35 ವರ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್‌ ಸಿಎಂ ಸ್ಥಾನ ನೀಡಿಲ್ಲ: ಬೊಮ್ಮಾಯಿ ತಿರುಗೇಟು

Date:

  • ಕಾಂಗ್ರೆಸ್‌ ಟ್ವೀಟ್‌ಗೆ ತಿರುಗೇಟು ನೀಡಿದ ಮಾಜಿ ಸಿಎಂ ಬೊಮ್ಮಾಯಿ
  • ‘ಲಿಂಗಾಯತ ಸಮುದಾಯವನ್ನು ಬಿಜೆಪಿ ಗೌರವದಿಂದಲೇ ನೋಡಿದೆ’

ಲಿಂಗಾಯತ ಸಮುದಾಯವನ್ನು ಬಿಜೆಪಿ ಯಾವಾಗಲೂ ಗೌರವದಿಂದಲೇ ನೋಡಿಕೊಂಡು ಬಂದಿದೆ. ನಮ್ಮ ಪಕ್ಷದ ವಿಚಾರದಲ್ಲಿ ನೀವು ತಲೆ ಹಾಕುವ ಅವಶ್ಯಕತೆ ಇಲ್ಲ. ಲಿಂಗಾಯತ ಸಮುದಾಯದ ಮೇಲೆ ನಿಮಗೆ ನಿಜವಾದ ಪ್ರೀತಿ ಇದ್ದಿದ್ದರೆ ನೀವು ಲಿಂಗಾಯತ ಸಮುದಾಯದವರನ್ನು ಮುಖ್ಯಮಂತ್ರಿ ಮಾಡುತ್ತಿದ್ದಿರಿ ಎಂದು ಮಾಜಿ ಸಿಎಂ ಬೊಮ್ಮಾಯಿ ಅವರು ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ.

“ಜೋಶಿ, ಸಂತೋಷ್ ಅವರು ಪ್ರತಾಪ್‌ ಸಿಂಹ ಅವರ ಹೆಗಲ ಮೇಲೆ ಗನ್ನಿಟ್ಟು ಶೂಟ್ ಮಾಡಿದ ಗುಂಡು ಬಸವರಾಜ ಬೊಮ್ಮಾಯಿ ಅವರ ಎದೆಗೆ ತಗುಲಿದೆ! ಸಿಎಂ ಆದರೂ ಬಿಜೆಪಿಯ ಗರ್ಭಗುಡಿಯ ಒಳಗೆ ಪ್ರವೇಶ ಪಡೆಯಲಾಗದ ವಲಸಿಗ ಬೊಮ್ಮಾಯಿಯವರೇ ಜೋಶಿ ಸಂತೋಷರ ಮುಂದಿನ ಟಾರ್ಗೆಟ್! ಬೊಮ್ಮಾಯಿಯವರನ್ನು ಮುಗಿಸಿದರೆ “ಟಾರ್ಗೆಟ್ ಲಿಂಗಾಯತ” ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದಂತಾಗುತ್ತದೆ!” ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿತ್ತು. ಇದಕ್ಕೆ ಪ್ರತ್ಯುತ್ತರವಾಗಿ ಬೊಮ್ಮಾಯಿ ಟ್ವೀಟ್‌ ಮಾಡಿ ಉತ್ತರಿಸಿದ್ದಾರೆ.

“ಭಾರತೀಯ ಜನತಾ ಪಾರ್ಟಿ ಲಿಂಗಾಯತ ಸಮುದಾಯವನ್ನು ಯಾವಾಗಲೂ ಗೌರವದಿಂದಲೇ ನೋಡಿಕೊಂಡು ಬಂದಿದೆ. ಬಿಜೆಪಿ ಎಂಬುವ ಒಂದೇ ಗುಡಿ ಇದ್ದು ಎಲ್ಲರಿಗೂ ಪ್ರವೇಶವಿದೆ. ಬಿಜೆಪಿ ಕರ್ನಾಟಕ ರಾಜ್ಯದಲ್ಲಿ ಕಡಿಮೆ ಅವಧಿ ಅಧಿಕಾರ ನಡೆಸಿದರೂ ನನ್ನ ಸಮೇತವಾಗಿ ನಾಲ್ವರು ಮುಖ್ಯಮಂತ್ರಿಗಳಲ್ಲಿ ಮೂವರು ಲಿಂಗಾಯತ ಸಮುದಾಯಕ್ಕೆ ಸೇರಿದವರನ್ನು ಮುಖ್ಯಮಂತ್ರಿ ಮಾಡಿರುವುದೇ ಇದಕ್ಕೆ ಸಾಕ್ಷಿ” ಎಂದು ಬೊಮ್ಮಾಯಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್ ಪಕ್ಷ ಕಳೆದ ಮೂವತೈದು ವರ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡದಿರುವುದು ಜಗತ್ತಿಗೆ ಗೊತ್ತು. ಈಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತವಿದೆ. ಲಿಂಗಾಯತ ಸಮುದಾಯದ ಮೇಲೆ ನಿಜವಾದ ಪ್ರೀತಿ ಇದ್ದರೆ ನೀವು ಲಿಂಗಾಯತ ಸಮುದಾಯದವರನ್ನು ಮುಖ್ಯಮಂತ್ರಿ ಮಾಡುತ್ತಿದ್ದಿರಿ. ನಮ್ಮ ಪಕ್ಷದ ವಿಚಾರದಲ್ಲಿ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...