ಧಾರವಾಡ | ಬಿರುಕು ಬಿಟ್ಟು ಸೋರುತ್ತಿರುವ ರೈಲ್ವೆ ಮೇಲ್ಸೇತುವೆ; ಸರಿ ಪಡಿಸುವರೇ ಅಧಿಕಾರಿಗಳು?

Date:

ಮಳೆಗಾಲ‌ ಶುರುವಾದರೆ ಸಾಕು, ಈ ರೈಲ್ವೆ ಮೇಲ್ಸೇತುವೆ ಥಟ್ ಥಟ್ ಎಂದು ನೀರು ಸೋರತೊಡಗುತ್ತದೆ. ಈ ಸೇತುವೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಯಾಕಪ್ಪಾ ಮಳೆ ಬರುತ್ತದೆ ಎಂದು ತಲೆ ಬಿಸಿಯಾಗುತ್ತದೆ. ಇತ್ತ ರೈಲ್ವೆ ಅಧಿಕಾರಿಗಳಿಗೂ ಗಮನವಿಲ್ಲ, ಅತ್ತ ಗ್ರಾಮ ಪಂಚಾಯತಿಗೂ ಎಚ್ಚರವಿಲ್ಲ.

ಅಷ್ಟಕ್ಕೂ ಈ ಸೇತುವೆ ಯಾವುದು ಗೊತ್ತಾ? ಧಾರವಾಡ ಮತ್ತು ಅಳ್ನಾವರ ಮಾರ್ಗ ಮಧ್ಯದಲ್ಲಿ ಇರುವ ಧಾರವಾಡ ತಾಲೂಕಿನ ಮಂಡಿಹಾಳ, ನಾಗಲಾವಿ, ರಾಮಾಪುರ ಗ್ರಾಮಗಳಿಗೆ ಹೋಗುವ ರೈಲ್ವೆ ಮೇಲ್ಸೇತುವೆ.

ಸೇತುವೆ 5

ಈ ಸೇತುವೆ ಬಿರುಕು ಬಿಟ್ಟಿದ್ದು, ಮಳೆ ಬಂದಾಗ ನೀರು ಸೇತುವೆಯಿಂದ ಸೋರಲು ಶುರುವಾಗುತ್ತದೆ. ಒಂದುವೇಳೆ ಜೋರಾಗಿ ಮಳೆ ಬಂದಾಗ ವಾಹನ ಸವಾರರು ಸ್ವಲ್ಪ ಹೊತ್ತು ನಿಂತುಕೊಂಡು ಹೋಗಲೂ ಈ ಸೇತುವೆ ಕೆಳಗೆ ಅವಕಾಶವಿಲ್ಲ. ಅತ್ತ ಮೇಲಿನಿಂದಲೂ ಸೋರುವುದಲ್ಲದೇ, ಅಡಿಭಾಗದಲ್ಲಿರುವ ರಸ್ತೆಯಲ್ಲಿಯೂ ನೀರು ನಿಲ್ಲುತ್ತದೆ. ಹೀಗಾಗಿ ವಾಹನ ಸಂಚಾರಕ್ಕೂ ತೊಂದರೆ ಉಂಟಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ರಸ್ತೆಯುದ್ದಕ್ಕೂ ತೆಗ್ಗು ದಿನ್ನೆಗಳು, ನೀರಿನ ಗುಂಡಿಗಳಲ್ಲಿ ವಾಹನ ಸಂಚಾರ ಮಾಡುವ ವಾತಾವರಣ ನಿರ್ಮಾಣವಾಗಿದೆ. ಮತ್ತು ಈ ಸೇತುವೆ ಮುಗದ ರೈಲು ನಿಲ್ದಾಣಕ್ಕೆ ಸಂಬಂಧಪಟ್ಟಿರುವುದರಿಂದ ಮಂಡಿಹಾಳ ಗ್ರಾಮ ಪಂಚಾಯತಿ ವತಿಯಿಂದ ಸಮಸ್ಯೆ ಬಗೆಹರಿಸಲು ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ಈ ದಿನ. ಕಾಮ್ ಜೊತೆಗೆ ಮಂಡಿಹಾಳ ಗ್ರಾಮ ಪಂಚಾಯತ್ ಪಿಡಿಓ ನೀರಜ್ ಜಾಧವ್ ಮಾತನಾಡಿ, “ಈ ಸಮಸ್ಯೆ ಬಗ್ಗೆ ಮುಗದ ರೈಲ್ವೆ ನಿಲ್ದಾಣಾಧಿಕಾರಿಗಳಿಗೆ ಸಂಬಂಧಿಸಿರುವುದರಿಂ, ಕೂಡಲೇ ಸರಿಪಡಿಸುವಂತೆ ಮನವಿ ಸಲ್ಲಿಸಿ ವಿನಂತಿಸಿದ್ದೇವೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಯುವಂತೆ ನೋಡಿಕೊಳ್ಳುತ್ತೇವೆ. ಮತ್ತು ರಸ್ತೆ ದುರಸ್ತಿ ಕಾರ್ಯವನ್ನು ಸರಿಪಡಿಸುತ್ತೇವೆ” ಎಂದು ತಿಳಿಸಿದರು.

ರಸ್ತೆ 6

ಇನ್ನು ರಸ್ತೆ ಹಾಳಾಗಿ ವರ್ಷಗಳೇ ಕಳೆದರೂ ಲೋಕೋಪಯೋಗಿ ಇಲಾಖಾಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸುತ್ತಾರೆ.

ರಸ್ತೆ ದುರಸ್ತಿ ಮಾಡದ ಕಾರಣ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ವಾಹನ ಸವಾರರು ಬಿದ್ದು ಪರದಾಡುವಂತಾಗಿದ್ದು. ರಾತ್ರಿ ವೇಳೆ ಹಲವಾರು ಸವಾರರು ಬಿದ್ದು ಗಾಯಗೊಂಡಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ಗ್ರಾಮಸ್ಥರೋರ್ವರು ಮಾಹಿತಿ ನೀಡಿದರು.

ಕ್ಷೇತ್ರದ ಶಾಸಕ, ಮಂತ್ರಿಗಳು, ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳುವರೇ ಎಂದು ಗ್ರಾಮಸ್ಥರು ಕಾದು ನೋಡುತ್ತಿದ್ದಾರೆ.

ರಸ್ತೆ1 1
IMG 20240805 WA0207
ಶರಣಪ್ಪ ಗೊಲ್ಲರ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...