ಬೆಂಗಳೂರು ಗ್ರಾಮಾಂತರ | ಬೆಂಕಿ ಅವಘಡ; ಹಸುಗಳ ಸಜೀವ ದಹನ

Date:

• ಹಸುಗಳನ್ನು ರಕ್ಷಿಸಲು ಹೋದ ವೃದ್ಧ ರೈತನಿಗೆ ಗಾಯ, ಆಸ್ಪತ್ರೆಗೆ ದಾಖಲು
• ನಾಲ್ಕು ಜಾನುವಾರುಗಳನ್ನು ರಕ್ಷಿಸಿ ಕೊಟ್ಟಿಗೆಯಿಂದ ಹೊರಗೆ ಕಳಿಸಿದ್ದ ರೈತ

ಆಕಶ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುಗಳು ಸಜೀವವಾಗಿ ಸುಟ್ಟು ಹೋಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹೊನ್ನಾಘಟ್ಟ ಗ್ರಾಮದಲ್ಲಿ ನಡೆದಿದೆ.

ಹೊನ್ನಘಟ್ಟ ಗ್ರಾಮದ ಮುನಿಹನುಮಯ್ಯ ಎಂಬ ರೈತನಿಗೆ ಸೇರಿದ್ದ ಹಸುಗಳು ಸುಟ್ಟುಹೋಗಿವೆ. ಮುನಿಹನುಮಯ್ಯ ತಮ್ಮ ತೋಟದ ಮನೆ ಬಳಿ ದನದ ಕೊಟ್ಟಿಗೆ ನಿರ್ಮಾಣ ಮಾಡಿಕೊಂಡು, ಹೈನುಗಾರಿಕೆಯಿಂದ ಜೀವನ ಸಾಗಿಸುತ್ತಿದ್ದರು. ಘಟನೆ ನಡೆದ ದಿನ ರಾತ್ರಿ ಎಂದಿನಂತೆ ಹಸುಗಳಿಗೆ ಮೇವು ಹಾಕಿ ಮನೆಯಲ್ಲಿದ್ದರು. ಈ ವೇಳೆ ಏಕಾಏಕಿ ಕೊಟ್ಟಿಗೆಗೆ ಬೆಂಕಿ ಹೊತ್ತಿಕೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುನಿಹನುಮಯ್ಯ ಕೂಡಲೆ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಆದರೆ, ಕೊಟ್ಟಿಗೆಗೆ ಒಣಗಿದ ತೆಂಗಿನ ಗರಿಗಳನ್ನು ಹಾಕಿದ್ದ ಕಾರಣ ಆ ವೇಳೆಗಾಗಲೇ ಸಂಪೂರ್ಣ ಕೊಟ್ಟಿಗೆಗೆ ಬೆಂಕಿ ವ್ಯಾಪಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಲಕ್ಷ ಬೆಲೆ ಬಾಳುವ ಎರಡು ಹಸುಗಳು ಬೆಂದು ಸ್ಥಳದಲ್ಲೆ ಮೃತಪಟ್ಟಿವೆ.

ದನದ ಕೊಟ್ಟಿಗೆಗೆ ಬೆಂಕಿ ಬೀಳುತ್ತಿದ್ದಂತೆ ಮನೆಯಲ್ಲಿದ್ದ ವೃದ್ದ ಮುನಿಹನುಮಯ್ಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ನಾಲ್ಕು ಜಾನುವಾರುಗಳನ್ನ ರಕ್ಷಿಸಿ ಹೊರಗಡೆ ಕಳಿಸಿದ್ದಾರೆ. ಉಳಿದ ಎರಡು ಹಸುಗಳನ್ನು ರಕ್ಷಿಸಲು ಹೋದ ವೇಳೆ ರೈತ ಸಹ ಬೆಂಕಿಗೆ ಸಿಲುಕಿ ಶೇ. 50 ರಷ್ಟು ಸುಟ್ಟಿದ್ದು, ಸ್ಥಳಿಯರು ರೈತನನ್ನು ರಕ್ಷಿಸಿ ಆಸ್ವತ್ರೆಗೆ ಸಾಗಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...