್‌

Date:

ಸಂಸದ ಸುಧಾಕರ್‌ ಅವರು ನೈತಿಕತೆ ಇದ್ದರೆ ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಆನಂತರ ಮಾತನಾಡಬೇಕು ಎಂದು ಕೋಚಿಮುಲ್‌ ನಿರ್ದೇಶಕ ಭರಣಿ ವೆಂಕಟೇಶ್‌ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದಾ ವೈಯಕ್ತಿಕ ಟೀಕೆಗಳಿಗೆ ಇಳಿಯುವ ಬಿಜೆಪಿಯವರು ಶಾಸಕರ ತಂದೆ-ತಾಯಿ ಸಾವಿನ ಕುರಿತು ಸುದ್ದಿಗೋಷ್ಠಿಯಲ್ಲಿ ಟೀಕೆ ಮಾಡಿದ್ದಾರೆ. ಇವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಗುಡುಗಿದರು.

ಎಲ್ಲರೂ ವೈಯಕ್ತಿಕ ನಿಂದನೆಗಳನ್ನು ನಿಲ್ಲಿಸಬೇಕು. ಅಭಿವೃದ್ಧಿ ವಿಚಾರವಾಗಿ ಪ್ರಶ್ನೆ ಮಾಡಿ. ಯಾವುದೇ ಪಕ್ಷದವರೇ ಆಗಲಿ, ವೈಯಕ್ತಿಕ ನಿಂದನೆ ಮಾಡುವುದು ತಪ್ಪು. ವೈಯಕ್ತಿಕ ನಿಂದನೆಗಳಿಂದ ರಾಜಕಾರಣಿಗಳು ತಮ್ಮ ಮೌಲ್ಯ ಕಳೆದುಕೊಳ್ಳುತ್ತಿದ್ದಾರೆ.‌ ಜನರಿಂದ ಅಗೌರವಕ್ಕೆ ಗುರಿಯಾಗುತ್ತಿದ್ದಾರೆ ಎಂದು ವಿಷಾಧ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಭಿವೃದ್ಧಿ ವಿಚಾರವಾಗಿ ಪ್ರಶ್ನೆ ಮಾಡುವ ಬಿಜೆಪಿಯವರಿಗೆ ಚಿಕ್ಕಬಳ್ಳಾಪುರ ನಗರದ ಪೋಶೆಟ್ಟಿಹಳ್ಳಿ, ತೋಂಡೇನಹಳ್ಳಿ, ಮುದ್ದೇನಹಳ್ಳಿ, ದಿಬ್ಬೂರು ರಸ್ತೆ ಸೇರಿದಂತೆ ನಗರದ ಹಲವೆಡೆ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳೇ ಶಾಸಕರ ಮಾಡುತ್ತಿರುವ ಅಭಿವೃದ್ಧಿಗೆ ಸಾಕ್ಷಿ ಎಂದರು.

ಅದಷ್ಟೇ ಅಲ್ಲದೆ 25 ಕೋಟಿ ವಿಶೇಷ ಅನುದಾನದ ಕ್ರಿಯಾ ಯೋಜನೆ ಸಹ ತಯಾರಿ ಹಂತದಲ್ಲಿದೆ. ಎತ್ತಿನಹೊಳೆ ಯೋಜನೆಯಡಿ ಕಾಂಕ್ರೀಟ್‌ ರಸ್ತೆಗಳ ನಿರ್ಮಾಣಕ್ಕೆ 6 ಕೋಟಿ ರೂಪಾಯಿಯ ಟೆಂಡರ್‌ ಪ್ರಕ್ರಿಯೆ ನಡೆಯುತ್ತಿದೆ. ಇದು ನಗರ ಶಾಸಕರು ಮಾಡುತ್ತಿರುವ ಅಭಿವೃದ್ಧಿ ಕೆಲಸಗಳು ಎಂದು ಮಾಹಿತಿ ನೀಡಿದರು.

ಮಾನ್ಯ ಸಂಸದರು ಈ ಹಿಂದೆ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದಾಗ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಎಂ.ಆರ್.‌ಐ ಸ್ಕ್ಯಾನಿಂಗ್‌ ಸೌಲಭ್ಯವನ್ನು ಸಹ ಮಾಡಿಕೊಡಲಿಲ್ಲ. ಆದರೆ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್‌ ಅವರು ಜಿಲ್ಲಾಸ್ಪತ್ರೆಗೆ ಎಂ.ಆರ್.‌ಐ ಸ್ಕ್ಯಾನಿಂಗ್‌ ಸೌಲಭ್ಯವನ್ನು ಕಲ್ಪಿಸಿದರು ಎಂದು ಕಾಲೆಳೆದರು.

ಇನ್ನು ಆರ್.ಆರ್ ನಗರ ಶಾಸಕ ಮುನಿರತ್ನಂ ನಾಯ್ಡು ಅವರ ವಿಚಾರವಾಗಿ ಮಾತನಾಡಿದ ಭರಣಿ ವೆಂಕಟೇಶ್, ಹೆಣ್ಣುಮಕ್ಕಳನ್ನು ಹೀನಾಯವಾಗಿ ಮಾತಾಡುವ ಬಿಜೆಪಿ ಶಾಸಕರನ್ನು ಆರ್.ಎಸ್.ಎಸ್ ಹೇಗೆ ಸಹಿಸಿಕೊಳ್ಳುತ್ತಿದೆ. ಒಕ್ಕಲಿಗರು ಎಂಬ ಕಾರಣಕ್ಕೆ ಮೂರು ಮಂದಿ ಪಾಲಿಕೆ ಸದಸ್ಯೆಯರ ಮೇಲೆ ಹಲ್ಲೆ ಮಾಡಿಸಿ, ದರ್ಪ ತೋರಿದ್ದಾರೆ. ಪ.ಜಾತಿಯವರ ಕುರಿತು ಜಾತಿ ನಿಂದನೆ ಮಾಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಬಿಜೆಪಿಯವರು ಯಾವ ರೀತಿ ಸಂದೇಶ ಕೊಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಈ ಕೂಡಲೇ ಶಾಸಕ ಮುನಿರತ್ನಂ ನಾಯ್ಡು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕು. ಇಲ್ಲವಾದರೆ ಎಸ್ಸಿ ಮತ್ತು ಒಕ್ಕಲಿಗ ಸಮುದಾಯಗಳು ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಬ್ಲಾಕ್ ಕಾಂಗ್ರೆಸ್‌ ತಾಲೂಕು ಅಧ್ಯಕ್ಷ ಕೆ.ಎನ್.ಜಯರಾಮ್‌ ಮಾತನಾಡಿ, ಸಂಸದರು ಬೆಂಗಳೂರಿನ ಏಸ್‌ ಮೈಕ್ರೋಮ್ಯಾಟಿಕ್‌ ಸಮೂಹ ಸಂಸ್ಥೆಯು ಕುಪ್ಪಳ್ಳಿ ಗ್ರಾಪಂ ವ್ಯಾಪ್ತಿಯ ಕುಡುವತಿ ಸರಕಾರಿ ಶಾಲೆಗೆ ಕೊಠಡಿ, ಶೌಚಾಲಯ ನಿರ್ಮಿಸಿಕೊಟ್ಟಿದ್ದು, ಸಂಸದರ ನೇತೃತ್ವದಲ್ಲಿ ಉದ್ಘಾಟನೆಯಾಗಬೇಕು ಎಂಬ ಕಾರಣಕ್ಕೆ, ಕೊಠಡಿ ಉದ್ಘಾಟನೆ ಮಾಡದಂತೆ ಅಡ್ಡಿಪಡಿಸುವ ಮೂಲಕ ತಮ್ಮ ವ್ಯಕ್ತಿತ್ವ ಏನೆಂಬುದನ್ನು ಪ್ರದರ್ಶಿಸಿದ್ದಾರೆ. ಆದರೆ, ನಮ್ಮ ಶಾಸಕರು ಆ ರೀತಿ ಮಾಡದೇ ಉದ್ಘಾಟನೆಗೆ ಅನವು ಮಾಡಿಕೊಟ್ಟಿದ್ದಾರೆ. ಇದು ಶಾಸಕರ ದೊಡ್ಡ ಗುಣ. ಬಿಜೆಪಿಯವರು ವೈಯಕ್ತಿಕ ನಿಂದನೆಗಳನ್ನು ಬಿಡಬೇಕು. ಅಭಿವೃದ್ಧಿ ವಿಚಾರವಾಗಿ ಮಾತಾಡೋಣ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಪ್ರಧಾನಿಯಾಗಿ ನೂರು ದಿನ: ಹಿನ್ನಡೆಯೋ, ಮುನ್ನಡೆಯೋ?

ಸುದ್ದಿಗೋಷ್ಠಿಯಲ್ಲಿ ಅಡ್ಡಗಲ್ಲು ಶ್ರೀಧರ್, ಜನಾರ್ಧನ್, ಆವಲರೆಡ್ಡಿ, ಲಕ್ಷ್ಮಣ್‌ ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...