ಕಾಂಗ್ರೆಸ್ ಗ್ಯಾರಂಟಿಗಳು ಜನರಿಗೆ ತಲುಪದಂತೆ ಕೇಂದ್ರ ಸರ್ಕಾರದಿಂದ ಷಡ್ಯಂತ್ರ: ಪ್ರಿಯಾಂಕ್‌ ಖರ್ಗೆ ಕಿಡಿ

Date:

  • ಎಫ್‌ಸಿಐ ಅಕ್ಕಿ ಮಾರಾಟ ಮಾಡದಂತೆ ಆದೇಶಿಸಿ ಬಡಜನರ ಹೊಟ್ಟೆಗೆ ಹೊಡೆಯುತ್ತಿರುವ ಕೇಂದ್ರ ಸರ್ಕಾರ
  • ‘ದುಷ್ಟ ರಾಜಕಾರಣ ಮುಂದುವರೆಸಿದರೆ, 63 ಸ್ಥಾನ ಹೋಗಿ, ಅದು 6 ಮತ್ತು 3 ಆಗುವುದು ಗ್ಯಾರಂಟಿ’

ಕೇಂದ್ರ ಬಿಜೆಪಿ ಸರ್ಕಾರವು ರಾಜ್ಯಗಳಿಗೆ ಎಫ್‌ಸಿಐ ಅಕ್ಕಿ ಮಾರಾಟ ಮಾಡದಂತೆ ಆದೇಶಿಸಿ ಬಡಜನರ ಹೊಟ್ಟೆಗೆ ಹೊಡೆಯುವ ದುಷ್ಟ ರಾಜಕಾರಣಕ್ಕೆ ಮುಂದಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿ ಕಾರಿದರು.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಹಸಿವು ಮುಕ್ತ ರಾಜ್ಯ ನಿರ್ಮಿಸಲು ಕಾಂಗ್ರೆಸ್ ಸರ್ಕಾರ ಜನರಿಗೆ 10ಕೆಜಿ ಅಕ್ಕಿ ನೀಡಲು ಪಣ ತೊಟ್ಟಿದೆ. ಈ ನಿಟ್ಟಿನಲ್ಲಿ ಅಗತ್ಯವಿದ್ದ ಹೆಚ್ಚುವರಿ ಅಕ್ಕಿಯನ್ನು ಎಫ್‌ಸಿಐನಿಂದ ಖರೀದಿಗೆ ನಾವು ಮುಂದಾಗಿದ್ದೇವೆ. ಆದರೆ, ಕೇಂದ್ರ ಸರ್ಕಾರ ರಾಜ್ಯಗಳಿಗೆ ಅಕ್ಕಿ ಮಾರಾಟ ಮಾಡದಂತೆ ಆದೇಶಿಸಿದೆ. ಇದು ಬಿಜೆಪಿಯ ದುಷ್ಟ ರಾಜಕಾರಣವನ್ನು ಎತ್ತಿ ತೋರಿಸುತ್ತದೆ” ಎಂದು ವಾಗ್ದಾಳಿ ನಡೆಸಿದರು.

“ಕಾಂಗ್ರೆಸ್ ಗ್ಯಾರಂಟಿಗಳು ಜನರಿಗೆ ತಲುಪಲು ಬಿಡದಂತೆ ಕೇಂದ್ರ ಬಿಜೆಪಿ ಸರ್ಕಾರ ಈ ರೀತಿ ಷಡ್ಯಂತ್ರ ನಡೆಸಲು ಮುಂದಾಗಿರುವುದು ನಾಚಿಕೆಗೇಡಿನ ವಿಚಾರ. ಈಗಾಗಲೇ ರಾಜ್ಯದಲ್ಲಿ ಬಿಜೆಪಿ 63 ಮತ್ತೊಂದು ಸೀಟಿಗೆ ತೃಪ್ತಿಪಡಬೇಕಾಗಿದೆ. ಇದೇ ರೀತಿ ದುಷ್ಟ ರಾಜಕಾರಣ ಮುಂದುವರೆಸಿದರೆ, ಮುಂದೆ ಅದು 6 ಮತ್ತು 3 ಆಗಲಿದೆ. ಇದು ಗ್ಯಾರಂಟಿ” ಎಂದು ಲೇವಡಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ನಾಳೆಯಿಂದ ‘ಗೃಹಲಕ್ಷ್ಮಿ’ ಯೋಜನೆಯ ಅರ್ಜಿ ಸಲ್ಲಿಕೆಗೆ ಅವಕಾಶ: ಲಕ್ಷ್ಮಿ ಹೆಬ್ಬಾಳ್ಕರ್

“ಮೊದಲು ಆಹಾರ ಧಾನ್ಯ ಖರೀದಿ ಮಾಡಲು ಎಫ್‌ಸಿಐಗೆ ಹೋಗಬೇಕು. ದುಡ್ಡು ಕೊಟ್ಟರು ಕೊಡಲ್ಲ ಅಂದ್ರೆ ಯಾಕೆ ಅಂತ ಕೇಂದ್ರ ಸರ್ಕಾರವೇ ಹೇಳಬೇಕು. ಯೋಜನೆ ವಿಳಂಬ ಆಗ್ತಿದೆ ಅಂದ್ರೆ ಅದು ಆಹಾರ ಇಲಾಖೆಯ ನಡೆ ಕಾರಣವಲ್ಲ” ಎಂದರು.

“ದುಡಿಯುವ ಕೈಯನ್ನು ಚೆನ್ನಾಗಿ ನೋಡ್ತೀವಿ ಅಂದ್ರೆ ಯಾಕೆ ಕೇಂದ್ರ ಸರ್ಕಾರ ಅಡ್ಡಗಾಲು ಹಾಕ್ತಿದೆ? ನಾವು ಸುಮ್ಮನೆ ಕುಳಿತುಕೊಳ್ಳಲ್ಲ, ಬೇರೆ ರಾಜ್ಯದಿಂದ ಖಾಸಗಿಯಾಗಿ ಅಕ್ಕಿ ತೆಗೆದುಕೊಂಡು ಬರ್ತಿವಿ” ಎಂದು ಹೇಳಿದರು.

“ಸಿ ಟಿ ರವಿ ಮತ್ತು ಆರ್ ಅಶೋಕ್ ಕೇಂದ್ರದ ಮುಂದೆ ಮಾತನಾಡುವ ಧೈರ್ಯವನ್ನು ಅವರು ರೂಢಿಸಿಕೊಂಡಿಲ್ಲ. ಪುಕ್ಕಟ್ಟೆ ಅಕ್ಕಿ ಕೊಡಿ ಅಂತ ನಾವೇನು ಕೇಳಲ್ಲ. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಉತ್ತರ ಕೊಡಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...