ಚಾಮರಾಜನಗರ | ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ರಚನಾತ್ಮಕ ಪರಿಹಾರ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

Date:

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ‘ ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕಾರಣಗಳಿಗೆ ರಚನಾತ್ಮಕ ಪರಿಹಾರ ‘ ಎಂದು ಹೇಳಿದರು.

” ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಿಗೆ ರಚನಾತ್ಮಕ ಹಾಗೂ ನ್ಯಾಯಯುತ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಎಲ್ಲರು ಒಟ್ಟಾಗಿ ಕೆಲಸ ಮಾಡಬೇಕಿದೆ. ಪರಿಶಿಷ್ಟರಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿರಲಿ ಸಾರ್ವಜನಿಕ ಹಿತಾಸಕ್ತಿಯಿಂದ ಒಟ್ಟಾಗಿ ಪರಿಹರಿಸುವ ಕಾರ್ಯವಾಗಬೇಕು. ಈ ದಿಸೆಯಲ್ಲಿ ಕ್ರಮ ವಹಿಸಲಾಗುತ್ತದೆ ” ಎಂದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಕಾಲಕಾಲಕ್ಕೆ ಕರೆದು ಪರಿಶೀಲನೆ ನಡೆಸಿ ಅಗತ್ಯ ಕ್ರಮ ವಹಿಸಲಾಗುತ್ತಿದೆ. ನೂತನವಾಗಿ ನೇಮಕವಾಗಿರುವ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರು ಪ್ರಸ್ತಾಪಿಸುವ ವಿಷಯಗಳನ್ನು ಮುಂಚಿತವಾಗಿಯೇ ಗಮನಕ್ಕೆ ತಂದಲ್ಲಿ ವಿವರವಾಗಿ ಚರ್ಚಿಸಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಹಾಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರು ” ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯ ಕಾಯ್ದೆಗಳ ಕುರಿತು ಅರಿವು ಮೂಡಿಸುವ ಕಾರ್ಯ ಮತ್ತಷ್ಟು ಪರಿಣಾಮಕಾರಿಯಾಗಿ ಆಗಬೇಕು. ವಿಶೇಷವಾಗಿ ಗ್ರಾಮೀಣ ಹಾಗೂ ಕಾಡಂಚಿನ ಜನರಿಗೆ ಜಾಗೃತಿ ಉಂಟುಮಾಡಬೇಕು. ಪರಿಶಿಷ್ಟ ಸಮುದಾಯದ ಜನತೆಯ ಸಮಸ್ಯೆಗಳು ತ್ವರಿತವಾಗಿ ಇತ್ಯರ್ಥವಾಗಬೇಕು. ಸುಳ್ವಾಡಿ ಪ್ರಕರಣದ ಸಂತ್ರಸ್ತರಿಗೆ ಭೂಮಿ ನೀಡುವ ಕೆಲಸ ಬೇಗನೆ ಆಗಬೇಕು. ಜೀತ ವಿಮುಕ್ತರಿಗೆ ಪರಿಹಾರ ಕಾರ್ಯಗಳು ಇನ್ನಿತರ ಸೌಲಭ್ಯಗಳು ಸಿಗಬೇಕು ” ಎಂಬುದು ಸೇರಿದಂತೆ ಹಲವು ವಿಷಯಗಳನ್ನು ಸಭೆಯಲ್ಲಿ ಚರ್ಚಿಸಿದರು.

ಜಾಗೃತಿ ಮೂಡಿಸುವ ಕಾರ್ಯಕ್ರಮಗಳಿಗೆ ಸಮಿತಿಯ ಸದಸ್ಯರನ್ನು ಆಹ್ವಾನಿಸಬೇಕು. ಹೋಬಳಿಗಳ ವ್ಯಾಪ್ತಿಯಲ್ಲಿ ಅರಿವು ಕಾರ್ಯಕ್ರಮಗಳನ್ನು ಮನದಟ್ಟಾಗುವಂತೆ ರೂಪಿಸಬೇಕು. ಮುಂದಿನ ಸಭೆಯ ವೇಳೆಗೆ ಜೀತ ವಿಮುಕ್ತರ ಸಂಬಂಧ ವರದಿಯನ್ನು ಅಧಿಕಾರಿಗಳು ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಏ. 24 ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮುನಿರಾಜು, ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯ ದೊಡ್ಡರಾಯಪೇಟೆ ಸಿದ್ದರಾಜು, ಅರಕಲವಾಡಿ ನಾಗೇಂದ್ರ, ಕೇತಮ್ಮ, ವೃಷಬೇಂದ್ರ, ರಮೇಶ್ ಪ್ರಭು, ಅರ್ಪಿತಾ, ರಜನಿ ತಿವಾರಿ, ಇತರೆ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...