ಸಂವಿಧಾನ ಪೀಠಿಕೆ ಜ್ಞಾಪಕ ಜನ ಜಾಥಾ ಅ. 4 ಕ್ಕೆ ತುಮಕೂರಿಗೆ ಆಗಮನ

Date:

ಸಿಎಂ ಸಿದ್ದರಾಮಯ್ಯ ಅವರ ತೇಜೋವಧೆ ಖಂಡಿಸಿ,ಹುಬ್ಬಳಿಯಿಂದ ಬೆಂಗಳೂರಿಗೆ ಹೊರಟಿರುವ ಜಾಥಾ ಅಕ್ಟೋಬರ್ 4ರ ಗುರುವಾರ ತುಮಕೂರು ತಲುಪಲಿದ್ದು, ಅಕ್ಟೋಬರ್ 05ರ ಶುಕ್ರವಾರ ಬೆಂಗಳೂರಿನ ಫ್ರೀಡಂ ಪಾರ್ಕಿಗೆ ತೆರಳಿ, ಫ್ರೀಡಂ ಪಾರ್ಕಿನಿಂದ ವಿಧಾನಸೌಧದ ವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಕುರುಬರ ಯುವ ವೇದಿಕೆ ಅಧ್ಯಕ್ಷ ಮಹಾಲಿಂಗಯ್ಯ ತಿಳಿಸಿದರು.

ತುಮಕೂರು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಅಹಿಂದ ಸಂಘಟನೆಯ ಮುಖಂಡರಾದ ಮುತ್ತಣ್ಣ ಎಸ್.ಶಿವಳ್ಳಿ ಅವರ ನೇತೃತ್ವದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಅಹಿಂದ ಕಾರ್ಯಕರ್ತರು,ಮುಖಂಡರು ಅಕ್ಟೋಬರ್ 4ರ ಗುರುವಾರ ಬೆಳಗ್ಗೆ ಸಂವಿಧಾನ ಪೀಠಿಕೆ ಜ್ಞಾಪಕ ಜನ ಜಾತಾಯಾತ್ರೆ ಹೊರಡಲಿದ್ದು, ಗುರುವಾರ ಸಂಜೆ ತುಮಕೂರು ತಲುಪಿ ವಾಸ್ತವ್ಯ ಹೂಡಲಿದೆ.ಅಕ್ಟೋಬರ್ 05ರ ಶುಕ್ರವಾರ ತುಮಕೂರಿನಿಂದ ಹೊರಟು ಫ್ರೀಡಂ ಪಾರ್ಕಿಗೆ ತಲುಪಿ,ಅಲ್ಲಿಂದ ವಿಧಾನಸೌಧದವರೆಗೆ ಪಾದಯಾತ್ರೆ ನಡೆಯಲಿದೆ.ಇದು ಸಿದ್ದರಾಮಯ್ಯ ಅವರಿಗೆ ನೈತಿಕ ಬೆಂಬಲ ತುಂಬುವ ನಿಟ್ಟಿನಲ್ಲಿ ಅಹಿಂದ ವರ್ಗಗಳು ಸೇರಿದಂತೆ ಎಲ್ಲಾ ಶೋಷಿತ ಸಮುದಾಯಗಳು ಒಗ್ಗೂಡಿ ನಡೆಸುತ್ತಿರುವ ಜಾಥಾವಾಗಿದೆ ಎಂದರು.

ತಮ್ಮ 45 ವರ್ಷಗಳ ರಾಜಕೀಯ ಜೀವನದಲ್ಲಿ ಒಂದು ಕಪ್ಪುಚುಕ್ಕೆ ಇಲ್ಲದ ಸಿದ್ದರಾಮಯ್ಯ ವಿರುದ್ದ ಮುಡಾ ಮತ್ತು ಸಿದ್ದರಾಮಯ್ಯ ಅವರ ಪತ್ನಿ ಪಾವರ್ತಮ್ಮ ಅವರ ವಯುಕ್ತಿಕ ಭೂಮಿ ವಿವಾದವನ್ನು ಎಳೆದುತಂದು, ಅನಗತ್ಯ ಕಿರುಕುಳ ನೀಡುವ ಕೆಲಸವನ್ನು ವಿರೋಧಪಕ್ಷಗಳು ಕೇಂದ್ರ ಸರಕಾರದ ಬೆಂಬಲದೊಂದಿಗೆ ಮಾಡುತ್ತಿವೆ.ಹಾಗಾಗಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಾವಿದ್ದೇವೆ ಎಂಬುದನ್ನು ಸಾರುವ ಉದ್ದೇಶದಿಂದ ಈ ಬೃಹತ್ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಸಿದ್ದರಾಮಯ್ಯ ಹಿತೈಷಿಗಳು,ಅಭಿಮಾನಿಗಳು ಅಹಿಂದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಸಿದ್ದರಾಮಯ್ಯ ಅವರಿಗೆ ನೈತಿಕ ಸ್ಥೆöÊರ್ಯ ತುಂಬುವ ಕೆಲಸ ಮಾಡಬೇಕೆಂದು ಕೆ.ಮಹಾಲಿಂಗಯ್ಯ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಹಿಂದ ಮಹಿಳಾ ಘಟಕದ ಅಧ್ಯಕ್ಷೆ ಸುಕನ್ಯ ಮಾತನಾಡಿ,ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವಿತ ಅವಧಿಯಲ್ಲಿ ಎಂದಿಗೂ ಕಿಚನ್ ಕ್ಯಾಬಿನೆಟ್‌ಗೆ ಅವಕಾಶ ನೀಡಿದವರಲ್ಲ. ಇಂತಹ ವ್ಯಕ್ತಿಯ ವಿರುದ್ದ ಅರಿಸಿನ ಕುಂಕುಮಕ್ಕೆಂದು ಪತ್ನಿಗೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ನೀಡಿದ್ದ ಭೂಮಿಯನ್ನು ವಿವಾದ ಮಾಡಿ, ಅವರ ನೈತಿಕ ಸ್ಥೖರ್ಯ ಕುಗ್ಗಿಸುವ ಕೆಲಸವನ್ನು ಬಿಜೆಪಿ-ಜೆಡಿಎಸ್ ಮಾಡುತ್ತಿದೆ.ಇದನ್ನು ಖಂಡಿಸಿ,ಸಿದ್ದರಾಮಯ್ಯ ಅವರ ಬೆನ್ನಿಗೆ ಅಹಿಂದ ಇದೆ ಎಂಬುದು ತೋರ್ಪಡಿಸುವ ಉದ್ದೇಶದಿಂದ ಈ ಜಾಥಾ ಹಮ್ಮಿಕೊಳ್ಳಲಾಗಿದೆ.ಗ್ಯಾರೆಂಟಿ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಹೋರಾಟದಲ್ಲಿ ಹೆಚ್ಚಿನ ರೀತಿಯಲ್ಲಿ ಪಾಲ್ಗೊಳ್ಳಬೇಕಿದೆ.ಬೆಂಗಳೂರಿನಲ್ಲಿ ನಡೆಯುವ ಪಾದಯಾತ್ರೆಗೆ ತುಮಕೂರಿನಿಂದ ಅಹಿಂದ ಕಾರ್ಯಕರ್ತರು, ಮುಖಂಡರು ಹೊರಡಲು ಸರಕಾರಿ ಜೂನಿಯರ್ ಕಾಲೇಜು ಮೈದಾನದಿಂದ ಬಸ್ ವ್ಯವಸ್ಥೆ ಮಾಡಲಾಗಿದೆ.ಅಹಿಂದ ವರ್ಗದವರು, ಸಿದ್ದರಾಮಯ್ಯ ಹಿತೈಷಿಗಳು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಪಾದಯಾತ್ರೆ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಆದಿಲ್,ಅಹಿಂದ ರಾಷ್ಟ್ರೀಯ ಸಂಘಟನೆಯ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸುನಿತಾ ನಟರಾಜ್, ನಿರ್ದೇಶಕರಾದ ಪ್ರೇಮ,ಲಕ್ಷಿö್ಮನಾರಾಯಣ ರಾಗಿ ಮಲ್ಲೇನಹಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...