ಬೀದರ್‌ | ವಿವಿಧ ಬೇಡಿಕೆ ಈಡೇರಿಕೆಗೆ ಸಿಪಿಐ ಒತ್ತಾಯ

Date:

  • ಬೀದರ ಬರ ಪೀಡಿತ ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹ
  • ʼನ್ಯೂಸ್‌ ಕ್ಲಿಕ್‌ʼ ಸಂಸ್ಥೆಯ ಪತ್ರಕರ್ತರ ಮನೆ ಮೇಲೆ ನಡೆಸಿದ ಇಡಿ ದಾಳಿ ಖಂಡನೀಯ

ಬೀದರ್ ಜಿಲ್ಲೆ ಬರ ಪರಿಸ್ಥಿತಿ, ಆರ್ಟಿಕಲ್ 371(ಜೆ)ಯ ಅನುಷ್ಠಾನ, ಬಲಪಂಥಿಯ ರಾಷ್ಟ್ರೀಯ ಏಜ್ಯುಕೇಶನ ಪಾಲಿಸಿ ರಾಜ್ಯದಲ್ಲಿ ರದ್ದುಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಿ ಭಾರತ ಕಮ್ಯೂನಿಸ್ಟ್‌ ಪಕ್ಷದ ಕಾರ್ಯಕರ್ತರು ಬೀದರ್‌ ನಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂಬಂಧ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, “ಸರ್ಕಾರ ಅರಣ್ಯ ಕಾಯ್ದೆ ತಿದ್ದುಪಡಿ ಹಿಂತೆಗೆದುಕೊಳ್ಳಬೇಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸುವುದು. ಬಗರ್ ಹುಕುಂ ಸಾಗುವಳಿದಾರರನ್ನು ಸಕ್ರಮಗೊಳಿಸಬೇಕು, ನರೇಗಾ ಕಾರ್ಮಿಕರ ಆನಲೈನ್ ಹಾಜರಾತಿ ರದ್ದುಪಡಿಸಬೇಕು. ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಸಮುದಾಯ ಆರೋಗ್ಯ ಅಧಿಕಾರಿಗಳನ್ನು 5 ಸಾವಿರ ಜನ ಸಂಖ್ಯೆಗೆ ಆರೋಗ್ಯ ಸೇವೆ ಒದಗಿಸಬೇಕು. ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಲ್ಲಿ ಅತಿ ಕಡಿಮೆ ವೇತನದಲ್ಲಿ ದುಡಿಯುತ್ತಿರುವ ಅವರುಗಳನ್ನು ಕ್ರಮಬದ್ಧಗೋಳಿಸಬೇಕು ಹಾಗೂ ಅಂಗನವಾಡಿ, ಬಿಸಿಯೂಟ ಮತ್ತು ಆಶಾ ಕಾರ್ಯಕರ್ತರನ್ನು ಸರಕಾರಿ ನೌಕರರೆಂದು ಪರಿಗಣಿಸಿ ʼಸಿʼ ಹುದ್ದೆಯಲ್ಲಿ ಕ್ರಮ ಬದ್ಧಗೊಳಿಸುವುದು ಹಾಗೂ ಆರೋಗ್ಯ ಕೇಂದ್ರಗಳಿಗೆ ಔಷಧಿಗಳನ್ನು ಹೆಚ್ಚಾಗಿ ಪೂರೈಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇತ್ತೀಚೆಗೆ ದೆಹಲಿಯಲ್ಲಿ News Click ಸಂಸ್ಥೆಯಲ್ಲಿ ಪತ್ರಕರ್ತರಾಗಿ ದುಡಿಯುವರನ್ನು ಉದ್ದೇಶ ಪೂರ್ವಕವಾಗಿ ಅವರುಗಳ ಮನೆ ಮತ್ತು ಕಚೇರಿಗಳ ಮೇಲೆ ಕೇಂದ್ರ ಸರ್ಕಾರದ ನಡೆಸಿದ ಇಡಿ ದಾಳಿ  ತೀವ್ರವಾಗಿ ಖಂಡಿಸಿದ ಕಾರ್ಯಕರ್ತರು ಪತ್ರಕರ್ತರ ವಿರುದ್ಧ ʼUAPAʼ ಕಾನೂನಿನಂತೆ ನೋಂದಣಿ ಮಾಡಿದ್ದು ಕೂಡಲೇ ಹಿಂಪಡೆಯಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷದ ಪ್ರಮುಖರಾದ ಬಾಬುರಾವ ಹೊನ್ನಾ , ಎಮ್.ಡಿ ಶಫಾಯತ್ ಅಲಿ, ಅಲಿ ಅಹ್ಮದ್ ಖಾನ್, ನಜೀರ್ ಅಹ್ಮದ್ , ಗುರುಪಾದಯ್ಯ ಸ್ವಾಮಿ, ಮೌಲಾನಾ, ಪ್ರಭು ಹೊಚಕನಳ್ಳಿ, ಸುನೀಲ ವರ್ಮಾ, ಪ್ರಭು ತಗಣಿಕರ್, ಶಿವರಾಜ ಕಮಠಾಣ, ರಾಮಣ್ಣಾ ಅಲಮಾಸಪೂರ, ಮಾರುತಿ ನಂದ್ಯಾಳ ಸೇರಿದಂತೆ ಇತರರಿದ್ದರು.

ಬೇಡಿಕೆಗಳು:

  1. ನಿವೇಶನ ರಹಿತರಿಗೆ ಮನೆಗಳು ಮಂಜೂರು ಮಾಡುವುದು.
  2. ಬೀದರ್ ಬರ ಪೀಡಿತವೆಂದು ಜಿಲ್ಲೆ ಎಂದು ಘೋಷಿಸಬೇಕು.
  3. ಕಲಂ 371 (ಜೆ) ರಂತೆ ಹುದ್ದೆಗಳನ್ನು ಭರ್ತಿ ಮಾಡಬೇಕು.
  4. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಪಡಿಸುವುದು.
  5. ಅರಣ್ಯ ಸಂರಕ್ಷಣ ಕಾಯ್ದೆಯನ್ನು ಹಿಂತೆಗೆದುಕೊಳ್ಳಬೇಕು. ಬಗರ ಹುಕುಂ ಸಾಗುವಳಿದಾರರನ್ನು
    ಸಕ್ರಮಗೊಳಿಸಬೇಕು.
  6. ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು.
  7. ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಔಷಧ ಮತ್ತು ಉಪಕರಣಗಳನ್ನು ಪೂರೈಸಬೇಕು.
  8. ಸಮುದಾಯ ಆರೋಗ್ಯ ಅಧಿಕಾರಿಗಳನ್ನು, ಅಂಗನವಾಡಿ ನೌಕರ, ಆಶಾ ಕಾರ್ಯಕರ್ತ ಮತ್ತು ಬಿಸಿಯೂಟ ನೌಕರರನ್ನು ಸಕ್ರಮಗೊಳಿಸಬೇಕು.

ಈ ಸುದ್ದಿ ಓದಿದ್ದೀರಾ? ನವೆಂಬರ್‌ನಲ್ಲಿ ರಾಜ್ಯದ ಜಾತಿಗಣತಿ ವರದಿ ನನ್ನ ಕೈ ಸೇರಲಿದೆ: ಸಿಎಂ ಸಿದ್ದರಾಮಯ್ಯ

  1. ಭೂಮಿ ಸರ್ವೇ ಮಾಡಲು ಶುಲ್ಕ ಹೆಚ್ಚಿಸಿದನ್ನು ಹಿಂಪಡೆಯಬೇಕು. ಪಹಣಿ ಪತ್ರಿಕೆಗಳಲ್ಲಿಯ ತಪ್ಪುಗಳನ್ನು ಕಂದಾಯ ಆದಾಲತ್ ಮುಖಾಂತರ ಸರಿಪಡಿಸಬೇಕು.
  2. ಬೀದರ ಸಹಕಾರ ಸಕ್ಕರೆ ಕಾರರ್ಖಾನೆ ಆಡಳಿತ ಮಂಡಳಿಯನ್ನು ಅಮಾನತುಗೊಳಿಸಿ ರೈತರ ಮತ್ತು ಕಾರ್ಮಿಕರ ಹಣ ಕೊಡದೆ ಇದ್ದುದಕ್ಕೆ ಅಪರಾಧಿಕ ಪ್ರಕರಣವನ್ನು ನೋಂದಾಯಿಸಬೇಕು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...