ಬೀದರ್‌ | ಭಾರತದ ಸಂವಿಧಾನ ಜನಪರ ಮತ್ತು ಜೀವಪರವಾಗಿದೆ: ಶಿವಾನಂದ ಮೇತ್ರೆ

Date:

ಭಾರತದ ಸಂವಿಧಾನ ಜೀವಪರ ಮತ್ತು ಜನಪರವಾಗಿದೆ. ಸಂವಿಧಾನದ ಮೂಲ ಆಶಯಗಳನ್ನು ಅನುಷ್ಠಾನಗೊಳಿಸಲು ಎಲ್ಲರೂ ಶ್ರಮಿಸಬೇಕಾಗಿದೆ ಎಂದು ಹುಲಸೂರು ತಹಶೀಲ್ದಾರ್ ಶಿವಾನಂದ ಮೇತ್ರೆ ಅಭಿಪ್ರಾಯಪಟ್ಟರು.

ಹುಲಸೂರು ಪಟ್ಟಣದ ಎಂಕೆಕೆಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಬಸವಕಲ್ಯಾಣದ ಡಾ. ಜಯದೇವಿತಾಯಿ ಲಿಗಾಡೆ ಪ್ರತಿಷ್ಠಾನದ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಸಂವಿಧಾನ ಸಮರ್ಪಣಾ ದಿನಾಚರಣೆ ಮತ್ತು ಸಂವಿಧಾನ ಆಶಯ ಮತ್ತು ಆದ್ಯತೆ’ ಕುರಿತ ಪ್ರತಿಷ್ಠಾನದ 75ನೇ ಉಪನ್ಯಾಸ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

“ಭಾರತೀಯ ಸಂವಿಧಾನದ ಹಕ್ಕು ಮತ್ತು ಕರ್ತವ್ಯಗಳನ್ನು ಎಲ್ಲರೂ ಅರಿಯಬೇಕಿದೆ. ಶಾಲಾ ಕಾಲೇಜಿನಲ್ಲಿ ಸಂವಿಧಾನದ ಪೀಠಿಕೆ ಬರೀ ವಾಚನವಾಗಬಾದು. ಅದು ಬದುಕಿನಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಪಂ ಮಾಜಿ ಸದಸ್ಯ ಮಲ್ಲಿಕಾರ್ಜುನ ಧಬಾಲೆ ಮಾತನಾಡಿ, “ಸುಶಿಕ್ಷಿತರೆಲ್ಲರೂ ಸಂವಿಧಾನವನ್ನು ಕಡ್ಡಾಯವಾಗಿ ಓದಲೇಬೇಕು. ಸಾಮಾಜಿಕ, ನಾಗರಿಕ, ವೈಯಕ್ತಿಕ ಮತ್ತು ಸಾರ್ವಜನಿಕ ಜೀವನದ ಮೂಲಭೂತ ಹಕ್ಕುಗಳ ಕುರಿತು ತಿಳುವಳಿಕೆಗೆ ಸಂವಿಧಾನದ ಅರಿವು ಅನಿವಾರ್ಯವಾಗಿದೆ. ಅವಿದ್ಯಾವಂತರಿಗೆ ಸಂವಿಧಾನದ ಮಹತ್ವವನ್ನು ತಿಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದು ಹೇಳಿದರು.

ಬಸವಕಲ್ಯಾಣದ ಬಸವೇಶ್ವರ ಪದವಿ ಕಾಲೇಜಿನ ಪ್ರಾಚಾರ್ಯ ಡಾ. ಭೀಮಾಶಂಕರ ಬಿರಾದಾರ ಮಾತನಾಡಿ, “ಪ್ರಜಾಪ್ರಭುತ್ವದ ತತ್ವಗಳನ್ನು ಪ್ರತಿಪಾದಿಸುವ, ರಾಜಕೀಯ, ಆರ್ಥಿಕ, ಸಾಮಾಜಿಕ ಸಂಬಂಧವನ್ನು ಸರ್ಕಾರ ಮತ್ತು ಅಧಿಕಾರಿಗಳ ನಿರ್ವಹಣೆಗೆ ಒಂದು ಚೌಕಟ್ಟಾದ ಸಂವಿಧಾನ ಎಲ್ಲ ಕಾನೂನುಗಳ ತಾಯಿಯಾಗಿದೆ.
ಆಡಳಿತಾತ್ಮಕ, ರಾಜಕೀಯ ನೀತಿಗಳು, ಜನರ ಹಕ್ಕು, ಕರ್ತವ್ಯಗಳ ವಿನ್ಯಾಸವಾದ ಸಂವಿಧಾನ ದೇಶದ ಬಹುತ್ವಕ್ಕೆ ಮತ್ತು ಬಹುಸಂಸ್ಕೃತಿಕತೆಗೆ ಮನ್ನಣೆ ನೀಡಿದೆ” ಎಂದರು.

“ಸಮಾನತೆ, ಸಾಮಾಜಿಕ ನ್ಯಾಯ, ಜಾತ್ಯತೀತತೆ, ಸಹಿಷ್ಣುತೆ ಸಂವಿಧಾನದ ತಾತ್ವಿಕತೆಯಾಗಿದೆ. ನಮ್ಮ ನೆಲದಲ್ಲಿ ರಚನೆಗೊಂಡ ವಚನಗಳ ಬಹುತೇಕ ಮತ್ತು ಭಾಗಶಃ ಆಶಯಗಳು ಸಂವಿಧಾನದಲ್ಲಿ ಅಡಕಗೊಂಡಿವೆ. ಬಸವಾದಿ ಶರಣರ ಚಿಂತನೆಗಳಲ್ಲಿ, ಸಂವಿಧಾನದ ಮೂಲ ತತ್ವಗಳಲ್ಲಿ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಚಾರವಾದದಲ್ಲಿ ಹೆಚ್ಚು ಸಾಮ್ಯತೆಗಳಿವೆ” ಎಂದು ನುಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಮಲ್ಲಿಕಾರ್ಜುನ ಕಾಂಬಳೆ ಮಾತನಾಡಿ, “ಸಂವಿಧಾನದ ಪರಿಕಲ್ಪನೆಯ ಅರಿವಿಗಾಗಿ, ತಿಳುವಳಿಕೆಗಾಗಿ ಸಂವಿಧಾನ ಸಮರ್ಪಣೆ ದಿನಾಚರಣೆ ಆಚರಿಸಲಾಗುತ್ತಿದೆ. ಎಲ್ಲರಿಗೂ ಅನುಕೂಲವಾಗುವ ಹಕ್ಕು, ಕರ್ತವ್ಯ ನೀಡಿದ ವಿಶ್ವ ಶ್ರೇಷ್ಠ ಸಂವಿಧಾನ ಭಾರತದ್ದು. ಆತ್ಮಬಲ, ನೈತಿಕತೆ, ಸಾಮಾಜಿಕ ಗೌರವ ಸಾಧಿಸಲು ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಸಂವಿಧಾನದ ಓದು ಅಗತ್ಯ” ಎಂದರು.

ಹುಲಸೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ. ಮಾರುತಿ ಕುಮಾರ ಅವರು ನಡೆಸಿದ ಸಂವಿಧಾನ ಕುರಿತು ರಾಜ್ಯಮಟ್ಟದ ಆನ್ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ3500 ವಿದ್ಯಾರ್ಥಿಗಳು ಭಾಗವಹಿಸಿದ್ದು ದಾಖಲೆಯಾಗಿದೆ.

ಇದೇ ಕಾಲೇಜಿನಲ್ಲಿ ಏರ್ಪಡಿಸಿದ್ದ ಸಂವಿಧಾನ ಕುರಿತ ಪ್ರಬಂಧ, ಭಾಷಣ, ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು .

ಈ ಸುದ್ದಿ ಓದಿದ್ದೀರಾ? ಮಹಾಧರಣಿ | ಮೋದಿ ಸರ್ಕಾರದಲ್ಲಿ ಮಹಿಳೆಯರು ಹೆಚ್ಚು ಸಂಕಷ್ಟಕ್ಕೆ ಸಿಲುಕಿದ್ದಾರೆ: ಮೀನಾಕ್ಷಿ ಬಾಳಿ

ಕಾರ್ಯಕ್ರಮದಲ್ಲಿ ಜಾನಪದ ಪರಿಷತ್ ತಾಲೂಕಾ ಅಧ್ಯಕ್ಷ ಶಿವರಾಜ್ ಖಪಲೆ, ಕಸಾಪ ಅಧ್ಯಕ್ಷ ನಾಗರಾಜ ಹಾವಣ್ಣ, ಉಪಾಧ್ಯಕ್ಷ ಬಸವಕುಮಾರ ಕವಟೆ, ವಲಯ ಅಧ್ಯಕ್ಷ ದೀಪಕ ಪಾಟೀಲ, ಸಿಆರ್ ಸಿ ಧರ್ಮೇಂದ್ರ ಭೋಸ್ಲೆ, ಪತ್ರಕರ್ತ ಮಹೇಶ್ ಹುಲಸೂಕರ್ ಇದ್ದರು. ಡಾ ಮಾರುತಿ ಕುಮಾರ ಸ್ವಾಗತಿಸಿದರು. ಡಾ ಕುಪೇಂದ್ರ ರಾಥೋಡ್ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...