ಕೋಲಾರ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು 2026 -27 ನೇ ಸಾಲಿನ ಬಜೆಟ್ ನಲ್ಲಿ ಕೋಲಾರಕ್ಕೆ ವೈದ್ಯಕೀಯ ಮೆಡಿಕಲ್ ಕಾಲೇಜು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ ಕೋಲಾರ ಕಾಂಗ್ರೆಸ್ ಮುಖಂಡರು.
ಈ ಸಂದರ್ಭದಲ್ಲಿ ಕೋಲಾರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸೈಯದ್ ಅಪ್ಸರ್ ಮಾತನಾಡಿ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ದಾಖಲೆಯ 17ನೇ ಬಜೆಟ್ ಮಂಡನೆ ಮಾಡಿದ್ದು ಕೋಲಾರ ಜಿಲ್ಲೆಗೆ ವೈದ್ಯಕೀಯ ಮೆಡಿಕಲ್ ಕಾಲೇಜು, ನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಪೋಲಿಸ್ ಠಾಣೆ ಹಾಗೂ ರೈತರಿಗೆ ಕೈಗೆಟಕುವ ಬೆಲೆಯಲ್ಲಿ ಕೃಷಿ ಪರಿಕರಗಳನ್ನು ಮಾರಾಟ ಮಾಡಲು ರೈತ ಮಾಲ್ ಮಂಜೂರು ಮಾಡಿಲಾಗಿದ್ದು ಜಿಲ್ಲೆಯ ಜನರ ಪರವಾಗಿ ಕಾಂಗ್ರೆಸ್ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸುತ್ತೇವೆ.
ನಮ್ಮ ಜನಪ್ರಿಯ ಶಾಸಕರಾದ ಕೋತ್ತೂರ್ ಮಂಜುನಾಥ್ ರವರ ಕಾಳಜಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್,ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ವಿಧಾನಪರಿಷತ್ ಸದಸ್ಯರಾದ ಅನೀಲ್ ಕುಮಾರ್ ಹಾಗೂ ಮಾಲೂರು ಶಾಸಕ ನಂಜೇಗೌಡ ರವರ ಸಹಯೋಗದೊಂದಿಗೆ ಇಂದು ಮೆಡಿಕಲ್ ಕಾಲೇಜು ಘೋಷಣೆ ಯಾಗಿದ್ದು ಕೋಲಾರದ ಜನರಿಗೆ ಇಂದು ಐತಿಹಾಸಿಕ ದಿನವಾಗಿದೆ ಯಾಕಂದ್ರೆ ಇದುವರೆಗೂ ಕೋಲಾರಕ್ಕೆ ಮೆಡಿಕಲ್ ಕಾಲೇಜು ಬಂದಿಲ್ಲಾ ಶಾಸಕ ಕೋತ್ತೂರ್ ಮಂಜುನಾಥ್ ರವರು ಬಹಳಷ್ಟು ಶ್ರಮ ಪಟ್ಟು ನಮ್ಮ ಕೋಲಾರಕ್ಕೆ ಒಳ್ಳೆಯ ಸುದ್ದಿ ತಂದಿದ್ದಾರೆ ಹಾಗೂ ಸಾವಿರಾರು ಕೋಟಿ ಅನುದಾನ ತಂದು ಅಭಿವೃದ್ಧಿ ಸಹ ಮಾಡುತ್ತಿದ್ದಾರೆ ಎಂದರು.
ಕೋಲಾರ ಪರಿಶಿಷ್ಟ ಪಂಗಡದ ವಿಭಾಗದ ಜಿಲ್ಲಾಧ್ಯಕ್ಷ ಅಂಬರೀಶ್ ರವರು ಮಾತನಾಡಿ ಕೋಲಾರಕ್ಕೆ ಇಂದು ವಿಶೇಷವಾದ ದಿನವಾಗಿದೆ ಕಾಂಗ್ರೆಸ್ ಅಂದ್ರೆ ಬಡವರ ಪರವಾಗಿದೆ ರಾಜ್ಯ ಸರ್ಕಾರ ನಮ್ಮ ಜಿಲ್ಲೆಗೆ ಮೆಡಿಕಲ್ ಕಾಲೇಜು ಹಾಗೂ ರೈತರಿಗೆ ಮಾಲ್ ಗೆ ಬಜೆಟ್ ನಲ್ಲಿ ಮಂಜೂರು ನೀಡಿದ್ದು ಬಹಳ ಸಂತಸದ ವಿಷಯವಾಗಿದೆ.
ಕಳೆದ ಬಜೆಟ್ ನಲ್ಲಿ ಕೋಲಾರಕ್ಕೆ ಪಿಪಿಪಿ ಮಾಡೆಲ್ ಮೆಡಿಕಲ್ ಕಾಲೇಜು ಘೋಷಣೆ ಮಾಡಿದ್ರು ಆದರೆ ಸಾರ್ವಜನಿಕ ಅಹವಾಲನ್ನು ಶಾಸಕ ಕೋತ್ತೂರ್ ಮಂಜುನಾಥ್, ನಸೀರ್ ಅಹ್ಮದ್, ಅನೀಲ್ ಕುಮಾರ್ ರವರು ಸರ್ಕಾರಕ್ಕೆ ಒತ್ತಡ ತಂದು ಸರ್ಕಾರಿ ಮೆಡಿಕಲ್ ಕಾಲೇಜು ಘೋಷಣೆ ಮಾಡಿಸಿದ್ದಾರೆ ಇದರಿಂದ ಜಿಲ್ಲೆಯ ಜನರು ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ಹರ್ಷ ತಂದಿದೆ. ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಕೋಲಾರದಲ್ಲಿ MSIL ವತಿಯಿಂದ ರೈತರಿಗೆ ಮಾಲ್ ತೆರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ.
ಬಡವರ ಪರ ಕಾಳಜಿ ಇಟ್ಟುಕೊಂಡಿರುವ ಸಿಎಂ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಶಾಸಕ ಕೋತ್ತೂರ್ ಮಂಜುನಾಥ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಹಿರಿಯ ನಾಯಕರಾದ ರಮೇಶ್ ಕುಮಾರ್ ವಿಧಾನಪರಿಷತ್ ಸದಸ್ಯರಾದ ಅನೀಲ್ ಕುಮಾರ್ ಅಭಿನಂದನೆಗಳನ್ನು ಸಲ್ಲಿಸುತ್ತೇವೆ.
ಇದನ್ನು ಓದಿದ್ದೀರಾ..? ಗೊಬ್ಬರ ಕಾಳಸಂತೆ ತಡೆಗೆ ಕಟ್ಟುನಿಟ್ಟಿನ ಕ್ರಮ: ಅಧಿಕಾರಿಗಳಿಗೆ ಸಚಿವರಿಂದ ಖಡಕ್ ಸೂಚನೆ
ಈ ಸಂದರ್ಭದಲ್ಲಿ ಕೋಲಾರ ಗ್ಯಾರಂಟಿ ಸಮಿತಿ ಅಧ್ಯಕ್ಷ ಶಿವಕುಮಾರ್, ಮಾಜಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಖಾನ್, ಕಾಂಗ್ರೆಸ್ ಮುಖಂಡರಾದ ಅಮರ್, ಸೈಫ್, ನಗರಸಭೆ ಮಾಜಿ ಸದಸ್ಯರಾದ ರಫೀ, ಏಜಾಜ್, ಶಫೀ, ನಾರಾಯಣಸ್ವಾಮಿ, ತ್ಯಾಗರಾಜ್, ಚೌಡಪ್ಪ, ರಾಜೇಶ್, ನದೀಂ ಬೇಗ್, ಚಿನ್ನಾಪುರ ನಾರಾಯಣಸ್ವಾಮಿ ಸಂಪತ್, ಸ್ವಾಮಿ, ಹಾರೋಹಳ್ಳಿ ರಾಜೇಶ್ ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸುಹೈಲ್, ನಗರ ಅಧ್ಯಕ್ಷ ಅರ್ಬಾಜ್ ಮುಂತಾದವರು ಉಪಸ್ಥಿತರಿದ್ದರು.





