ಉಡುಪಿ | ನಿರುದ್ಯೋಗದಿಂದ ದೇಶ ತತ್ತರಿಸುತ್ತಿದೆ – ಡಾ ಪ್ರಕಾಶ್

Date:

ಕಳೆದ ಹತ್ತು ವರ್ಷಗಳ ಹಿಂದೆ ಅಧಿಕಾರಕ್ಕೆ ಬಂದ ಮೋದಿ ಸರಕಾರ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದರು, ಹತ್ತು ವರ್ಷಕ್ಕೆ 20 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು ಆದರೆ, ಪ್ರತಿ ಹಂತದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪ್ರತಿ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಉದ್ಯೋಗಕ್ಕಾಗಿ ಅರಸಿ ಬರುವವರನ್ನು ನೋಡಬಹುದು. ಉದ್ಯೋಗವಿಲ್ಲದೇ ತಂದ ಬುತ್ತಿಯನ್ನು ತಿಂದು, ಮನೆಗೆ ತೆರಳುವವರ ಸಂಖ್ಯೆ ಹೆಚ್ಚಾಗಿದೆ. ಇಂತಹ ಪರಿಸ್ಥಿತಿ ದೇಶವ್ಯಾಪಿ ಇದೆ. ಇದ್ದ ಕೆಲಸಕ್ಕೂ ಕೂಡ ಭದ್ರತೆ ಇಲ್ಲ. 3೦ ಸಾವಿರ ಕಾರ್ಮಿಕರಿರುವ ಕಾರ್ಖಾನೆಗಳಲ್ಲಿ 1 ಸಾವಿರ ಖಾಯಂ ನೌಕರರಿರುತ್ತಾರೆ. ಮೋದಿ ಕಾಲದಲ್ಲಿ ಕಾಂಟ್ರ್ಯಾಕ್ಟ್ ಪದ್ಧತಿ ಜ್ಯಾರಿ ಮಾಡಲಾಗುತ್ತಿದೆ ಎಂದು ಸಿ.ಪಿ.ಎಂ. ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಡಾ. ಪ್ರಕಾಶ್ ಕೆ. ಹೇಳಿದರು. ನಮ್ಮ ದೇಶದ ಸಂವಿಧಾನದಲ್ಲಿ ಅಸಮಾನತೆ ಇಲ್ಲ ಸಮಾನತೆ ಇದೆ ಆದರೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನದ ಬಗ್ಗೆ ಅಪಸ್ವರ ಎತ್ತಿ ಸಂವಿಧಾನ ವಿರೋಧಿಯಾಗಿ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

ಅವರು ಕುಂದಾಪುರದ ನಾಡಾದಲ್ಲಿ ನಡೆಯುತ್ತಿರುವ ಉಡುಪಿ ಜಿಲ್ಲಾ ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷದ 8ನೇ ಜಿಲ್ಲಾ ಸಮ್ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಉದ್ಯೋಗವೆಂದರೆ ಬಂಡವಾಳಗಾರರು ಲೂಟಿ ಮಾಡಲು ಅವಕಾಶ ಮಾಡಿಕೊಡುವ ಯೋಜನೆ ಎಂದು ಮೋದಿ ತಿಳಿದುಕೊಂಡಿದ್ದಾರೆ. ಅದಕ್ಕಾಗಿಯೇ ಭಾರತದ ಸಂಪತ್ತನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಡಾ. ಪ್ರಕಾಶ್. ಕೆ. ಹೇಳಿದರು.

ಸಮ್ಮೇಳನದ ಧ್ವಜಾರೋಹಣವನ್ನು ಸಿ.ಪಿ.ಎಂ. ಪಕ್ಷದ ಹಿರಿಯ ಮುಖಂಡರಾದ ಎ.ಎಸ್. ಆಚಾರ್ಯ ನೆರವೇರಿಸಿ ಮಾತನಾಡುತ್ತಾ, ನಿಜವಾದ ಪ್ರಜಾಪ್ರಭುತ್ವ ವ್ಯವಸ್ಥೆ ಇರುವುದು ಸಿ.ಪಿ.ಎಂ. ಪಕ್ಷದಲ್ಲಿ ಮಾತ್ರ. ಗ್ರಾಮ, ವಲಯ, ತಾಲೂಕು, ಜಿಲ್ಲೆ, ರಾಜ್ಯ ಹೀಗೆ ರಾಷ್ಟ್ರ ಸಮ್ಮೇಳನ ನಡೆದು ಸದಸ್ಯರೇ ಪಕ್ಷದ ನಾಯಕತ್ವ ಆಯ್ಕೆ ಮಾಡುತ್ತಾರೆ. ಆದರೆ, ಬೇರೆಲ್ಲಾ ಪಕ್ಷದಲ್ಲಿ ಅದರ ಹೈಕಮಾಂಡ್ ನಿರ್ಧರಿಸುತ್ತಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾರಂಭದ ಅಧ್ಯಕ್ಷತೆಯನ್ನು ಸಿ.ಪಿ.ಎಂ. ರಾಜ್ಯ ಕಂಟ್ರೋಲ್ ಕಮಿಟಿ ಅಧ್ಯಕ್ಷರಾದ ಕೆ. ಶಂಕರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಿ.ಪಿ.ಎಂ.ನ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಯಾದವ ಶೆಟ್ಟಿ ಮಾತನಾಡಿ ಜನರ ಧಾರ್ಮಿಕ ಭಾವನೆಗಳನ್ನು ಬಿಜೆಪಿ ರಾಜಕೀಯಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಆದರೆ ಸಿಪಿ‌ಎಂ ಪಕ್ಷ ನಿವೇಶನ ಇಲ್ಲದವರ, ಸಂಬಳವಿಲ್ಲದ ಅಕ್ಷರ ದಾಸೋಹ ನೌಕರರ ಪರ, ಆಟೋ ,ಅಂಗನವಾಡಿ ನೌಕರರ ಸಮಸ್ಯೆಗಳ ಬಗ್ಗೆ, ಉದ್ಯೋಗ ಖಾತ್ರಿ ಕೂಲಿ ಮಾಡುವವರ ಕೂಲಿ ಬಗ್ಗೆ, ಬೀಡಿ, ಕಟ್ಟಡ ಕಾರ್ಮಿಕರ ಪರ ಮಾತನಾಡಿ ಹೋರಾಟ ನಡೆಸುವ ಏಕೈಕ ಪಕ್ಷ ಸಿಪಿ‌ಎಂ ಪಕ್ಷವಾಗಿದೆ ಎಂದರು.

ಸಿ.ಪಿ‌ಎಂ. ಜಿಲ್ಲಾ ಸಮ್ಮೇಳನದ ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ನಿರ್ಣಯ ಅಂಗೀಕರಿಸಿತು. ವೇದಿಕೆಯಲ್ಲಿ ಜಿಲ್ಲಾ ಸಮಿತಿ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಸ್ವಾಗತ ಸಮಿತಿ ಕಾರ್ಯದರ್ಶಿ ರಾಜೀವ ಪಡುಕೋಣೆ, ಸ್ವಾಗತ ಸಮಿತಿ ಕೋಶಾಧಿಕಾರಿ ನಾಗರತ್ನ ನಾಡ, ಸಿ.ಪಿ.ಎಂ. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಎಚ್. ನರಸಿಂಹ, ಸುರೇಶ್ ಕಲ್ಲಾಗರ, ಚಂದ್ರಶೇಖರ ಉಪಸ್ಥಿತರಿದ್ದರು. ರಾಜೀವ ಪಡುಕೋಣೆ ಸ್ವಾಗತಿಸಿ, ಶ್ರೀಧರ ನಾಡಾ ಕಾರ್ಯಕ್ರಮ ನಿರೂಪಿಸಿ, ನಾಗರತ್ನ ನಾಡಾ ವಂದಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...