ಔರಾದ್ ಪುರಸಭೆ ಕಾಂಗ್ರೆಸ್ ಸರಕಾರದ ಕೊಡುಗೆ : ಸಚಿವ ಈಶ್ವರ ಖಂಡ್ರೆ

Date:

ಔರಾದ್ ಪಟ್ಟಣ ಪಂಚಾಯತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಿರುವುದು ರಾಜ್ಯ ಕಾಂಗ್ರೆಸ್ ಸರಕಾರದ ಕೊಡುಗೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಕಾಂಗ್ರೆಸ್ ಮುಖಂಡ ಡಾ.ಭೀಮಸೇನರಾವ ಶಿಂಧೆ ನೇತೃತ್ವದಲ್ಲಿ ಭಾನುವಾರ ಭಾಲ್ಕಿಯ ತಮ್ಮ ನಿವಾಸದಲ್ಲಿ ಔರಾದ್ ನಾಗರಿಕರಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ʼಔರಾದ್ ಜನತೆಯ ಬಹುದಿನಗಳ ಬೇಡಿಕೆಯನ್ನು ಕಾಂಗ್ರೆಸ್ ಸರಕಾರ ನೇರವೇರಿಸಿದೆ. ಈ‌ ಹಿಂದಿನ ಬಿಜೆಪಿ ಸರಕಾದಿಂದ ಆಗದಿರುವ ಕೆಲಸವನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಔರಾದ್‌ ಪಟ್ಟಣದ ಜನರಿಗೆ ಆಶ್ವಾಸನೆ ನೀಡಿದೆ. ಅದರಂತೆ ಔರಾದ್ ಪಟ್ಟಣ ಪಂಚಾಯತಿಯನ್ನು ಪುರಸಭೆಯನ್ನಾಗಿ ಮಾಡಿದ್ದೇನೆʼ ಎಂದರು.

ʼಈ ಹಿಂದೆ ನಾನು ಪೌರಾಡಳಿತ ಸಚಿವನಾಗಿದ್ದ ವೇಳೆ ನಿಯಮದ‌ ಪ್ರಕಾರ ಎಲ್ಲ ಮಾನದಂಡಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದ್ದೆ. ಈಗ ಎಲ್ಲವನ್ನು ಸಿದ್ಧಪಡಿಸಿಕೊಂಡು ಸಚಿವ ಸಂಪುಟದಲ್ಲಿ ಪುರಸಭೆ ಘೋಷಣೆಯ ನಿರ್ಣಯ ಕೈಗೊಳ್ಳಲಾಗಿದೆ. ಇದರಿಂದ ಔರಾದ್ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆʼ ಎಂದು ಹರ್ಷ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖಂಡ ಡಾ. ಭೀಮಸೇನರಾವ ಶಿಂಧೆ ಮಾತನಾಡಿ, ʼಲೋಕಸಭೆ ಚುನಾವಣೆಯ ವೇಳೆ ಪುರಸಭೆ ಮೇಲ್ದರ್ಜೆಗೇರಿಸುವ ಭರವಸೆಯೊಂದಿಗೆ, ಔರಾದ್ ಪಟ್ಟಣ ಅಭಿವೃದ್ಧಿಗೆ 5 ಕೋಟಿ ಅನುದಾನ ನೀಡುವುದಾಗಿ ಭರವಸೆ ನೀಡಿದ್ದೀರಿ ಎಂದು ನೆನಪಿಸಿದರು. ಅದಕ್ಕೆ ತಕ್ಷಣ ಸ್ಪಂದಿಸಿದ ಸಚಿವ ಈಶ್ವರ ಖಂಡ್ರೆ ಅವರು 5 ಕೋಟಿ ಅನುದಾನ ನೀಡುವುದಾಗಿ ಭರವಸೆ ನೀಡಿದ ಅವರು ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಅಭಿವೃದ್ಧಿಗಾಗಿ ಶ್ರಮಿಸಬೇಕೆಂದು ತಿಳಿಸಿದರು.‌

ಔರಾದ್‌ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷ ಚನ್ನಪ್ಪ ಉಪ್ಪೆ, ಔರಾದ್ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಬಾಬುರಾವ ತಾರೆ, ಪಟ್ಟಣ ಪಂಚಾಯತಿ ಸದಸ್ಯ ಸುನಿಲಕುಮಾರ ದೇಶಮುಖ ಸೇರಿದಂತೆ ಪ್ರಮುಖರಾದ ಪ್ರಶಾಂತ ಫುಲಾರಿ, ಶರಣಪ್ಪ ಪಾಟೀಲ್, ಶಾಲೊಮನ್ ಮಹೀಮಕರ್, ಸುನಿಲ‌ ಮೀತ್ರಾ, ಅನೀಲ ನಿರ್ಮಳೆ, ಪಪ್ಪು ದೇವಕತ್ತೆ, ಪ್ರವೀಣ ಕರಂಜೆ, ಅನೀಲ ಒಡಿಯಾರ್, ಮಹೋಹರ್, ಬಾಲಾಜಿ, ಕಮಳಮ್ಮ ಚಿಕ್ಲಿ, ವೆಂಕಟರಾವ ಪಾಟೀಲ್, ಸೂರ್ಯಕಾಂತ ಉಡಬಾಳೆ ಸೇರಿದಂತೆ ಮತ್ತಿತರರಿದ್ದರು.

ಔರಾದ್‌ ಪಟ್ಟಣ ಪಂಚಾಯತಿ ಮೇಲ್ದರ್ಜೆಗೇರಿಸುವ ಕುರಿತು 2023ರ ಜೂನ್‌ 23ರಂದು ʼಈದಿನʼ ದಲ್ಲಿ ʼಬೀದರ್ | ಔರಾದ ಪಟ್ಟಣ ಪಂಚಾಯತಿಗೆ ಒಲಿಯುವುದೇ ಪುರಸಭೆ ಭಾಗ್ಯ?ʼ ಎಂಬ ಶೀರ್ಷಿಕೆಯಡಿ ವಿಶೇಷ ಬರಹ ಪ್ರಕಟಿಸಿ ಸರ್ಕಾರದ ಗಮನ ಸೆಳೆದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...