ಆರೇಳು ತಿಂಗಳಲ್ಲಿ ಕಾಂಗ್ರೆಸ್‌ ‌ಸರ್ಕಾರ ಪತನ, ನಮ್ಮ ಸರ್ಕಾರ ರಚನೆ: ಯತ್ನಾಳ್‌ ಭವಿಷ್ಯ

Date:

  • ಕಾರ್ಯಕರ್ತರಿಗೆ ಏರ್ಪಡಿಸಿದ್ದ ಔತಣಕೂಟದಲ್ಲಿ ಹೇಳಿಕೆ
  • ‘ಸರ್ಕಾರ ಉರುಳಿಸಲು ಡಿಕೆಶಿ ಷಡ್ಯಂತ್ರ ರೂಪಿಸುತ್ತಿದ್ದಾರೆ’

ಆರೇಳು ತಿಂಗಳಲ್ಲಿ ಕಾಂಗ್ರೆಸ್‌ ಸರ್ಕಾರ ಪತನವಾಗಿ, ನಮ್ಮ ಸರ್ಕಾರ ರಚನೆಯಾಗಲಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಭವಿಷ್ಯ ನುಡಿದಿದ್ದಾರೆ.

ಚುನಾವಣೆಯಲ್ಲಿ ತಮ್ಮ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಭಾನುವಾರ ರಾತ್ರಿ ವಿಜಯಪುರದಲ್ಲಿ ಏರ್ಪಡಿಸಿದ್ದ ಔತಣಕೂಟದ ಸಂದರ್ಭದಲ್ಲಿ ಅವರು ಈ ಮಾತು ಆಡಿದ್ದಾರೆ.

“ಆರೇಳು ತಿಂಗಳಲ್ಲಿ ಕಾಂಗ್ರೆಸ್‌ ಸರ್ಕಾರ ಬೀಳುತ್ತದೆ. ಅಲ್ಲಿಯವರೆಗೆ ಸಮಾಧಾನದಿಂದ ಇರಬೇಕು. ಅವರ ಕಾಂಗ್ರೆಸ್ ಶಾಸಕರಿಗೇ ಕೊಡುವುದಕ್ಕೆ ಅನುದಾನ ಇಲ್ಲ. ರೊಕ್ಕ ಇಲ್ಲ, ಅನುದಾನ ಕೇಳಬೇಡಿ ಎನ್ನುತ್ತಿದ್ದಾರೆ. ಅವರ ಶಾಸಕರೇ ಅಳುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಸರ್ಕಾರಕ್ಕೆ ಅಸ್ಥಿರತೆ ಭಯ ಕಾಡುತ್ತಿದೆ. ಸ್ವತಃ ಡಿಕೆ ಶಿವಕುಮಾರ್‌ ಅವರೇ ಸರ್ಕಾರ ಉರುಳಿಸಲು ಸಿಂಗಾಪುರದಲ್ಲಿ ಷಡ್ಯಂತ್ರ ರೂಪಿಸುತ್ತಿದ್ದಾರೆ. ಗೆದ್ದವರು, ಸೋತವರು ಸೇರಿಕೊಂಡು ಸರ್ಕಾರ ಬೀಳಿಸಲು ಸಂಚು ರೂಪಿಸುತ್ತಿದ್ದಾರೆ”‌ ಎಂದು ಹೇಳಿದರು.

ದುಡ್ಡಿಗಾಗಿ ಪೈಪೋಟಿ

ಗ್ಯಾರಂಟಿ ಯೋಜನೆಯಿಂದಾಗಿ ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ದುಡ್ಡು ಮಾಡಿಕೊಳ್ಳಲು ಪೈಪೋಟಿಗೆ ಇಳಿದಿದ್ದಾರೆ. ಸಿದ್ದರಾಮಯ್ಯ ಅವರಿಗೆ ಇದು ಕೊನೆಯ ಚುನಾವಣೆಯಾಗಿದ್ದು ಅವರು ಸಾಕಷ್ಟು ದುಡ್ಡು ಮಾಡಿಕೊಳ್ಳುತ್ತಿದ್ದಾರೆ” ಎಂದು ದೂರಿದರು.

“ಲೋಕಸಭಾ ಚುನಾವಣೆ ಮುಗಿದ ಬಳಿಕ ಸಿದ್ದರಾಮಯ್ಯ ತೆಗೆದು ಸಿಎಂ ಆಗಲು ಡಿಕೆ ಶಿವಕುಮಾರ್‌ ಹೊರಟಿದ್ದಾರೆ. ಇವರಿಬ್ಬರ ಮಧ್ಯೆ ಶಾಸಕರು ನಮಗೇನು ಸಿಗುತ್ತಿಲ್ಲ ಅಂತ ಅಸಮಾಧಾನಗೊಂಡಿದ್ದಾರೆ. ಆಡಳಿತ ಪಕ್ಷದ ಶಾಸಕರಿಗೆ ಅನುದಾನ ಈಗ ಕೇಳಿಬೇಡಿ ಅಂತಿದ್ದಾರೆ. ಇನ್ನೂ ವಿರೋಧ ಪಕ್ಷದ ಶಾಸಕರಿಗೆ ಅನುದಾನ ಕೊಡುವುದು ದೂರದ ಮಾತು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | 2 ಗಂಟೆ 10 ನಿಮಿಷಗಳ ಕ್ರೌರ್ಯ, 3 ನಿಮಿಷಗಳ ತೋರಿಕೆಯ ಕಾರ್ಯ

ಮೋದಿಯೇ ಮುಂದಿನ ಪ್ರಧಾನಿ

“ಯಾರೇ ಏನೇ ಭವಿಷ್ಯ ನುಡಿದರೂ ಮತ್ತೆ ನರೇಂದ್ರ ಮೋದಿ ಅವರೇ ದೇಶದ ಪ್ರಧಾನಿ ಆಗುತ್ತಾರೆ. ಮೋದಿ ನೋಡಿ ಲೋಕಸಭಾ ಚುನಾವಣೆಯಲ್ಲಿ ವೋಟ್ ಹಾಕೋಣ. ವಿಜಯಪುರ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ” ಎಂದು ಕಾರ್ಯಕರ್ತರಿಗೆ ಯತ್ನಾಳ್‌ ಕರೆ ನೀಡಿದರು.

ಹಿಂದುತ್ವ ನಿರ್ಲಕ್ಷ್ಯ ಆಯ್ತು

“ಚುನಾವಣೆಯಲ್ಲಿ ಬಿಜೆಪಿ ಸೋಲಲು ಬಹಳಷ್ಟು ಕಾರಣಗಳಿವೆ. ಅನೇಕ ತಪ್ಪು ನಿರ್ಣಯಗಳು, ಕಾಂಗ್ರೆಸ್ ಗ್ಯಾರಂಟಿ ಘೋಷಣೆ, ಬಿಜೆಪಿ ಸರ್ಕಾರದಲ್ಲಿ ಕೆಲವು ಸಚಿವರು ಮಾಡಿದ ಭ್ರಷ್ಟಾಚಾರ. ಬಿಜೆಪಿ ಸರ್ಕಾರದಲ್ಲಿ ಹಿಂದುತ್ವ ನಿರ್ಲಕ್ಷ್ಯ ಆಯ್ತು. ಇವೆಲ್ಲ ಚುನಾವಣೆಯಲ್ಲಿ ಬಿಜೆಪಿಗೆ ಪೆಟ್ಟು ಬೀಳುವಂತಾಯಿತು” ಎಂದರು.

“ಪ್ರಧಾನಿ ನರೇಂದ್ರ ಮೋದಿಯವರು ಎಷ್ಟೊಂದು ಚುನಾವಣೆ ಪ್ರಚಾರ ಮಾಡಿದರು. ನರೇಂದ್ರ ಮೋದಿ ಪ್ರಚಾರಕ್ಕೆ ಬರದಿದ್ದರೆ ಇನ್ನೂ ಚಿಂತಾಜನಕವಾಗಿ ಸೋಲುತ್ತಿದ್ದೆವು. ಈಗ ರಾಜ್ಯದಲ್ಲಿ ಬಿಜೆಪಿ 66 ಸ್ಥಾನ ಗೆಲ್ಲಬೇಕಾದರೆ ಪ್ರಧಾನಿ ನರೇಂದ್ರ ಮೋದಿ ಕಾರಣ. ಮೋದಿಯವರ ಪರಿಶ್ರಮ, ಪ್ರವಾಸದಿಂದಾಗಿ ಹೆಚ್ಚು ಸ್ಥಾನಗಳಲ್ಲಿ ಗೆದ್ದಿದ್ದೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...