ಕಾಂಗ್ರೆಸ್ ಪ್ರತಿಭಟನೆ ಕಾಣದ ಕೈಗಳ ವಿರುದ್ಧವೇ ಹೊರತು ಕೋರ್ಟ್ ವಿರುದ್ಧ ಅಲ್ಲ: ಗಂಗಾಧರ ದೊಡವಾಡ

Date:

ಎಪ್ಪತ್ತು ವರ್ಷಗಳ ಕಾಲ ಭಾರತವನ್ನು ಆಳಿದ ಕಾಂಗ್ರೆಸ್ ಎಂದೂ ನ್ಯಾಯಾಲಯದ ವಿರುದ್ಧ ಪ್ರತಿಭಟನೆ ಮಾಡಿಲ್ಲ. ನ್ಯಾಯಾಲಯದ ಘನತೆ ಗೌರವ ಹೆಚ್ಚಿಸುವುದಕ್ಕೆ ಕಾಂಗ್ರೆಸ್ ಎಂದೆಂದೂ ಬದ್ಧವಾಗಿದೆ. ಕೇವಲ ಮೋದಿ ಎಂಬ ಉಪನಾಮದ ಕುರಿತು ನಮ್ಮ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರು ಆಡಿದ ಮಾತುಗಳ ವಿಚಾರವಾಗಿ ಕೋರ್ಟ್‌ನಲ್ಲಿ ತೆರೆಮರೆಯಲ್ಲಿ ನಿಂತು ಅಧಿಕಾರಶಾಹಿ ಶಕ್ತಿಗಳು ಕಾನೂನನ್ನು ತಮ್ಮ ಗಾಳವನ್ನಾಗಿ ಬಳಸಿ ಕೊಳ್ಳುತ್ತಿದ್ದಾರೆಂಬ ಊಹೆ ಭಾರತೀಯರಲ್ಲಿ ಮೂಡುತ್ತಿದೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಗಂಗಾಧರ ದೊಡವಾಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಕಾಂಗ್ರೆಸ್ ಪ್ರತಿಭಟನೆ ಕೋರ್ಟ್ ವಿರುದ್ಧವೇ ಎಂದು ಪ್ರಶ್ನಿಸಿದ್ದಾರೆ. ಆದರೆ ಕಾಂಗ್ರೆಸ್ ಹುಟ್ಟಿದಾಗಿನಿಂದ ಸ್ವಾತಂತ್ರ್ಯಕ್ಕೆ ಮೊದಲು ಸ್ವಾತಂತ್ರ್ಯ ನಂತರ ಅಸಂಬದ್ಧ ಆಡಳಿತದ ವಿರುದ್ಧ ಚಳುವಳಿ ಮುಖಾಂತರ ನಾಡಿನ ಹಿತಕ್ಕಾಗಿ ತಾಯ್ನೆಲದ ಹಿತಕ್ಕಾಗಿ ಹೋರಾಡುತ್ತಾ ಬಂದ ಪಕ್ಷವಾಗಿದೆ. ಮಹಾತ್ಮಾ ಗಾಂಧಿಯವರ ಅಹಿಂಸಾ ಸಿದ್ದಾಂತವೇ ನಮ್ಮ ಪಕ್ಷದ ಮೂಲ ಧ್ಯೇಯವಾಗಿದೆ. ಕಾಂಗ್ರೆಸ್ ನವರು ಅಪ್ರಬುದ್ಧರ ಹಾಗೆ ವರ್ತಿಸುತ್ತಿದ್ದಾರೆ ಎಂಬ ಅವರ ಹೇಳಿಕೆಗೆ ಉತ್ತರವಾಗಿ ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನವರು ಪ್ರಬುಧ್ಧರೆಂಬುದಕ್ಕೆ 135 ಶಾಸಕರ ಬಲ ಕೊಟ್ಟಿದ್ದಾರೆ. ಸೋತ ಬಿಜೆಪಿಯವರು  ಅಪ್ರಬುದ್ಧರೆಂಬುದನ್ನು ಮತದಾರರು ತೋರಿಸಿ ಕೊಟ್ಟಿದ್ದಾರೆ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಬಜೆಟ್‌ನಲ್ಲಿ ಕೃಷಿ ಕ್ಷೇತ್ರ, ರೈತರ ನಿರ್ಲಕ್ಷ ಖಂಡನೀಯ: ಎಐಕೆಕೆಎಂಎಸ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರ್ಥಿಕ ಸಂಕಷ್ಟದಲ್ಲಿರುವ ಜನರಿಗೆ ಕಾಂಗ್ರೆಸ್ ಕೊಟ್ಟ ಗ್ಯಾರಂಟಿಗಳ ಜನಪ್ರಿಯತೆ ಬಿಜೆಪಿಯವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ‌. ಬಿಜೆಪಿಗೆ ರಾಹುಲ್ ಗಾಂಧಿಯವರ ಅನರ್ಹತೆಯ ಪರಿಣಾಮ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಈ ರಾಷ್ಟ್ರದ ಜನತೆ ಜನತಾ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಹವನಿಸುತ್ತಿದ್ದಾರೆ” ಎಂದು ಪ್ರತಿಕ್ರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...