ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನೆ ಮಾಡಿದ ವಿಜಯಕುಮಾರ್ ಗೆ ಕಾಂಗ್ರೆಸ್ ಮುಖಂಡರಿಂದ ವಾಗ್ದಾಳಿ

Date:

ಕೋಲಾರ: ಬೆಂಗಳೂರು ಸಿಟಿಯಲ್ಲಿ ಬದುಕು ಕಟ್ಟಿಕೊಂಡಿರುವ ಜೆಡಿಎಸ್ ಮುಖಂಡ ಕಡಗಟ್ಟೂರು ವಿಜಯಕುಮಾರ್ ಅವರಿಗೆ ಏನು ಗೊತ್ತು ಗ್ರಾಮೀಣ ಜನರ ಬದುಕಿನ ಕಷ್ಟ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಜನರ ಬದುಕಿನಲ್ಲಿ ಬದಲಾವಣೆ ತಂದು ನೆಮ್ಮದಿಯಾಗಿ ಬದುಕುವಂತೆ ಮಾಡಿದ್ದಾರೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತಾಡುವ ನೈತಿಕತೆಯಿಲ್ಲ ಕಡಗಟ್ಟೂರು ವಿಜಯಕುಮಾರ್ ಅವರಿಗೆ ಇಲ್ಲ ಎಂದು ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದರು

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ಸರ್ಕಾರ ಬಂದನಂತರದಲ್ಲಿ ಕೊತ್ತೂರು ಮಂಜುನಾಥ್ ಶಾಸಕರಾಗಿ ವಿಜಯಕುಮಾರ್ ಅವರ ಸ್ವಗ್ರಾಮವಾದ ಕಡಗಟ್ಟೂರುಗೆ ಮಾತ್ರವೇ 25 ಪಕ್ಷ ಅನುದಾನದಲ್ಲಿ ಅಭಿವೃದ್ಧಿ ಮಾಡಲಾಗಿದೆ ಎತ್ತಿನಹೊಳೆ ಯೋಜನೆಯಲ್ಲಿ ಸಹ ಮತ್ತೆ 25 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ ಹಿಂದೆ ಜೆಡಿಎಸ್ ಶಾಸಕರಿದ್ದ ಸಂದರ್ಭದಲ್ಲಿ ಎಷ್ಟು ಅನುದಾನ ಬಿಡುಗೆಯಾಗಿದೆ ಎಷ್ಟು ಅಭಿವೃದ್ಧಿಯಾಗಿದೆ ಎಂಬುದನ್ನು ಬಹಿರಂಗ ಪಡಿಸಲಿ ಕಾಂಗ್ರೆಸ್ ಸರ್ಕಾರದಿಂದ ಕೋಲಾರ ಕ್ಷೇತ್ರಕ್ಕೆ 150 ಕೋಟಿ ಅನುದಾನ ಬಂದಿದೆ ಮುಂದಿನ ಬಜೆಟ್ ನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು, ರಿಂಗ್ ರಸ್ತೆಗೆ ಅನುದಾನ ಬರಲಿದೆ ಇಂತಹ ಗುರುತರವಾದ ಒಂದು ಯೋಜನೆಯನ್ನು ತಿಳಿಸಲಿ ಎಂದು ಸವಾಲು ಹಾಕಿದರು.

ಕಾಂಗ್ರೆಸ್ ಸರ್ಕಾರದದ ಜನಪರ ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಹಾಗೂ ಯುವನಿಧಿ ಜನಸಾಮಾನ್ಯರಿಗೆ ನೆಮ್ಮದಿ ಆರ್ಥಿಕ ಭದ್ರತೆ ಮತ್ತು ಆತ್ಮವಿಶ್ವಾಸ ಮಹಿಳೆಯರಿಗೆ ಕುಟುಂಬದ ಆರ್ಥಿಕ ಒತ್ತಡವನ್ನು ಕಡಿಮೆ ಮಾಡಿದೆ ಇದರಲ್ಲಿ ಒಂದು ರೂಪಾಯಿ ಕೂಡ ಭ್ರಷ್ಟಾಚಾರ ನಡೆದಿಲ್ಲ ನೇರವಾಗಿ ಫಲಾನುಭವಿಗಳಿಗೆ ಸೇರಿದೆ ಟೀಕಿಸುತ್ತಿದ್ದವರೇ ದೇಶದ ಇತರೆ ರಾಜ್ಯಗಳಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡುವ ಮೂಲಕ ನಮ್ಮ ಯೋಜನೆಯನ್ನು ನಕಲು ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಸರ್ಕಾರದ ಯೋಜನೆ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ ಹಿಂದೆ ಇದ್ದ ಸರ್ಕಾರದ ಹಾಗೆ 40% ಬಿಜೆಪಿ ಸರ್ಕಾರವಾಗಿಲ್ಲ ಎಂದರು.

ಇದನ್ನು ಓದಿದ್ದೀರಾ..? ಮಾರ್ಕಂಡೇಶ್ವರ ಜಾತ್ರಾ ಮಹೋತ್ಸವ ಭಕ್ತಾದಿಗಳಿಗೆ ನೀರು ಮಜ್ಜಿಗೆ ವಿತರಣೆಗೆ ಶಾಸಕ ಕೊತ್ತೂರು ಮಂಜುನಾಥ್ ಚಾಲನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಕೊನೆಯ ಸರ್ಕಾರವೆಂದು ಅವಹೇಳನ ಮಾಡಿದ್ದಾರೆ ಜೆಡಿಎಸ್ ಪಕ್ಷವು ರಾಜ್ಯದಲ್ಲಿ ಎಷ್ಟು ಸ್ಥಾನ ಪಡೆದಿದೆ ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಲಿ‌ 2013 ರಲ್ಲಿ 40 ಸ್ಥಾನ, 2018 ರಲ್ಲಿ 37 ಸ್ಥಾನ, 2023 ರಲ್ಲಿ 19 ಸ್ಥಾನಕ್ಕೆ ಸೀಮಿತವಾಗಿತ್ತು ತಮ್ಮ ಪಕ್ಷ ಮುಳುಗುತ್ತಿರುವ ಪಕ್ಷ ವಾಗಿದೆ ಕಾಂಗ್ರೆಸ್ ಬಗ್ಗೆ ಮಾತಾಡತ್ತಾರೆ ಎಂದು ಕಡಗಟ್ಟೂರು ವಿಜಯಕುಮಾರ್ ವಿರುದ್ದ ತಾಲೂಕು ಶಿಕ್ಷಣ ಸಮಿತಿ ಸದಸ್ಯ ಅಮ್ಮನಲ್ಲೂರು ನಾಗೇಶ್ ವೇಮಗಲ್- ಕುರುಗಲ್ ಪಟ್ಟಣ ಪಂಚಾಯಿತಿ ಸದಸ್ಯ ತಿರುಮಳಪ್ಪ ನಾಚಹಳ್ಳಿ ದೇವರಾಜ್‌ ವಾಗ್ದಾಳಿ ನಡೆಸಿದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...