ಚುನಾವಣೆಗೂ ಮುನ್ನ ಕೊರೊನಾ ಉಲ್ಬಣ; ನಿಯಂತ್ರಣಕ್ಕೆ ಅಧಿಕಾರಿಗಳ ಸಿದ್ಧತೆ

Date:

  • ಕೊರೊನಾ ಪ್ರಕರಣಗಳ ದಾಖಲಾತಿ ಹೆಚ್ಚಳ
  • ಸೂಕ್ತ ಮುಂಜಾಗೃತಾ ಕ್ರಮಕ್ಕೆ ನಿರ್ದೇಶನ

ಮುಕ್ತ ಮತ್ತು ನ್ಯಾಯಸಮ್ಮತ ವಿಧಾನಸಭಾ ಚುನಾವಣೆ ನಡೆಸಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ. ಆದರೆ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೊರೊನಾ ರೂಪಾಂತರಗಳ ಭೀತಿ ಮುಂದುವರೆದಿದೆ.

ಮಾರ್ಚ್ 28ರಂದು ಕಿತ್ತೂರಿನಲ್ಲಿ 39 ಕೊರೊನಾ-19 ಪ್ರಕರಣಗಳು ಸಕ್ರಿಯವಾಗಿದ್ದರೆ, ಮಾರ್ಚ್ 29ರ ವೇಳೆಗೆ ಈ ಸಂಖ್ಯೆ 51ಕ್ಕೆ ಏರಿದೆ. ಈ ಪ್ರದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಪ್ರವೃತ್ತಿಯನ್ನು ದಾಖಲಿಸುತ್ತಿದೆ.

ಗದಗ ಜಿಲ್ಲೆಯನ್ನು ಹೊರತುಪಡಿಸಿ, ಧಾರವಾಡ 9, ಉತ್ತರ ಕನ್ನಡ 15, ಬೆಳಗಾವಿ 6, ಬಾಗಲಕೋಟೆ 5, ಹಾವೇರಿ 6, ವಿಜಯಪುರ ಜಿಲ್ಲೆಗಳಲ್ಲಿ 10 ಕೊರೊನಾ ಪ್ರಕರಣಗಳು ದಾಖಲಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕದ ಹಲವು ಭಾಗಗಳಲ್ಲಿ ಕೊರೊನಾ ಪ್ರಕರಣಗಳ ದಾಖಲಾತಿ ಹೆಚ್ಚುತ್ತಿರುವುದು ನಿಜ. ಇತ್ತೀಚಿನ ವಿಡಿಯೋ ಕಾನ್ಫರೆನ್ಸ್‌ನಲ್ಲಿ, ಮುಖ್ಯ ಕಾರ್ಯದರ್ಶಿ ಈ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಕೊರೊನಾ ಕುರಿತು ಸೂಕ್ತ  ಜಾರಿಗೆ ತರುವತ್ತ ಗಮನ ಹರಿಸಬೇಕು ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತ ಎಂ ಜಿ ಹಿರೇಮಠ್ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು.

“ರಾಜಕೀಯ ಪಕ್ಷಗಳೊಂದಿಗೆ ಸಭೆಗಳನ್ನು ನಡೆಸಿ ಕೊರೊನಾ ಪರಿಸ್ಥಿತಿಯ ಬಗ್ಗೆ ವಿವರಿಸಲು ಮತ್ತು ಮುಖ್ಯವಾಗಿ ಬೃಹತ್ ಸಭೆಗಳಲ್ಲಿ ಕೊರೊನಾದ ಸೂಕ್ತ ಮುಂಜಾಗೃತಾ ಕ್ರಮ ಅನುಸರಿಸುವಂತೆ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ” ಎಂದು ಅವರು ಹೇಳಿದರು.

ಕೊರೊನಾ ಪ್ರಕರಣಗಳು ಹೆಚ್ಚಾದರೆ ಕಿತ್ತೂರು ಕರ್ನಾಟಕದ ಜಿಲ್ಲಾಧಿಕಾರಿ ಸನ್ನದ್ಧತೆಯ ಬಗ್ಗೆ ವಿವರವಾದ ತಪಾಸಣೆ ನಡೆಸಿರುವುದಾಗಿ ತಿಳಿದುಬಂದಿದೆ. ಆರೋಗ್ಯ ಮೂಲಸೌಕರ್ಯದ ಸ್ಥಿತಿ, ಬೂಸ್ಟರ್ ಡೋಸ್‌ಗಳ ಲಭ್ಯತೆ, ಲಸಿಕೆ ಪ್ರಕ್ರಿಯೆ ಮತ್ತು ಇತರ ಅಂಶಗಳ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ.

“ರಾಜ್ಯ ಮತ್ತು ದೇಶ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾವು ಜಾಗರೂಕರಾಗಿರಬೇಕು” ಎಂದು ಧಾರವಾಡ ಜಿಲ್ಲಾಧಿಕಾರಿ ಗುರುದತ್ ಹೆಗಡೆ ತಿಳಿಸಿದ್ದಾರೆ.

ಬೂಸ್ಟರ್ ಪ್ರಮಾಣ ಹೆಚ್ಚಿಸುವತ್ತ ಗಮನ ಹರಿಸಲು, ಕೊರೊನಾದ ಸೂಕ್ತ ಮುಂಜಾಗೃತ ಕ್ರಮ ಅನುಸರಿಸಲು ಜನರಲ್ಲಿ ಜಾಗೃತಿ ಮೂಡಿಸಲು ನಾನು ಈಗಾಗಲೇ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೊಡವೆ ಮುಕ್ತಗೊಳಿಸುತ್ತೇವೆಂದು ಮತ್ತಷ್ಟು ಫಜೀತಿ; ಕ್ಲಿನಿಕ್‌ಗೆ ಡಬಲ್‌ ದಂಡ

“ಈಗಾಗಲೆ ಅನಾರೋಗ್ಯಕ್ಕೆ ತುತ್ತಾಗಿದ್ದರೆ ಅಥವಾ ವಯಸ್ಸಾದವರು ಜಾಗರೂಕರಾಗಿರಬೇಕು. ಅವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಜನದಟ್ಟಣೆಯ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳಬೇಕು” ಎಂದು ತಿಳಿಸಿದ್ದಾರೆ.

“ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಕನಿಷ್ಠ 50 ಆಕ್ಸಿಜನ್ ಹಾಸಿಗೆಗಳು ಮತ್ತು ಇತರ ಮೂಲಸೌಕರ್ಯಗಳನ್ನು ಅಳವಡಿಸಲಾಗಿದೆ. ಜಿಲ್ಲೆಯಲ್ಲಿ 2,000ಕ್ಕೂ ಹೆಚ್ಚು ಆಮ್ಲಜನಕ ಹಾಸಿಗೆಗಳಿವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...