ಗೋ ಸಾಗಾಟ | ವಾಹನ ತಡೆದ ಬಳಿಕ ಸ್ಟನ್ ಗನ್ ಬಳಸಿ ದೌರ್ಜನ್ಯ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿ

Date:

  • ‘ರಾಷ್ಟ್ರ ರಕ್ಷಣಾ ಪಡೆ’ಯ ಹೆಸರಲ್ಲಿ ದಾಳಿ ನಡೆಸುತ್ತಿದ್ದ ತಂಡ
  • ಆನ್‌ಲೈನ್ ಪೇಮೆಂಟ್ ಮೂಲಕ ಹಣ ಸಂಗ್ರಹ ಮಾಡುತ್ತಿದ್ದ ಪುನೀತ್ ಕೆರೆಹಳ್ಳಿ

ರಾಮನಗರ ಜಿಲ್ಲೆಯ ಸಾತನೂರಿನಲ್ಲಿ ಇದ್ರೀಸ್ ಪಾಷಾ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ, ಗೋ ಸಾಗಾಟದ ವಾಹನಗಳನ್ನು ತಡೆದ ನಂತರ ಅದರಲ್ಲಿದ್ದವರಿಗೆ ಸ್ಟನ್ ಗನ್ ಬಳಸಿ ಅಮಾನವೀಯವಾಗಿ ದೌರ್ಜನ್ಯ ನಡೆಸುತ್ತಿದ್ದ ದೃಶ್ಯಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

‘ರಾಷ್ಟ್ರ ರಕ್ಷಣಾ ಪಡೆ’ಯ ಹೆಸರನ್ನಿಟ್ಟುಕೊಂಡು ಪುನೀತ್ ಕೆರೆಹಳ್ಳಿ ನೇತೃತ್ವದ ದುಷ್ಕರ್ಮಿಗಳ ಗುಂಪು, ಕನಕಪುರ ತಾಲೂಕಿನ ಸಾತನೂರು ಬಳಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ತಡೆದು ದಾಳಿ ನಡೆಸಿದ್ದರು. ಆ ಬಳಿಕ ಜಾನುವಾರು ವ್ಯಾಪಾರಿ ಇದ್ರೀಸ್ ಪಾಷಾ ಅನುಮಾನಾಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದರು. ಈ ಘಟನೆಗೆ ಸಂಬಂಧಿಸಿ ಸಾತನೂರು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.

ಇದಾದ ಬಳಿಕ ಅಮಾನುಷ ದೌರ್ಜನ್ಯ ನಡೆಸಿರುವ ಆರೋಪಿ ಪುನೀತ್ ಕೆರೆಹಳ್ಳಿ, ದೇಶದಲ್ಲಿ ನಿಷೇಧಕ್ಕೊಳಪಟ್ಟಿರುವ ಸ್ಟನ್ ಗನ್(ಕರೆಂಟ್ ಶಾಕ್ ಅನುಭವ ಕೊಡುವ ಗನ್) ಅನ್ನು ಬಳಸಿ, ‘ಇಂಥವರ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಇವರಿಗೆ ಥರ್ಡ್ ಡಿಗ್ರಿ ಟ್ರೀಟ್‌ಮೆಂಟ್ ಕೊಡಬೇಕು’ ಎಂದು ಹೇಳುತ್ತಾ ಸ್ಟನ್ ಗನ್ ಬಳಸುತ್ತಿರುವ ದೃಶ್ಯ ವೀಡಿಯೋದಲ್ಲಿ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಿಡಿಯೋವನ್ನು ಸ್ವತಃ ಪುನೀತ್ ಕೆರೆಹಳ್ಳಿ ತಂಡವೇ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಇದು ಯಾವಾಗಿನ ವಿಡಿಯೋ ಎಂದು ಇನ್ನೂ ತಿಳಿದುಬಂದಿಲ್ಲ. ಇದು ಈಗ ವೈರಲ್ ಆಗುತ್ತಿದ್ದು, ಇಂತಹ ದುಷ್ಕರ್ಮಿಗಳ ವಿರುದ್ಧ ಸರ್ಕಾರ ಸರಿಯಾದ ಕ್ರಮ ಕೈಗೊಳ್ಳದಿರುವುದೇ ಇವರು ಕೊಲೆ ಮಾಡುವ ಮಟ್ಟಕ್ಕೆ ಬೆಳೆಯಲು ಕಾರಣ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಆನ್‌ಲೈನ್ ಪೇಮೆಂಟ್ ಮೂಲಕ ಹಣ ಸಂಗ್ರಹ
‘ರಾಷ್ಟ್ರ ರಕ್ಷಣಾ ಪಡೆ’ಯ ಹೆಸರನ್ನಿಟ್ಟುಕೊಂಡಿದ್ದ ಪುನೀತ್ ಕೆರೆಹಳ್ಳಿ ನೇತೃತ್ವದ ಗುಂಪು, ಗೂಗಲ್ ಪೇ, ಫೋನ್ ಪೇ ಮೂಲಕ ಹಣ ಸಂಗ್ರಹ ಮಾಡುತ್ತಿದ್ದರು ಎಂಬ ಅಂಶಗಳು ತಿಳಿದುಬಂದಿದೆ.

https://www.facebook.com/100077742295476/videos/892176041841361

ಯಾರು ಈ ಪುನೀತ್ ಕೆರೆಹಳ್ಳಿ?
ಕೊಲೆ ಆರೋಪದಲ್ಲಿ ಬಂಧನಕ್ಕೊಳಗಾದ ಪುನೀತ್ ಕೆರೆಹಳ್ಳಿ ಸೂಲಿಬೆಲೆಯ ಶಿಷ್ಯ. ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ ನನ್ನ ಗುರುಗಳು ಅಂತ ಆತನೇ ಹಲವೆಡೆ ಹೇಳಿಕೊಂಡಿರುವುದು ಕಂಡುಬಂದಿದೆ. ಅದಕ್ಕೆ ಪೂರಕ ಎಂಬಂತೆ, ಕೆಲ ತಿಂಗಳ ಹಿಂದೆ ಈತನ ‘ಅಧ್ವ’ ಯೂಟ್ಯೂಬ್‌ ಚಾನೆಲಿನ ಲಾಂಛನವನ್ನು ಕೂಡ ಬಿಡುಗಡೆ ಮಾಡಿದ್ದರು.

ಹಲಾಲ್-ಜಟ್ಕಾ ವಿವಾದದ ಸಂದರ್ಭದಲ್ಲಿ ಮುಸ್ಲಿಮರ ವಿರುದ್ಧ ಕರಪತ್ರ ಹಂಚಿ ಕೂಡ ಸುದ್ದಿಯಾಗಿದ್ದ ಈತ, ಹೆದ್ದಾರಿಗಳಲ್ಲಿ ಬಡಿಗೆ, ಬ್ಯಾಟು ಹಿಡಿದು ದಾಳಿ ನಡೆಸುತ್ತಿದ್ದ. ಪರವಾನಿಗೆ ಇದ್ದೂ ಕೂಡ ಗೋ ಸಾಗಣೆ ಮಾಡುವವವರ ಮೇಲೆ ದಾಳಿ ಮಾಡಿ ಅದರ ವಿಡಿಯೋವನ್ನು ಫೇಸ್‌ಬುಕ್‌ ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡುತ್ತಿದ್ದ. ಅಲ್ಲದೇ, ಇದನ್ನೇ ಬಳಸಿಕೊಂಡು ಹಣ ಕೂಡ ಗಳಿಸುತ್ತಿದ್ದ ಎಂಬ ಆರೋಪ ಕೂಡ ಕೇಳಿಬಂದಿದೆ. ಬಿಜೆಪಿ ನಾಯಕರೊಂದಿಗೆ ಹತ್ತಿರದ ಸಂಬಂಧ ಹೊಂದಿದ್ದ ಎಂಬುದಕ್ಕೆ ಪುರಾವೆ ಒದಗಿಸುವ ಫೋಟೋಗಳು ಈಗ ಸೋಷಿಯಲ್ ಮೀಡಿಯಾಗಳಲ್ಲಿ ಚರ್ಚೆಗೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...