ಬೀದರ್‌ | ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸಹಕರಿಸಿ; ಪ್ರಭು ಚವ್ಹಾಣ ಸೂಚನೆ

Date:

  • ಔರಾದ(ಬಿ) ತಾಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆ
  • ಸರ್ಕಾರಿ ಕಚೇರಿಗಳು ಜನಸ್ನೇಹಿಯಾಗಿರುವಂತೆ ನಿರ್ದೇಶನ

ಕ್ಷೇತ್ರದ ಜನತೆ ನಾಲ್ಕನೇ ಅವಧಿಗೆ ಶಾಸಕನಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯ ಕೆಲಸಕ್ಕೆ ಅಧಿಕಾರಿಗಳು ಸಹಕರಿಸಬೇಕು ಎಂದು ಶಾಸಕ ಪ್ರಭು ಬಿ ಚವ್ಹಾಣ ಹೇಳಿದರು.

ಬೀದರ್ ಜಿಲ್ಲೆ ಔರಾದ(ಬಿ) ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಭಿವೃದ್ಧಿ ಕೆಲಸಗಳು ಸರಿಯಾಗಿ ನಡೆಯುವಲ್ಲಿ ಅಧಿಕಾರಿಗಳ ಪಾತ್ರ ಮಹತ್ತರವಾಗಿರುತ್ತದೆ. ಎಲ್ಲ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಬೇಕು. ಕೆಲವು ಕಚೇರಿಗಳಲ್ಲಿ ಸಿಬ್ಬಂದಿಯ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಅಂತವರನ್ನು ತೆಗೆದು ಇಲಾಖೆ ಕಚೇರಿಗಳನ್ನು ಜನಸ್ನೇಹಿಯಾಗಿಸಬೇಕು ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂಗಾರು ಹಂಗಾಮು ಆರಂಭವಾಗಲಿದ್ದು, ರೈತರು ಬಿತ್ತನೆ ಕೆಲಸಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ರೈತರಿಗೆ ಸಕಾಲಕ್ಕೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಸುವ ಮೂಲಕ ಬಿತ್ತನೆ ಕೆಲಸ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಬಿತ್ತನೆ ಬೀಜ ಗಡಿ ರಾಜ್ಯಗಳಿಗೆ ಸಾಗಾಟವಾಗುವುದಕ್ಕೆ ಕಡಿವಾಣ ಹಾಕಬೇಕು ಎಂದು ನಿರ್ದೇಶನ ನೀಡಿದರು.

ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಕೊರತೆಯಾಗದ ರೀತಿಯಲ್ಲಿ ವ್ಯವಸ್ಥೆ ಮಾಡಿಕೊಳ್ಳಬೇಕು. ಎರಡು ತಿಂಗಳ ಹಿಂದೆ ಸುರಿದ ಅಕಾಲಿಕ‌ ಮಳೆಯಿಂದ ಬೆಳೆ ಹಾನಿಯಾದ ಎಲ್ಲ ರೈತರಿಗೆ ಶೀಘ್ರ ಪರಿಹಾರಧನ ಬಿಡುಗಡೆ ಮಾಡಲು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಇಲಾಖೆಯಿಂದ ಎಲ್ಲ ರೀತಿಯ ತಯಾರಿಗಳನ್ನು ಮಾಡಿಕೊಂಡಿದ್ದು, ರೈತರ ಬೇಡಿಕೆಗೆ ಅನುಸಾರ ಬಿತ್ತನೆ ಬೀಜ ಮತ್ತು ರಸಗೊಬ್ಬರ ಲಭ್ಯವಿದೆ ಎಂದು ಕೃಷಿ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.

ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಿ, ಆಸ್ಪತ್ರೆಯಲ್ಲಿನ ಕೊರತೆಯ ಬಗ್ಗೆ ಇನ್ನೂ ದೂರುಗಳು ಬರುತ್ತಿದ್ದು, ಇವುಗಳನ್ನು ಸರಿಪಡಿಸಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿಗೆ ನಿರ್ದೇಶನ ನೀಡಿದರು.

ಕ್ಷೇತ್ರದಲ್ಲಿರುವ ಎಲ್ಲ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಆಟದ ಮೈದಾನ, ಶೌಚಾಲಯಗಳ ನಿರ್ಮಾಣ ಮಾಡುವ ಬಗ್ಗೆ ಹಿಂದೆ ನಿರ್ದೇಶನ ನೀಡಿದ್ದೆ, ಇದನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.

ಶಾಲಾ ಕಾಲೇಜುಗಳು, ಅಂಗನವಾಡಿ ಕೇಂದ್ರಗಳು ಒಳಗೊಂಡು ಎಲ್ಲ ಸರ್ಕಾರಿ ಕಚೇರಿ ಆವರಣಗಳಲ್ಲಿ ಸಸಿಗಳನ್ನು ನೆಡುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ದಣಿವರಿಯದ ಜೀವಗಳ ಸ್ವಾಭಿಮಾನಿ ಬದುಕಿಗೆ ‘ಲಿಂಬು ಸೋಡಾ’ ಆಸರೆ

ಕುಡಿಯುವ ನೀರು ಪೂರೈಕೆ ಮತ್ತು ಸಣ್ಣ ನೀರಾವರಿ ಒಳಗೊಂಡು ಎಲ್ಲ ಇಲಾಖೆಗಳಲ್ಲಿ ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಆರಂಭವಾಗದಿರುವ ಕೆಲಸಗಳನ್ನು ಶೀಘ್ರ ಆರಂಭಿಸಬೇಕು. ಯಾವುದೇ ಕಾರಣಕ್ಕೂ ಅಭಿವೃದ್ಧಿ ಕೆಲಸಗಳು ಕುಂಠಿತವಾಗಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಜಗನ್ನಾಥ ಮೂರ್ತಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಕುಮಾರ ಘಾಟೆ, ತಹಶಿಲ್ದಾರ್‌ ಮಲ್ಲಿಕಾರ್ಜುನ, ನಾಗರಾಜ ಹಾಗೂ ನಾನಾ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...