ಉಡುಪಿ | ಕೇಂದ್ರ ಮತ್ತು ರಾಜ್ಯ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಸಿಪಿಐ(ಎಂ) ಪ್ರತಿಭಟನೆ

Date:

ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಕೇಂದ್ರ ಸಮಿತಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳ ಜನವಿರೋಧ ನೀತಿಗಳನ್ನು ವಿರೋಧಿಸಿ ಜುನ್ 20ರಿಂದ ದೇಶಾದ್ಯಂತ ಜನಸಾಮಾನ್ಯರ ಮಧ್ಯೆ ಪ್ರಚಾರ, ಜನಜಾಗೃತಿ ಸಭೆ, ಪ್ರತಿಭಟನೆ ನಡೆಸಲು ಕರೆ ನೀಡಿದ್ದು ಉಡುಪಿ ಜಿಲ್ಲೆಯಲ್ಲೂ ವ್ಯಾಪಕ ಪ್ರಚಾರ ನಡೆಸುತ್ತಿದೆ. ಕೇಂದ್ರ ಸರಕಾರದ ಕಾರ್ಮಿಕ ಕಾನೂನು ತಿದ್ದುಪಡಿಯಿಂದಾಗಿ ಕಾರ್ಮಿಕರು ಸೌಲಭ್ಯ ಗಳಿಂದ ವಂಚಿತರಾಗುತ್ತಿದ್ದಾರೆ. ಬಡ ಕಾರ್ಮಿಕರು ಸ್ವಂತ ನಿವೇಶನ ಇಲ್ಲದೆ ಬಾಡಿಗೆ ಕಟ್ಟಲು ಸಾಧ್ಯವಾಗದೆ ಕಷ್ಟಪಡುತ್ತಿದ್ದಾರೆ. ದಿನ ನಿತ್ಯ ಬೆಲೆ ಏರಿಕೆ ಯಿಂದಾಗಿ ಕಾರ್ಮಿಕರು ಎಷ್ಟು ದುಡಿದರು ಮಕ್ಕಳ ಶಿಕ್ಷಣ, ಆಹಾರ, ಆರೋಗ್ಯ ಬಗ್ಗೆ ಗಮನ ಕೊಡಲು ಸಾಧ್ಯವಾಗುತ್ತಿಲ್ಲ. ಇನ್ನೊಂದು ಕಡೆ ಕೇಂದ್ರ ಸರಕಾರವು ಸರಕಾರಕ್ಕೆ ದೊಡ್ಡ ಪ್ರಮಾಣದಲ್ಲಿ ಆದಾಯ ಬರುತ್ತಿದ್ದರು ರೈಲ್ವೆ, ವಿದ್ಯುತ್, ಬಂದರುಗಳು, ವಿಮಾನ ನಿಲ್ದಾಣ ಗಳನ್ನು ಖಾಸಗೀಯವರಿಗೆ ಮಾರಟ ಮಾಡುತ್ತಿದ್ದಾರೆ. ಈ ಸರಕಾರದ ಧೋರಣೆಗಳನ್ನು ಜನಸಾಮಾನ್ಯರಿಗೆ ತಿಳಿಸಲು ಸಿಪಿಐಎಮ್ ಪಕ್ಷವು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಪಕ್ಷದ ಉಡುಪಿ ಜಿಲ್ಲಾ ಸಮಿತಿ ಸದಸ್ಯರಾದ ಕವಿರಾಜ್ .ಎಸ್. ಕಾಂಚನ್ ತಿಳಿಸಿದ್ದಾರೆ‌

ಭಾರತ ಕಮ್ಯೂನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ (ಸಿಪಿಐಎಮ್) ಉಡುಪಿ ವಲಯ ಸಮಿತಿ ನೇತ್ರತ್ವದಲ್ಲಿ ಉಡುಪಿಯ ಇಂದಿರನಗರ, ಕುಕ್ಕಿಕಟ್ಟೆ, ದೊಡ್ಡಣಗುಡ್ಡೆ, ಈಶ್ವರನಗರ, ಕೆಳಾರ್ಕಳಬೆಟ್ಟು, ಮೂಡಬೆಟ್ಟು, ಲಕ್ಷೀನಗರ ಗರಡೆ ಪ್ರದೇಶದಲ್ಲಿ ಪ್ರಚಾರ ನಡೆಸಲಾಯಿತು.

ಸ್ಥಳೀಯ ಪ್ರಮುಖ ಬೇಡಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
  1. ಉಡುಪಿಯಲ್ಲಿ ಇ.ಎಸ್.ಐ. Dispensary ಔಷಧ ಗಳು ಸರಿಯಾಗಿ ಸಿಗುತ್ತಿಲ್ಲ. ಅದನ್ನು ಕೂಡಲೇ ಸರಿಪಡಿಸಬೇಕು. ಇದರಿಂದ ಕಾರ್ಮಿಕರಿಗೆ ತುಂಬಾ ಸಹಾಯವಾಗುತ್ತದೆ.
  2. ಗ್ರಾಮೀಣ ಭಾಗಗಳಲ್ಲಿ ರಸ್ತೆ, ಚರಂಡಿ ವ್ಯವಸ್ಥೆಯನ್ನು ಕೂಡಲೇ ಸರಿಪಡಿಸಬೇಕು. ಕೆಲವು ಕಡೆ ಮಳೆ ನೀರು ಸರಿಯಾಗಿ ಹರಿಯಲು ಸಾಧ್ಯವಾಗದೆ ಗೋಡೆ ಕುಸಿತ, ಮಣ್ಣು ಕುಸಿತ ಸಂಭವಿಸುತ್ತಿದೆ.
  3. ಜನರ ಬಳಕೆಗೆ ಪೂರಕವಾಗಿ ಮುರುಡೇಶ್ವರ-ಬೆಂಗಳೂರು ಹಗಲು ರೈಲನ್ನು ರಾತ್ರಿ ಕೂಡ ಓಡಿಸಬೇಕು ಇದರಿಂದ ಸಾಮಾನ್ಯ ಜನರಿಗೆ ತುಂಬಾ ಅನುಕುಲವಾಗಲಿದೆ.

  4. ಈ ಎಲ್ಲಾ ಬೇಡಿಕೆಗಳನ್ನು ಇಟ್ಟು ತೆಂಕನಿಡಿಯೂರು ಪಂಚಾಯತ್ ಮೂಲಕ ಪ್ರಧಾನಮಂತ್ರಿ ಯವರಿಗೆ ಮನವಿಯನ್ನು ನೀಡಲಾಯಿತು.

ನಿಯೋಗದಲ್ಲಿ ಪಕ್ಷದ ಉಡುಪಿ ವಲಯ ಕಾರ್ಯದರ್ಶಿ ಶಶಿಧರ ಗೊಲ್ಲ, ಜಿಲ್ಲಾ ಸಮಿತಿ ಸದಸ್ಯರಾದ ಉಮೇಶ್ ಕುಂದರ್, ಉಡುಪಿ ವಲಯ ಸಮಿತಿ ಸದಸ್ಯರಾದ ನಳಿನಿ. ಎಸ್, ಪಕ್ಷದ ಮುಖಂಡರಾದ ಶಾರದ, ಲಕ್ಷೀ, ಕಮಲ, ಲಕ್ಷೀ ಎಸ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...