ಎಷ್ಟೇ ಕಷ್ಟವಾದರೂ ಸಂವಿಧಾನ ಉಳಿಸಿಕೊಳ್ಳುವ ಅಗತ್ಯವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

  • ರಾಜ್ಯ ವಕೀಲರ ಪರಿಷತ್ ಸಮಾವೇಶ ಉದ್ಘಾಟಿಸಿ ಅಭಿಮತ
  • ‘ಮೇಲ್ಮಟ್ಟದ ನ್ಯಾಯಾಲಯದಲ್ಲಿ ಮೀಸಲಾತಿ ಇರಬೇಕು’
  • ‘ಪಟ್ಟಭದ್ರ ಹಿತಾಸಕ್ತಿಗಳು ಎಲ್ಲ ಕಾಲದಲ್ಲೂ ಇದ್ದಾರೆ’

ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ತಳವರ್ಗ, ಆರ್ಥಿಕವಾಗಿ ಶಕ್ತಿ ಇಲ್ಲದ ಜನರ ಬಗ್ಗೆ ಕನಿಕರದ ಬದಲಿಗೆ ಸಹಾಯ ಮಾಡುವ ಮನಸ್ಸು ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ರಾಜ್ಯ ವಕೀಲರ ಪರಿಷತ್ ಶನಿವಾರ ಮೈಸೂರಿನಲ್ಲಿ ಆಯೋಜಿಸಿದ್ದ 10ನೇ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿ, “ಸಮಾಜದಲ್ಲಿ ಇರುವ ಅಸಮಾನತೆ ತೊಡೆದುಹಾಕಲು ಪ್ರಯತ್ನ ಮಾಡಬೇಕು. ಅಂಬೇಡ್ಕರ್ ಅವರು ಮಾಡಿದ ಐತಿಹಾಸಿಕ ಭಾಷಣವನ್ನು ಎಲ್ಲರೂ ಓದಿದರೆ ಸಾಮಾಜಿಕ ಜವಾಬ್ದಾರಿ ಹೆಚ್ಚಾಗುತ್ತದೆ. ಸಮಾಜ ನನಗೇನು ಮಾಡಿದೆ ಎನ್ನುವುದಕ್ಕಿಂತ ನಾನು ಸಮಾಜಕ್ಕೆ ಏನು ಮಾಡಿದೆ ಎಂದು ಕೇಳಿಕೊಳ್ಳುವುದು ಮುಖ್ಯ. ಆ ದೃಷ್ಟಿಯಿಂದ ಚಿಂತನೆ ಮಾಡಬೇಕು” ಎಂದರು.

“ಕೆಳ ನ್ಯಾಯಾಲಯಗಳಲ್ಲಿ ಮೀಸಲಾತಿ ಇದೆ. ಮೇಲ್ಮಟ್ಟದ ನ್ಯಾಯಾಲಯದಲ್ಲಿ ಮೀಸಲಾತಿ ಇಲ್ಲ. ಅಲ್ಲಿ ಮೀಸಲಾತಿ ಜಾರಿಯಾದರೆ ಹೆಚ್ಚು ಉಪಯುಕ್ತವಾದ ನ್ಯಾಯದಾನ ನೀಡಲು ಸಾಧ್ಯ. ಸಂವಿಧಾನ ಬರುವ ಮುನ್ನ ಒಂದು ರೀತಿಯ ನ್ಯಾಯದಾನ ವ್ಯವಸ್ಥೆ ಇತ್ತು. ಸಂವಿಧಾನ ಬಂದ ನಂತರ ಭಿನ್ನವಾಗಿದೆ. ಬ್ರಿಟಿಷರ ಕಾಲದಲ್ಲಿ ಹಾಗೂ ಸ್ವಾತಂತ್ರ್ಯ ದೊರೆತ ನಂತರ ಭಿನ್ನವಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲ್ಲರಿಗೂ ಸಮಾನ ನ್ಯಾಯ ದೊರಕಬೇಕೆಂದು ನಮ್ಮ ಸಂವಿಧಾನ ಬಹಳ ಸ್ಪಷ್ಟವಾಗಿ ಹೇಳಿದೆ. ಸುಪ್ರಸಿದ್ಧ ವಕೀಲರನ್ನು ಕರ್ನಾಟಕ ಬಾರ್ ಕೌನ್ಸಿಲ್ ಕಳುಹಿಸಿಕೊಟ್ಟಿರುವುದು ಹೆಮ್ಮೆಯ ವಿಚಾರ. ಬಹಳ ಜನ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿದ್ದಾರೆ, ತಜ್ಞರಾಗಿದ್ದಾರೆ. ಕರ್ನಾಟಕದಲ್ಲಿ ಬಹಳ ಜನ ಪ್ರತಿಭಾವಂತ ವಕೀಲರಿದ್ದಾರೆ. ಯಾರು ಸಮಾಜದಲ್ಲಿ ದಡ್ಡರೂ ಅಲ್ಲ, ಬುದ್ಧಿವಂತರೂ ಅಲ್ಲ. ಅವಕಾಶದಿಂದ ವಂಚಿತರಾದವರು ದಡ್ಡರು ಹಾಗೂ ಅವಕಾಶ ದೊರತವರು ಬುದ್ಧಿವಂತರು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | 2 ಗಂಟೆ 10 ನಿಮಿಷಗಳ ಕ್ರೌರ್ಯ, 3 ನಿಮಿಷಗಳ ತೋರಿಕೆಯ ಕಾರ್ಯ

“ಸಂವಿಧಾನ ಎಲ್ಲರಿಗೂ ಅವಕಾಶ ಕಲ್ಪಿಸಿಕೊಟ್ಟಿರುವುದರಿಂದ ಕೆಳವರ್ಗದವರೂ ಕೂಡ ಉನ್ನತ ಸ್ಥಾನಗಳಿಗೆ ಹೋಗಲು ಸಾಧ್ಯವಾಗುತ್ತದೆ. ನಾನು ಮೈಸೂರಿಗೆ ಬಂದಾಗ ಕುರುಬರಲ್ಲಿ ನಾನೊಬ್ಬನೇ ವಕೀಲ ಇದ್ದೆ. ಎಲ್ಲ ಮೇಲ್ವರ್ಗದವರೇ ವಕೀಲರಾಗಿದ್ದರು. ಕೆಳಜಾತಿಯವರಿಗೆ ವಕೀಲರಾಗುವುದು ಬೇಡ ಎಂದೂ ಹೇಳುತ್ತಿದ್ದರು. ನನಗೇ ಇದರ ಅನುಭವವಾಗಿದೆ” ಎಂದರು.

“ಶಾನುಭೋಗರೊಬ್ಬರು ಮಗನಿಗೆ ಕಾನೂನು ಕಲಿಸಬೇಡ ಎಂದು ತಮ್ಮ ತಂದೆಗೆ ಹೇಳಿದ್ದರು. ಅವರ ಮಾತು ಕೇಳಿ ಕಾನೂನು ಓದದೇ ಹೋಗಿದ್ದರೆ ಇಂದು ಮುಖ್ಯಮಂತ್ರಿಯಾಗಲು ಸಾಧ್ಯವಾಗುತ್ತಿರಲಿಲ್ಲ. ಪಟ್ಟಭದ್ರ ಹಿತಾಸಕ್ತಿಗಳು ಎಲ್ಲ ಸಂದರ್ಭದಲ್ಲಿ ಎಲ್ಲಾ ಕಾಲದಲ್ಲೂ ಇದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ದಲಿತ ಸಮುದಾಯದಿಂದ ಬಂದವರು. ಅವರಿಗೆ ಬರೋಡಾ ಮಹಾರಾಜರು ವಿದೇಶಕ್ಕೆ ತೆರಳಲು ಅವಕಾಶ ನೀಡದೆ ಹೋಗಿದ್ದರೆ, ಇಂಥ ಸಂವಿಧಾನ ಸಿಗುತ್ತಿರಲಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...