ಬೀದರ್ ವಿವಿ ಅಭಿವೃದ್ಧಿಗೆ ಸಿಂಡಿಕೇಟ್ ಸದಸ್ಯರ ಸಹಕಾರ ಅವಶ್ಯ : ಪ್ರೊ.ಬಿ.ಎಸ್.ಬಿರಾದಾರ್

Date:

ಬೀದರ್ ವಿಶ್ವವಿದ್ಯಾಲಯ ಅಭಿವೃದ್ಧಿ ಹೊಂದಬೇಕಾದರೆ ಎಲ್ಲಾ ಸಿಂಡಿಕೇಟ್ ಸದಸ್ಯರ ಸಹಕಾರ ಮಾರ್ಗದರ್ಶನದ ಅವಶ್ಯಕತೆಯಿದೆ. ಎಲ್ಲರ ಸಹಕಾರದೊಂದಿಗೆ ಮಾದರಿ ವಿಶ್ವವಿದ್ಯಾಲಯ ಕಟ್ಟೋಣ ಎಂದು ಬೀದರ್ ವಿವಿ ಕುಲಪತಿ ಪ್ರೋ.ಬಿ.ಎಸ್.ಬಿರಾದಾರ್ ಹೇಳಿದರು.

ರಾಜ್ಯ ಸರ್ಕಾರ ಬೀದರ ವಿಶ್ವವಿದ್ಯಾಲಯಕ್ಕೆ ನೂತನವಾಗಿ ನೇಮಿಸಿದ ಆರು ಜನ ಸಿಂಡಿಕೇಟ್ ಸದಸ್ಯರು ಶುಕ್ರವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ವರದಿ ಮಾಡಿಕೊಂಡರು.

ನೂತನ ಸಿಂಡಿಕೇಟ್‌ ಸದಸ್ಯರಾದ ಶಿವನಾಥ ಪಾಟೀಲ್ ಮಾಧವರಾವ್ ಪಾಟೀಲ್ (ಸಾಮಾನ್ಯ), ಸಚಿನ್ ಶಿವರಾಜ್ (ಸಾಮಾನ್ಯ), ವಿಠಲ್‌ದಾಸ್‌ ದೇವಿದಾಸ ಪ್ಯಾಗೆ (ಪರಿಶಿಷ್ಟ ಜಾತಿ), ಅರ್ಜುನ್ ಮತೆಪ್ಪ ಕನಕ (ಹಿಂದುಳಿದ ವರ್ಗ), ಅಬ್ದುಲ್ ಸತ್ತಾರ್ ಚಾಂದ್ ಸಾಬ್ (ಅಲ್ಪಸಂಖ್ಯಾತರು) ಹಾಗೂ ವೈಷ್ಣವಿ ಆರ್.ಪಾಟೀಲ್‌ ಅವರು ತಮ್ಮ ಜವಾಬ್ದಾರಿ ವಹಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ್ ವಿಶ್ವವಿದ್ಯಾಲಯದ ಕುಲಪತಿ ಪ್ರೋ.ಬಿ.ಎಸ್.ಬಿರಾದಾರ್‌ ಮಾತನಾಡಿ, ʼನೂತನ ಸದಸ್ಯರ ಆಗಮನದಿಂದ ವಿಶ್ವವಿದ್ಯಾಲಯಕ್ಕೆ ವಿಶೇಷ ಶಕ್ತಿ ಬಂದಂತಾಗಿದೆ. ವಿಶಾಲವಾದ 322 ಎಕರೆಯಲ್ಲಿ ವ್ಯಾಪಿಸಿರುವ ಬೀದರ ವಿಶ್ವವಿದ್ಯಾಲಯವು 124 ಕಾಲೇಜುಗಳ ಸಂಯೋಜನೆಯೊಂದಿಗೆ 14 ಸ್ನಾತಕೋತ್ತರ ಪದವಿ ಕೋರ್ಸ್ ಹಾಗೂ 26,000 ವಿದ್ಯಾರ್ಥಿಗಳು ಪ್ರವೇಶ ಪಡೆದಂತಹ ವಿಶ್ವವಿದ್ಯಾಲಯವಾಗಿದೆʼ ಎಂದರು.

ʼವಿಶ್ವವಿದ್ಯಾಲಯದ ಶೈಕ್ಷಣಿಕ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಾಗಿ ಕಾರ್ಯನಿರ್ವಹಿಸೋಣ. ಬೀದರ್ ವಿಶ್ವವಿದ್ಯಾಲಯದ ಸರ್ವಾಂಗೀಣ ವಿಕಾಸಕ್ಕೆ ಬದ್ಧರಾಗಿ ನಮ್ಮ ಜವಾಬ್ದಾರಿಗಳನ್ನು ಅರಿತುಕೊಂಡು ಸರ್ಕಾರದಿಂದ ಅನುದಾನವನ್ನು ಪಡೆದು ಸುವ್ಯಸ್ಥಿತವಾದ ವಿಶ್ವವಿದ್ಯಾಲಯದ ಭೌತಿಕ ಸಂಪನ್ಮೂಲ ಹಾಗೂ ಶೈಕ್ಷಣಿಕ ಪ್ರಗತಿಗೆ ಶ್ರಮಿಸೋಣʼ ಎಂದರು.

ಈ ಸುದ್ದಿ ಓದಿದ್ದೀರಾ? ರಾಜ್ಯ ಬಜೆಟ್‌ನಲ್ಲಿ ಬೀದರ್ ಜಿಲ್ಲೆಗೆ ಸಿಕ್ಕಿದ್ದೇನು, ಯಾರು ಏನಂದ್ರು?

ಆಡಳಿತ ಕುಲಸಚಿವೆ ಸುರೇಖಾ ಕೆ.ಎ.ಎಸ್ ಸ್ವಾಗತಿಸಿದರು. ಮೌಲ್ಯಮಾಪನ ಕುಲಸಚಿವ ಪ್ರೋ.ಪರಮೇಶ್ವರ ನಾಯ್ಕ್ ವಂದಿಸಿದರು. ವಿಶ್ವವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...