ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಕೊಲೆಗಳು : ಬಿಗಿ ಕಾನೂನು ಕ್ರಮಕ್ಕೆ ಜಾತ್ಯಾತೀತ ವೇದಿಕೆ ಆಗ್ರಹ

Date:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಂಪು ಹಿಂಸೆ, ಹತ್ಯೆ, ಅಮಾಯಕರ ಕೊಲೆ ತಡೆಯಲು ದ್ವೇಷ ಭಾಷಣ ಮಾಡುತ್ತಿರುವ ಸಂವಿಧಾನ ವಿರೋಧಿ ಸಾಮಾಜಿಕ ಶಕ್ತಿಗಳನ್ನು ಗುಂಡಾ ಕಾಯ್ದೆಯಡಿ ಬಂಧಿಸಬೇಕೆಂದು ಆಗ್ರಹಿಸಿ ಬೀದರ ಜಿಲ್ಲಾ ಜಾತ್ಯಾತೀತ ನಾಗರಿಕ ವೇದಿಕೆ ಆಗ್ರಹಿಸಿದೆ.

ಸೋಮವಾರ ವೇದಿಕೆಯ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಕುಮಾರ್‌ ಶೀಲವಂತ ಅವರಿಗೆ ಸಲ್ಲಿಸಿದರು.

ಮುಖಂಡರು ಮಾತನಾಡಿ, ʼದೇಶದಲ್ಲಿ ಬಲಪಂಥಿಯ ಸಂಘಟನೆಗಳು ದಿನನಿತ್ಯ ಕಾನೂನು ಕೈಗೆತ್ತಿಕೊಂಡು ನಿರ್ದಿಷ್ಟ ಜನಾಂಗ ಮತ್ತು ಸಮುದಾಯವನ್ನು ಗುರಿ ಮಾಡುತ್ತ ಗುಂಪು ಹತ್ಯೆ, ಗುಂಪು ಹಿಂಸೆ ಮತ್ತು ಅಮಾಯಕರ ಕೊಲೆ ನಡೆಸಲಾಗುತ್ತಿದೆ. ಕರ್ನಾಟಕವು ಸರ್ವಜನಾಂಗದ ಶಾಂತಿಯ ತೋಟ ಆಗಿರವುದನ್ನು ಸಹಿಸದ ಮತೀಯವಾದಿಗಳು ಹಿಂಸೆ, ಕೊಲೆಗಳಿಗೆ ಪ್ರಚೋದಿಸುತ್ತಿದ್ದಾರೆ. ಲವ್ ಜಿಹಾದ್, ಗೋರಕ್ಷಣೆ, ಅಲ್ಪಸಂಖ್ಯಾತರ ಮುಸ್ಲಿಂ ಸಮುದಾಯವನ್ನು ಮತ್ತು ನಾಗರಿಕ ಹಕ್ಕಿಗಾಗಿ ಹೋರಾಡುವ ದಲಿತ ಸಮುದಾಯದವರ ಮೇಲೆ ದಾಳಿಗಳು ನಡೆಯುತ್ತಿವೆʼ ಎಂದು ಖಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಬಲಪಂಥಿಯ ಸಂಘಟನೆಯ ಉಪ ಸಂಘಟನೆಗಳು ದಕ್ಷಿಣ ಕನ್ನಡ ಜಿಲ್ಲೆಯನ್ನು ಗುಂಪು ಹತ್ಯೆ, ಗುಂಪು ಹಿಂಸೆ ಮತ್ತು ಕೊಲೆ ಮಾಡುವ ಪ್ರಯೋಗಾಲಯವನ್ನಾಗಿ ಮಾಡಲಾಗಿರುತ್ತಿದೆ. ರೌಡಿಗಳನ್ನು ಸಮಾಜ ಮುಖಂಡರಾಗಿ ಬಿಂಬಿಸುವಲ್ಲಿ ಮಾಧ್ಯಮಗಳಲ್ಲಿ ನಿರಂತರ ಪ್ರಚಾರ ಕೊಡಲಾಗುತ್ತಿದೆ. ಕೊಲೆಗೆ ಕೊಲೆಯೇ ಉತ್ತರವೆನ್ನುವಂತೆ ಅರಾಜಕತೆ ನಿರ್ಮಿಸಿ ಕಾನೂನು ಕೈಗೆತ್ತಿಕೊಂಡು ಅಮಾಯಕರನ್ನು ಕೊಲೆ ಮಾಡಲಾಗುತ್ತಿದೆʼ ಎಂದು ಆರೋಪಿಸಿದರು.

ಯಾವುದೇ ಹಿಂಸೆಯಲ್ಲಿ ಭಾಗಿಯಾಗದ ಅಬ್ದುಲ್ ರಹೆಮಾನ್‌ ಎಂಬುವರನ್ನು 2025ರ ಮೇ 27ರಂದು ಕೊಲೆ ಮಾಡಲಾಗಿದೆ. ಕೊಲೆಯಾದ ಅಬ್ದುಲ್ ರಹೆಮಾನ್ ಅವರು ಕೆಲವು ದಿನಗಳ ಹಿಂದೆ ರೋಗಿಯೊಬ್ಬರ ಜೀವ ರಕ್ಷಿಸಲು ತನ್ನ ರಕ್ತವನ್ನೇ ಕೊಟ್ಟಿರುವ ವ್ಯಕ್ತಿ. ಯಾವುದೇ ಅಪರಾಧದ ಹಿನ್ನೆಲೆ ಇಲ್ಲದ ವ್ಯಕ್ತಿಯನ್ನು ಹಿಂದುತ್ವವಾದಿಗಳು ಕೊಲೆಗೈದಿದ್ದಾರೆ. ಇದೆಲ್ಲವನ್ನು ನೋಡಿದರೆ ದಕ್ಷಿಣ ಕನ್ನಡದ ಮಂಗಳೂರಿನಲ್ಲಿ ಕೋಮುಶಕ್ತಿಯು ವಿಜೃಂಭಿಸುತ್ತಿದೆʼ ಎಂದು ಕಿಡಿಕಾರಿದರು.

ಅಮಾಯಕ ಅಬ್ದುಲ್ ರಹೆಮಾನ್‌ ಅವರನ್ನು ಕೊಲೆ ಮಾಡಿರುವ ಆರೋಪಿಗಳನ್ನು ಶೀಘ್ರದಲ್ಲೇ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ಎಂಲ್ಸಿ ಎನ್.ರವಿಕುಮಾರ್‌, ಛಲವಾದಿ ನಾರಾಯಣಸ್ವಾಮಿ ರಾಜೀನಾಮೆಗೆ ಕಾಂಗ್ರೆಸ್‌ ಆಗ್ರಹ

ಜಿಲ್ಲಾ ಜಾತ್ಯತೀತ ನಾಗರಿಕ ವೇದಿಕೆಯ ಸದಸ್ಯರಾದ ನಿಜಾಮೋದ್ದೀನ್, ಸೈಯದ್ ವಹೀದ್ ಲಖನ್, ಬಾಬುರಾವ ಹೊನ್ನಾ, ರಾಜಕುಮಾರ ಮೂಲಭಾರತಿ, ಉಮೇಶಕುಮಾರ ಸೋರಳ್ಳಿಕರ್, ಶ್ರೀಕಾಂತ ಸ್ವಾಮಿ, ಶಪಾಯತ್ ಅಲಿ, ಅರುಣ ಪಟೇಲ್, ರಾಜಕುಮಾರ ಗುನಳ್ಳಿ, ಅಂಬೇಡ್ಕರ್ ಬೌದ್ಧೆ, ಜಗನ್ನಾಥ ಹೊನ್ನಾ, ರಾಹುಲ್ ಡಾಂಗೆ, ಸೊಯೋಬುದ್ದೀನ್, ಸೈಯದ್ ಇಬ್ರಾಹಿಂ, ಶಫಿಯೋದ್ದೀನ್ ಗೋಲ್ಡ್, ಪ್ರಭು ಹೊಚಕನಳ್ಳಿ, ಮೌಲಾನಾ ಮನ್ನಾಖೇಳ್ಳಿ, ಪ್ರಭು ತಗಣಿಕರ್, ಚಾಂದೋಬಾ ಹಂದಿಕೇರಾ, ಪಾಂಡುರಂಗ ಪ್ಯಾಗೆ, ಸುನೀಲ ವರ್ಮಾ, ಬಾಬುರಾವ ಕೌಠಾ, ಜೈಶೀಲ, ಸಾಯಿ ಶಿಂಧೆ, ರಾಹುಲ ಹಾಲಹಿಪ್ಪರಗಾ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...