ಕಲಬುರಗಿ | ಕೇಂದ್ರ ಬಜೆಟ್‌ ವಿರೋಧಿಸಿ ಸಿಪಿಐ(ಎಂ) ಪ್ರತಿಭಟನೆ

Date:

2025-26ನೇ ಸಾಲಿನ ಕೇಂದ್ರ ಬಜೆಟ್ ಭಾರತದ ಜನರ ಅವಶ್ಯಕತೆಗಳಿಗೆ ಮಾಡಿರುವ ಕ್ರೂರ ವಿಶ್ವಾಸ ದ್ರೋಹವಾಗಿದೆ ಎಂದು ಕೇಂದ್ರ ಬಜೆಟ್‌ ವಿರೋಧಿಸಿ ಸಿಪಿಐ(ಎಂ) ಪ್ರತಿಭಟನೆ ನಡೆಸಿತು.

ಆಳಂದ ಪಟ್ಟಣದಲ್ಲಿ ಸಿಪಿಐ(ಎಂ) ತಾಲೂಕು ಸಮಿತಿಯ ಪದಾಧಿಕಾರಿಗಳು ಕೇಂದ್ರ ಬಜೆಟ್ ವಿರೋಧಿಸಿ ಪ್ರತಿಭಟನೆ ನಡೆಸಿದರು. ಬಳಿಕ ಉಪತಹಶೀಲ್ದಾರ್ ಸಿದ್ರಾಮ್ ಎಸ್. ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಸಿಪಿಐ(ಎಂ) ಮುಖಂಡ ಸಲ್ಮಾನ್ ಖಾನ್ ಸಿ. ಮಾತನಾಡಿ, ʼಶ್ರೀಮಂತರಿಂದ ಶ್ರೀಮಂತರಿಗಾಗಿ ಮಾತ್ರ ಈ ಬಜೆಟ್ ಆಗಿದೆ. ಒಕ್ಕೂಟ ತತ್ವವನ್ನು ದುರ್ಬಲಗೊಳಿಸುವ ಮತ್ತು ರಾಜ್ಯಗಳ ಹಕ್ಕುಗಳ ಮೇಲೆ ದಾಳಿ ನಡೆಸುವ ನಿಲುವನ್ನು ಇದು ಬಿಂಬಿಸುತ್ತದೆ. ಮೋದಿ ಸರ್ಕಾರದ ದಿವಾಳಿತನವನ್ನು ಬಿಂಬಿಸುವ ಈ ಬಜೆಟ್ ದೇಶದ ಅರ್ಥವ್ಯವಸ್ಥೆ ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆʼ ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼ2025-26ರಲ್ಲಿ ಹಂಚಿಕೆಗಳು ಎಸ್ಸಿ ಮತ್ತು ಎಸ್ಟಿಗಳಿಗೆ ಶೇ3.4 ಮತ್ತು ಶೇ2.6 ರಷ್ಟು ವೆಚ್ಚ ನೀಡಿದೆ. ಬಜೆಟ್ ಒಕ್ಕೂಟ ತತ್ವವನ್ನು ದುರ್ಬಲಗೊಳಿಸುವ ಮತ್ತು ರಾಜ್ಯಗಳ ಹಕ್ಕುಗಳ ಮೇಲೆ ದಾಳಿ ನಡೆಸುವ ನಿಲುವನ್ನು ಬಿಂಬಿಸುತ್ತದೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಾಗತಿಕ ಲಿಂಗಾಯತ ಮಹಾಸಭಾ ಆಳಂದ ತಾಲೂಕಾಧ್ಯಕ್ಷ ರಮೇಶ ಲೋಹಾರ ಮಾತನಾಡಿ, ʼತೆರಿಗೆ ವಿನಾಯಿತಿ ಮಿತಿಯನ್ನು 12ಲಕ್ಷಕ್ಕೆ ಹೆಚ್ಚಿಸುವ ಮೂಲಕ ಮಧ್ಯಮ ವರ್ಗಗಳಿಗೆ ಸಹಾಯ ಮಾಡಲಾಗುತ್ತಿದೆ. ವಾಸ್ತವವಾಗಿ ಆದಾಯ ತೆರಿಗೆ ರಿಯಾಯಿತಿಗಳಿಂದಾಗಿ ಸರಕಾರ ಅನುಭವಿಸುವ ರೂಪಾಯಿ 1 ಲಕ್ಷ ಕೋಟಿ ನಷ್ಟದಿಂದ ಪ್ರಯೋಜನದ ಪಾಲು ಪಡೆಯುವವರು ಶೇ.1ರಷ್ಟು ಮಂದಿ ಮಾತ್ರ ಇದ್ದಾರೆʼ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಯೋಧ್ಯೆ ಅತ್ಯಾಚಾರ ಪ್ರಕರಣ; ಶೋಷಿತ ಸಮುದಾಯಕ್ಕೆ ಸಿಗದ ರಕ್ಷಣೆ

ಈ ಸಂದರ್ಭದಲ್ಲಿ ಪ್ರಮುಖರಾದ ಪ್ರಮೋದ ಪಾಂಚಾಳ, ರೂಪಾ ಇಕ್ಕಳಕಿ, ಸಮರ್ಥ್, ಶಿವಶಂರಣಪ್ಪ ಬೆಳಸುರೆ ಲ., ವಿಜಯ್, ಅಬ್ದುಲ್, ವಿಶಾಲ್, ಅಶಿಶ್ ಇತರರು ಹಾಜರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...