ಉಡುಪಿ | ಸಾರಿಗೆ ದರ ಹೆಚ್ಚಳ ಜನ ವಿರೋಧಿ : ಸಿಪಿಐಎಂ ಖಂಡನೆ

Date:

ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಪ್ರಯಾಣಿಕರ ಸಾರಿಗೆ ದರಗಳು ಶೇಕಡ 15ರಷ್ಟು ಹೆಚ್ಚಿಸಿರುವ ರಾಜ್ಯ ಸರಕಾರ ಕ್ರಮವನ್ನು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿ ಖಂಡಿಸಿದೆ.

ಡೀಸೆಲ್ ದರಗಳ ಹೆಚ್ಚಳ ಮತ್ತು ಸಿಬ್ಬಂದಿ ವೆಚ್ಚ ಹೆಚ್ಚಳದ ನೆಪದಲ್ಲಿ ದರ ಏರಿಕೆ ಮಾಡಿರುವುದು ಅಪ್ರಜಾಸತ್ತಾತ್ಮಕ ಮತ್ತು ಅವೈಜ್ಞಾನಿಕವಾಗಿದೆ. ಅಲ್ಲದೆ ಇದು ಸಾಮಾನ್ಯ ಜನರ ವಿರೋಧಿಯಾಗಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಹೆಚ್ಚಳದಿಂದ ನರಳುತ್ತಿರುವ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವ ರಾಜ್ಯ ಸರಕಾರ ದರ ಹೆಚ್ಚಳದ ತೀರ್ಮಾನವನ್ನು ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡೀಸೆಲ್ ಹೆಚ್ಚಳವಾಗಿದೆ ಎನ್ನುವ ಸರ್ಕಾರ, ಡೀಸೆಲ್ ದರ ಇಳಿದಾಗ ದರಗಳನ್ನು ಎಂದಾದರೂ ಕಡಿಮೆ ಮಾಡಿದೆಯೇ? ಅದಕ್ಕಿಂತ ಮುಖ್ಯವಾಗಿ ಸಾರ್ವಜನಿಕ ಸಾರಿಗೆಯ ಡೀಸೆಲ್ ದರಗಳನ್ನು ಕಡಿಮೆ ಇಡಬೇಕಾದ್ದು ಸರಕಾರದ ಜವಾಬ್ದಾರಿಯಾಗಿದೆ. ವಿಪರ್ಯಾಸವೆಂದರೆ ಸಾರಿಗೆ ನಿಗಮಗಳಿಗೆ ಪೂರೈಸುವ ಡೀಸೆಲ್ ದರವು ಮುಕತಿ ಮಾರುಕಟ್ಟೆ ದರಗಳಿಗಿಂತ ದುಬಾರಿಯಾಗಿದೆ. ಸರಕಾರಕ್ಕೆ ನಿಜಕ್ಕೂ ವೆಚ್ಚವನ್ನು ಕಡಿಮೆ ಮಾಡಬೇಕೆಂದಿದ್ದರೆ ಸಾರಿಗೆ ನಿಗಮಗಳಿಗೆ ಪೂರೈಸುವ ಡೀಸೆಲ್ ದರವನ್ನು ಸಬ್ಸಿಡಿ ದರದಲ್ಲಿ ಪೂರೈಸಬೇಕು ಅಥವಾ ಮುಕತಿ ಮಾರುಕಟ್ಟೆ ದರಗಳಲ್ಲಾದರೂ ಪೂರೈಸಬೇಕು. ಆದ್ದರಿಂದ ಶೇಕಡ 15 ರ ದರ ಹೆಚ್ಚಳಕ್ಕೆ ಡೀಸೆಲ್ ದರ ಹೆಚ್ಚಳ ಕಾರಣ ಎನ್ನುವುದು ಸುಳ್ಳು ನೆಪವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಬ್ಬಂದಿ ವೆಚ್ಚ ಹೆಚ್ಚಳವಾಗಿರುವುದು ಮತೊತಿಂದು ಕಾರಣವೆನ್ನಲಾಗಿದೆ. ಈಗಾಗಲೇ ನಾಲ್ಕು ನಿಗಮಗಳಲ್ಲಿ ಸಿಬ್ಬಂದಿಗಳಿಗೆ ಸುಮಾರು 3 ವರ್ಷಗಳ ವೇತನ ಬಾಕಿ ನೀಡಬೇಕಿದೆ ಮತ್ತು ಹೊಸ ವೇತನ ಒಪ್ಪಂದ ಮಾಡಬೇಕಿದೆ. 1950 ರ ಖಖಿಅ ಕಾಯ್ದೆ ಪ್ರಕಾರ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಸರ್ಕಾರ ಬಜೆಟ್ ಬೆಂಬಲ ನೀಡುವುದು ಅಗತ್ಯ. ಏಕೆಂದರೆ ಸಾರ್ವಜನಿಕ ಹಿತ ದೃಷ್ಟಿಯಿಂದ ಒದಗಿಸುವ ಸಾರಿಗೆಯನ್ನು ಲಾ ನಷ್ಟದ ಲೆಕ್ಕದಲ್ಲಿ ನೋಡಬಾರದು. ನಷ್ಟ ಉಂಟಾದಲ್ಲಿ ಸರಕಾರ ಅದನ್ನು ರಿಸಬೇಕಾಗುತತಿದೆ. ಸಾರ್ವಜನಿಕ ಸಾರಿಗೆಗಳು ಎಲ್ಲಾ ಸಂದರ್ಗಳಲ್ಲೂ ಲಾವನ್ನು ತರಲು ಆಗುವುದಿಲ್ಲ. ಸಾರಿಗೆ ನಿಗಮಗಳ ಅರ್ಧದಷ್ಟು ಮಾರ್ಗ ಕಾರ್ಯಾಚರಣೆಗಳು ಗ್ರಾಮಾಂತರದಲ್ಲಿ ಇರುವುದರಿಂದ ಸಹಜವಾಗಿಯೇ ನಷ್ಟ ಹೊಂದುತ್ತದೆ. ಜನರ ಹಿತದೃಷ್ಟಿಯಿಂದ ಸರಕಾರ ಅದನ್ನು ರಿಸಬೇಕು. ಅದರ ಬದಲಿಗೆ ಬೆಲೆ ಹೆಚ್ಚಳ ಮಾುವುದು ಜನವಿರೋಧಿ ಕ್ರಮವಾಗಿದೆ

ಸಾರಿಗೆ ನಿಗಮಗಳ ನಷ್ಟ ಕಡಿಮೆ ಮಾಡಲು ಸಾರ್ವಜನಿಕರ, ರಾಜಕೀಯ ಪಕ್ಷಗಳ ಸಲಹೆಗಳನ್ನು ಆಡಳಿತ ವರ್ಗ ಪಡೆಯಬಹುದು. ಆಡಳಿತಾತ್ಮಕ ವಿಧಾನಗಳಲ್ಲಿ ಸಾಕಷ್ಟು ನಷ್ಟ ಕಡಿಮೆ ವಾಡಬಹುದು. ಪ್ರಯಾಣಿಕರ ಸಾರಿಗೆ ದರ ಹೆಚ್ಚಳ ಉತತಿಮ ಮಾರ್ಗವಲ್ಲ. ಎಲೆಕ್ಟ್ರಿಕ್ ಬಸ್ಸುಗಳನ್ನು ನಿಗಮಗಳೇ ಕಾರ್ಯಾಚರಣೆಯನ್ನು ಮಾಡಿದರೆ ಸಾಕಷ್ಟು ಆದಾಯ ಹೆಚ್ಚುತದೆ. ಖಾಸಗಿ ಕಂಪನಿಗಳ ಜೊತೆ ದುಬಾರಿ ಒಪ್ಪಂದಗಳನ್ನು ಮಾಡಿಕೊಂಡು ನಿಗಮಗಳೇ ನಷ್ಟ ಉಂಟು ಮಾಡಿಕೊಳ್ಳುತಿತಿವೆ. ನಿಗಮಗಳ ಬಸ್ಸುಗಳ ಮೇಲಿನ ತೆರಿಗೆಗಳನ್ನು ಕಡಿಮೆ ಮಾಡುವ ಮೂಲಕ ನಷ್ಟ ಕಡಿಮೆ ಮಾಡಬಹುದು. ಸರ್ಕಾರ ಈ ವಿಧಾನಗಳನ್ನು ಕೈ ಬಿಟ್ಟು ದರ ಹೆಚ್ಚಿಸುತ್ತಿರುವುದು ಜನವಿರೋಧಿಯಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...